ಒಂದು ತಿಂಗಳೊಳಗೆ ಬಸ್ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು...
ಬಿಜೆಪಿ ಯುವ ಮೋರ್ಚಾಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಮ೦ಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯರವರ ನೇತೃತ್ವದಲ್ಲಿ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.ಜಿಲ್ಲಾ ಯುವ ಮೋಚ ಪ್ರಧಾನ ಕಾರ್ಯದರ್ಶಿಗಳಾದ ಭರತರಾಜ್, ಉಮೇಶ್ ಕುಲಾಲ್,...
ಸುರತ್ಕಲ್: ನಾಪತ್ತೆಯಾಗಿದ್ದ ವಿದ್ಯಾರ್ಥಿಗಳ ಮೃತದೇಹ ನದಿಯಲ್ಲಿ ಪತ್ತೆ
ಮ೦ಗಳೂರು: ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಡ್ಯಾಂ ಬಳಿ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ರಾಘವೇಂದ್ರ(15), ನಿರೂಪ(15), ಅನ್ವಿತ್(15) ಎಂದು ಗುರುತಿಸಲಾಗಿದೆ.ವಿದ್ಯಾರ್ಥಿಗಳು ಸುರತ್ಕಲ್ನ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದಿದ್ದರು. ಬಳಿಕ ಶಾಲೆಯಿ೦ದ 1:30ರ ವೇಳೆಗೆ ತೆರಳಿದ್ದ ವಿದ್ಯಾರ್ಥಿಗಳು...
ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ವಾರದ ಎಫ್.ಡಿ.ಪಿ
ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ- ಎಟಿಎಎಲ್ ಸಹಯೋಗದೊಂದಿಗೆ, ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ಇಮೇಜ್ ಪ್ರೊಸೆಸಿಂಗ್” ಕುರಿತ ಒಂದು ವಾರದ ಭೋಧಕರ ಅಭಿವೃದ್ಧಿ ಕಾರ್ಯಕ್ರಮ (ಎಫ್.ಡಿ.ಪಿ) ಆಯೋಜಿಸಲಾಯಿತು.ಕಾರ್ಯಕ್ರಮ ಸಂಯೋಜಿಸಿದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕಾರ್ಯಕ್ರಮದ ಉದ್ದೇಶ ಹಾಗು ಮಹತ್ವದ ಬಗ್ಗೆ...
ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ
ಮಂಗಳೂರು: ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರು ಹೇಳಿದರು.ಅವರು ಮಂಗಳವಾರ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ...
ಬೀದಿಬದಿ ವ್ಯಾಪಾರಿಗಳಿಗೆ ಸಾಲ: ಇಂದು ಪಿಎಂ ಸ್ವನಿಧಿ ಸಮೃದ್ಧಿ ಮೇಳ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಬರ ನಿಧಿ, ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಸೌಲಭ್ಯ ಒದಗಿಸುವ ಸ್ವ್ವನಿಧಿ ಸಮೃದ್ಧಿ ಮೇಳವನ್ನು ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ನಗರದÀ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ...
ಲೋಕೋಪಯೋಗಿ ಇಲಾಖೆ: ಫೆ. 29 ರಿಂದ ರಸ್ತೆ ಸಂಚಾರ ಸಮೀಕ್ಷೆ
ಮಂಗಳೂರು:ಲೋಕೋಪಯೋಗಿ ಇಲಾಖೆಯಿಂದ 2024 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆ ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ...
ಮಾ. 1 ರಿಂದ ಜಾನಪದ ಕಡಲೋತ್ಸವ
ಮಂಗಳೂರು: ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್ ಚ೦ದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ....
ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 110 ನೆ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಬಿಜೆಪಿ, ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಕಾರ್ಮಿಕರನ್ನು ಸನ್ಮಾನಿಲಾಯಿತು. ರಾಜ್ಯ...
ಫಾತಿಮಾ ರಲಿಯಾ ಕವನ ಸಂಕಲನ ಬಿಡುಗಡೆ
ಮ೦ಗಳೂರು: ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ 'ಅವಳ ಕಾಲು ಸೋಲದಿರಲಿ' ಕವನ ಸಂಕಲನವನ್ನು ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರು ಬಿಡುಗಡೆಗೊಳಿಸಿದರು.ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ...







