22.8 C
Karnataka
Sunday, June 15, 2025

ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿ೦ದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಪರಿಶೀಲನೆ

ಮ೦ಗಳೂರು: ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿ ನಡೆಯುತ್ತಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣವನ್ನು ಪರಿಶೀಲಿಸಿದರು, ನಿಲ್ದಾಣ ಪುನರಾಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಎಲ್ಲಾ ಕಾರ್ಯಗಳು ಸಕಾಲದಲ್ಲಿ ಹಾಗೂ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಮೈಸೂರು ವಿಭಾಗದಲ್ಲಿ ನಡೆಯುತ್ತಿರುವ ವಿದ್ಯುದ್ದೀಕರಣ ಕಾಮಗಾರಿ ಹಾಗೂ ಕಾರ್ಯಾಚರಣೆಯ ಸುರಕ್ಷತೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ವಕ್ರಾಕೃತಿಗಳು, ಸೇತುವೆಗಳು ಮತ್ತು ಹಳಿ ನಿಯತಾಂಕಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು.

ಮಳೆಗಾಲದಲ್ಲಿ ಸುರಕ್ಷಿತ ಹಾಗೂ ಸುಗಮ ರೈಲು ಸಂಚಾರದ ದೃಷ್ಟಿಯಿಂದ ಘಾಟ್ ವಿಭಾಗದಲ್ಲಿನ ಸುರಂಗ ಕಾಮಗಾರಿಗಳಿಗೆ ವಿಶೇಷ ಮಹತ್ವವನ್ನು ಪರಿಶೀಲಿಸಿದರು.ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್, ಗತಿಶಕ್ತಿ ಮುಖ್ಯ ಯೋಜನಾ ವ್ಯವಸ್ಥಾಪಕ ಆನಂದ್ ಭಾರತಿ ಹಾಗೂ ಮೈಸೂರು ವಿಭಾಗದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles