“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ "90 ಎಮ್ ಎಲ್" ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೋವಾ ಘಟಕ ಉದ್ಘಾಟನೆ
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 39 ನೇ ಗೋವಾ ಘಟಕವನ್ನು ಪಣಜಿ ಇನ್ಸಿಟ್ಯೂಟ್...
ಜ. 26 ರಂದು “ಕೋಳಿ ಎಸ್ರು” ಮತ್ತು “ಹದಿನೇಳೆಂಟು” ಸಿನಿಮಾ ಬಿಡುಗಡೆ
ಮಂಗಳೂರು: ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳು ಈ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಹೆಸರು ತಂದು ಕೊಟ್ಟಿರುವಂತಹ ಎರಡು ಚಿತ್ರಗಳು. ಜನವರಿ 26 ರಂದು ಈ ಎರಡೂ ಚಿತ್ರಗಳು ಕರ್ನಾಟಕದಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರಾದ ಚಂಪಾ ಶೆಟ್ಟಿ ಮತ್ತು ಪೃಥ್ವಿ...
ಪಯಣ್ʼ ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಟೈಟಲ್ ಅನಾವರಣ
ಮ೦ಗಳೂರು: ಕಳೆದ 55 ವರ್ಷಗಳಿಂದ ದೇಶ-ವಿದೇಶಗಳಲ್ಲಿ 110ಕ್ಕೂ ಮಿಕ್ಕಿ ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿ, ಕೊಂಕಣಿ ಜನರ ಮನೆ ಮಾತಾಗಿರುವ ಹೆಸರಾಂತ ಗಾಯಕ, ಗೀತೆ ರಚನೆಗಾರ ಮೆಲ್ವಿನ್ ಪೆರಿಸ್ರವರ ಚೊಚ್ಚಲ ಕೊಂಕಣಿಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಮುಹೂರ್ತವು ಫೆಬ್ರವರಿ 11ರಂದು ಕುಲಶೇಖರಚರ್ಚಿನ ಮಿನಿ ಸಭಾಂಗಣದಲ್ಲಿ ನೆರವೇರಿತು.ʻಸಂಗೀತ್ ಘರ್ ಪ್ರೊಡಕ್ಶನ್ಸ್ʼ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುವ ಈ ಚಲನಚಿತ್ರದ...
ಡಿ.14-17 : ಆಳ್ವಾಸ್ ವಿರಾಸತ್; ‘ಸಪ್ತ ಮೇಳ’ಗಳ ಮೆರುಗು
ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ 'ಆಳ್ವಾಸ್ ವಿರಾಸತ್ 2023' ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಆಳ್ವಾಸ್ ವಿರಾಸತ್-23'ಕ್ಕೆ 'ಸಪ್ತ ಮೇಳ'ಗಳ ಮೆರುಗಿನ ಜೊತೆ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ...
ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು...
ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಬಿಡುಗಡೆ
ಮಂಗಳೂರು: ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದೆ.ಖ್ಯಾತ ನಟ ಡಾಲಿ ಧನಂಜಯ ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ರವಿಕೆ ಅಂದರೆ...
ಫೆ.21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ!
ಮಂಗಳೂರು: ”ಒಲವಿನ ಪಯಣ ಸಿನಿಮಾ ಫೆ.21ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಫ್ಯಾಮಿಲಿ ಒರಿಯೆಂಟೆಡ್ ಸಿನಿಮಾ ಇದಾಗಿದ್ದು ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಎಲ್ಲ ಅಂಶಗಳು ಸಿನಿಮಾದಲ್ಲಿ ಇರಲಿವೆ“ ಎಂದು ಚಿತ್ರದ ನಿರ್ದೇಶಕ ಕಿಶನ್ ಬಲ್ನಾಡ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಒಲವಿನ ಪಯಣ ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ...
ಶ್ರೀ ಲಲಿತೆ ಯ “ಶನಿ ಮಹಾತ್ಮೆ ” ನಾಟಕ ಮುಹೂರ್ತ
ಮಂಗಳೂರು: "ರಂಗ ಸವ್ಯಸಾಚಿ ಕಿಶೋರ್ ಡಿ ಶೆಟ್ಟಿ ನೇತೃತ್ವದ ಶ್ರೀ ಲಲಿತೆ ಕಲಾವಿದರು (ರಿ ) ತಂಡದ ಮೂಲಕ ಪ್ರದರ್ಶನ ಕಾಣಲಿರುವ "ಶನಿ ಮಹಾತ್ಮೆ " ತುಳು ಪೌರಾಣಿಕ ನಾಟಕವು ತುಳು ರಂಗ ಭೂಮಿಯಲ್ಲಿ ಸಂಚಲನ ಉಂಟು ಮಾಡಲಿದೆ " ಎಂದು ಕದಿರೆಯ ಕಲಾವಿದರು ಸಂಸ್ಥೆಯ ಅಧ್ಯಕ್ಷ ಗೋಕುಲ್ ಕದ್ರಿ ಹೇಳಿದರು.ಕದ್ರಿ ಯಲ್ಲಿ ಜರಗಿದ...
ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ “ಆರಾಟ” ಸಿನಿಮಾ ಪ್ರದರ್ಶನಕ್ಕೆ ಆಯ್ಕೆ
ಮಂಗಳೂರು: ಪಿಎನ್ಆರ್ ಪ್ರೊಡಕ್ಷನ್ ನ ತಿಂಬರ ರಾಘವೇಂದ್ರ ಹೊಳ್ಳ ನಿರ್ಮಾಣದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಚಲನಚಿತ್ರವು ಮಾರ್ಚ್ 1 ರಿಂದ 8 ರ ತನಕ ನಡೆಯುವ ಹದಿನಾರನೇ ಬೆಂಗಳೂರು ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಕನ್ನಡ ವಿಭಾಗದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿರುತ್ತದೆ. ಆರಾಟ ಚಿತ್ರವು ಕಳೆದ ಜೂನ್ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ...










