24.9 C
Karnataka
Thursday, April 30, 2026

ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು:‌ “ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

“ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ” ಎಂದು ತಿಳಿಸಿದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸಲ್ಮಾನರನ್ನು ಕರೆದಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆ” ಎಂದರು.

ಮುಂದಿನ ಐದು ವರ್ಷಗಳಿಗೆ ನಾನೇ ಸಿಎಂ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಯಾವುದೇ ಊಹಾಪೋಹ ಇಲ್ಲ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಕೇಳಿದಾಗ, “ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ” ಎಂದು ತಿಳಿಸಿದರು.

ಶಾಸಕ ಬಸವರಾಜು ಅವರು ಅಧಿಕಾರ ಒಪ್ಪಂದದ ಬಗ್ಗೆ ಸ್ಪಷ್ಟನೆ ಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ದೆಹಲಿಯವರು ಪ್ರತಿಕ್ರಿಯೆ ನೀಡಬೇಕು” ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles