24.5 C
Karnataka
Thursday, April 30, 2026

ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಅವಕಾಶ

ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಇಲ್ಲಿನ ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ಹಾಗೂ ಶಾಶ್ವತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.
ಉಚಿತ ಕಾನೂನು ಸಲಹೆಗಾಗಿ 15100 ಗೆ ಕಾಲ್ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles