25.3 C
Karnataka
Tuesday, March 4, 2025

ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ವತಿಯಿ೦ದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹೋಬಳಿಯ ಸಹಯೋಗದಲ್ಲಿ ಮಾ. 7 ರಂದು ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಕೆಎಎಸ್ ರಾಜು ಮೊಗವೀರ ಉದ್ಘಾಟಿಸಲಿದ್ದಾರೆ.

ದ.ಕ. ಕಸಾಪ ಸಂಘಟನಾ ಕಾರ್ಯದರ್ಶಿ ಲಯನ್ ಚಂದ್ರಹಾಸ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದು ಕಾಲೇಜಿನ ಪ್ರಾಂಶುಪಾಲ ಪ್ರಾಧ್ಯಾಪಕ ಗಣಪತಿ ಗೌಡ ಅಧ್ಯಕ್ಷತೆ ವಹಿಸುವರು.

ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಿಲನ ಕೆ ಭರತ್ ಆಗಮಿಸಲಿದ್ದಾರೆ.

ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಎಲ್ ಲಕ್ಷ್ಮೀ ದೇವಿ, ಕಸಾಪ ಕೇಂದ್ರೀಯ ಕಾರ್ಯಕಾರಿ ಸಮಿತಿ ಬೆಂಗಳೂರು ಸದಸ್ಯ ಡಾ. ಮಾಧವ ಎಂ.ಕೆ, ಮಂಗಳೂರು ಘಟಕ ಕಸಾಪ ಅಧ್ಯಕ್ಷ ರೇಮಂಡ್ ಡಿಕುನ್ಹಾ ತಾಕೋಡೆ ಅವರೊಂದಿಗೆ ಸಂಘದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles