ಮಂಗಳೂರು, ನಗರದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಬ್ಯಾಂಕ್ ಮಹಾ ಪ್ರಬಂಧಕ ಮಂಜುನಾಥ್ ಸಿಂಘಯ್ ಮುಖ್ಯ ಅತಿಥಿ ಯಾಗಿದ್ದರು.
ಬಳಿಕ ಮಾತನಾಡಿದ ಅವರು,ಯೋಗ ಅಭ್ಯಾಸದ ಮೂಲಕ ಉತ್ತಮ ಅರೋಗ್ಯ ಕಾಪಾಡಿ ಕೊಳ್ಳಬಹುದಾಗಿದೆ. ಮಾನಸಿಕ ಹಾಗೂ ದೈಹಿಕ ಅರೋಗ್ಯಕ್ಕೂ ಇದು ಸಹಕಾರಿ ಆಗಲಿದೆ ಎಂದು ಹೇಳಿದರು.
ಬ್ಯಾಂಕ್ ಡಿಜಿಎಂ ಶೈಲೆಂದ್ರ ನಾಥ್ ಶೀತ್, ಸಹಾಯಕ ಮಹಾ ಪ್ರಬಂಧಕರಾದ ತರುಣ್ ಕುಮಾರ್, ಮಹೇಶ್ ಪ್ರಕಾಶ್, ವಿಭಾಗಿಯ ಪ್ರಬಂಧಕ ವನಜ ಪ್ರಸಾದ್, ಮಾರ್ಕೆಟಿಂಗ್ ಮ್ಯಾನೇಜರ್ ವಿನೋದ್ ತಹಲ್ಯಾಣಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


