24.7 C
Karnataka
Tuesday, April 8, 2025

ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಮ೦ಗಳೂರು: ಜಿಲ್ಲಾಡಳಿತ ಮತ್ತು ನೆಹರು ಯುವಕ ಕೇಂದ್ರ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ್ ಮಂಗಳೂರು ಸೋಮೇಶ್ವರ ಪಟ್ಟಣ ಪಂಚಾಯತ್ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಯುವಜನ ಸೇವಾ ಕ್ರೀಡಾ ಅಧಿಕಾರಿ ಪ್ರದೀಪ್ ಡಿಸೋಜ ,ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಮಹೇಶ್ ಅಂಬೆಕಲ್ , ನೆಹರು ಯುವಕ ಕೇಂದ್ರದ ಜಗದೀಶ್ ಸೈಂಟ್ ಅಗ್ನೆಸ್ ಕಾಲೇಜಿನ ಉದಯಕುಮಾರ್ ಶೆಟ್ಟಿ ಸೋಮೇಶ್ವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉಪಸ್ಥಿತರಿದ್ದರು. ವೀರ ಮಾರುತಿ ವ್ಯಾಯಾಮ ಶಾಲೆ ಮತ್ತು ಸ್ಪೋರ್ಟ್ಸ್ ಕ್ಲಬ್ ತೊಕ್ಕೊಟ್ಟು , ಯುವತಿ ಮಂಡಲ ಸೋಮೇಶ್ವರ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿ ಗಳು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles