ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ಇನ್ಸಿಡೆಂಟ್ ಕಮಾಂಡರ್ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಬೇಕು. ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶನ ನೀಡಲಾಗಿದೆ. ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ 60 ವಾರ್ಡ್ಗಳಿಗೆ ಇಂಜಿನಿಯರ್ಗಳನ್ನು 223 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, 13 ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ಗಳಾಗಿ ನೇಮಿಸಲಾಗಿದೆ. ಜಿಲ್ಲೆಯ ಎಲ್ಲಾ ಇನ್ಸಿಡೆಂಟ್ ಕಮಾಂಡರ್ಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನಾ ನೀಡಲಾಗಿದೆ. ಜಿಲ್ಲೆಯಲ್ಲಿ 135 ಕಾಳಜಿ ಕೇಂದ್ರವನ್ನು ಗುರುತಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ಶಾಲೆ ಮತ್ತು ಅಂಗನವಾಡಿಗಳ ಹತ್ತಿರದ ಪ್ರದೇಶದಲ್ಲಿ ಅಪಾಯಕಾರಿ ಮರಗಳ ಕೊಂಬೆ ವಿದ್ಯುತ್ ತಂತಿಗಳಿದ್ದಲ್ಲಿ ಅವುಗಳ ಗುರುತಿಸಿದ್ದು, ಮೆಸ್ಕಾಂ ಮತ್ತು ಅರಣ್ಯ ಇಲಾಖೆಗೆ ತೆರವುಗೊಳಿಸಲು ನಿರ್ದೇಶನ ನೀಡಲಾಗಿದೆ. ಶಾಲೆಗಳ ಸುರಕ್ಷತೆಯ ಕುರಿತು ಇನ್ಸಿಡೆಂಟ್ ಕಮಾಂಡರ್, Pಖಇಆ ಇಟಿgiಟಿeeಡಿ ಮತ್ತು ಶಾಲಾ ಮುಖ್ಯೋಪಾಧ್ಯಾಯರು ಜಂಟಿ ಸಮೀಕ್ಷೆ ನಡೆಸಿ ಕಟ್ಟಡ ಸುರಕ್ಷತೆ ದೃಡೀಕರಣ ಪತ್ರವನ್ನು ನೀಡಲು ಸೂಚಿಸಿದೆ.
ಎನ್.ಡಿ.ಆರ್.ಎಫ್.,ಎಸ್.ಡಿ.ಆರ್.ಎಫ್ ತಂಡ
25 ಸಿಬ್ಬಂದಿಗಳ ಎನ್.ಡಿ.ಆರ್.ಎಫ್ ತಂಡವನ್ನು ಪುತ್ತೂರು ತಾಲೂಕಿನಲ್ಲಿ ಹಾಗೂ 10 ಸಿಬ್ಬಂದಿಗಳ ಎಸ್.ಡಿ.ಆರ್.ಎಫ್ ತಂಡವನ್ನು ಸುಬ್ರಮಣ್ಯದಲ್ಲಿ ನಿಯೋಜಿಸಲಾಗಿದೆ. ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯ ನಿರ್ವಹಿಸಲು 26 ಬೋಟ್, ಜೆ ಸಿ ಬಿ ಯಂತ್ರ, ಟಿಪ್ಪರ್, ಕ್ರೇನ್ ಇತ್ಯಾದಿ ಸನ್ನದ್ದ ಸ್ಥಿತಿಯಲ್ಲಿರಿಸಲಾಗಿದೆ.
ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ನಿಷೇಧಿಸಿದೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು / ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಅಪಾಯಕಾರಿ ಪ್ರದೇಶ ಮತ್ತು ಕಾಲುಸಂಕ ಸೇತುವೆಗಳನ್ನು ಗುರುತಿಸಿ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚಿಸಲಾಗಿದೆ. ವಿದ್ಯುತ್ ತಂತಿ ಹಾಗೂ ವಿದ್ಯುತ್ ಕಂಬದ ಹತ್ತಿರ ಸಾರ್ವಜನಿಕರು ಹೋಗದಂತೆ ಜಾಗ್ರತೆ ವಹಿಸುವುದು ಹಾಗೂ ಅಂತಹ ಅಪಾಯಕಾರಿ ತಂತಿ. ಕಂಬಗಳು ಕಂಡುಬಂದಲ್ಲಿ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕು. ಸಾರಿಗೆ ಪ್ರಾಧಿಕಾರ ಅಧಿಕಾರಿಗಳು ಮತ್ತು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕದಲ್ಲಿಟ್ಟುಕೊಂಡು ತುರ್ತು ಸಂದರ್ಭದಲ್ಲಿ ಅವಶ್ಯಕತೆ ಬಿದ್ದಲ್ಲಿ ಜನರನ್ನು ಸಾಗಿಸಲು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದು:- ಜಿಲ್ಲಾ ತುರ್ತು ಸೇವೆಗೆ ಟೋಲ್ ಫ್ರೀ ಸಂ. 24*7 ಕಂಟ್ರೋಲ್ ರೂಂ – 1077 / 0824-2442590, ಮಂಗಳೂರು ಮಹಾನಗರ ಪಾಲಿಕೆ – 0824-2220306 / 2220319, ಮಂಗಳೂರು ತಾಲೂಕು -0824-2220587, ಉಳ್ಳಾಲ- 0824-2204424, ಬಂಟ್ವಾಳ – 7337669102, ಪುತ್ತೂರು ತಾಲೂಕು – 08251-230349, ಬೆಳ್ತಂಗಡಿ ತಾಲೂಕು- 08256-232047, ಸುಳ್ಯ ತಾಲೂಕು – 08257- 231231, ಮೂಡಬಿದ್ರೆ ತಾಲೂಕು – 08258 238100, ಕಡಬ ತಾಲೂಕು – 08251 260435, ಮುಲ್ಕಿ ತಾಲೂಕು – 0824 2294496 ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
