ಮ೦ಗಳೂರು:ಲಾರಿಗೆ ಬಸ್ ಡಿಕ್ಕಿಯಾಗಿ ಪ್ರಯಾಣಿಕ ಮೃತಪಟ್ಟ ಘಟನೆ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ರವಿವಾರ ರಾತ್ರಿ ಸ೦ಭವಿಸಿದೆ.ಕಾರ್ಕಳ ನಿವಾಸಿ ಶಂಕರ ನಾರಾಯಣ ಮೃತಪಟ್ಟವರು.
ರವಿವಾರ ರಾತ್ರಿ ಸುಮಾರು 11.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರ್ಕಳ ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಸುಗಮ ಹೆಸರಿನ ಬಸ್ ಇಟಾಚಿಯನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿಯಾಗಿರುತ್ತದೆ. ಅಪಘಾತದ ಪರಿಣಾಮ ಬಸ್ ನಲ್ಲಿದ್ದ ಶಂಕರ ನಾರಾಯಣ ಎಂಬವರು ಮೃತಪಟ್ಟಿದ್ದಾರೆ.ಇತರ 8 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಳಾಗಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
