ಚೇಳಾರ್ ನಲ್ಲಿ ಆದಿತ್ಯ ಮುಕ್ಕಾಲ್ದಿಯವರಿಗೆ ನುಡಿ ನಮನ
ಸುರತ್ಕಲ್: ಚೇಳಾರ್ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಗಡಿ ಪ್ರಧಾನರಾದ ಖಂಡಿಗೆ ಬೀಡು ಆದಿತ್ಯ ಮುಕ್ಕಾಲ್ದಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಗೌರವಾರ್ಥ ಸಾರ್ವಜನಿಕ ನುಡಿನಮನ ಕಾರ್ಯಕ್ರಮವು ಚೇಳಾರ್ ಖಂಡಿಗೆ ಬೀಡು ಶ್ರೀ ಧರ್ಮರಸು ದೈವಸ್ಥಾನದಲ್ಲಿ ನಡೆಯಿತು.ಪಣಿಯೂರು ಗುತ್ತು ಕರುಣಾಕರ ಶೆಟ್ಟಿ ಮಾತನಾಡಿ ಆದಿತ್ಯ ಮುಕ್ಕಾಲ್ದಿ ಅವರು ಮುವತ್ತು ವರ್ಷಗಳ ಕಾಲ ಗಡಿ...
ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ
ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ್ಕಳಿಗೆ ಕ್ರೈಸ್ತ ಶಿಕ್ಷಣ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಶುಭ ಹಾರೈಸಿದರು....
ಪಂಚಾಯತ್ ರಾಜ್ ಜನಪ್ರತಿನಿಧಿಗಳಿಗೆ “ಹೊ೦ಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು
ಮ೦ಗಳೂರು: ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾನಸಿಕ ನೆಮ್ಮದಿ ಹಾಗೂ ಸೌಹಾರ್ದ ಸಂಬಂಧಗಳನ್ನು ಬೆಳೆಸುವ ಉದ್ದೇಶದಿಂದ ಗ್ರಾಮ ಸ್ವರಾಜ್ ಟ್ರಸ್ಟ್ (ರಿ) ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಗಳು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರದೊಂದಿಗೆ"ಹೊಂಬೆಳಕು" ಎನ್ನುವ ನಾಮಂಕಿತದೊಂದಿಗೆ...
ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮಂಗಳಗಂಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ ನಡೆಸಲಾಯಿತು.ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ...
ಬಂಟವಾಳ ರೈಲು ನಿಲ್ದಾಣ: 28.49 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿ
ಮ೦ಗಳೂರು: ಮೈಸೂರು ವಿಭಾಗದ ಬಂಟವಾಳ ರೈಲು ನಿಲ್ದಾಣವನ್ನು ‘ಎಬಿಎಸ್ಎಸ್’ ಯೋಜನೆಯಡಿ 28.49 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲು ಆಯ್ದುಕೊಳ್ಳಲಾಗಿದೆ ,ಫೆಬ್ರವರಿ26 ರಂದು ಬಂಟವಾಳ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಲಿದೆ.ಕಾರ್ಯಕ್ರಮವು 10:45 ಗಂಟೆಗೆ ಪ್ರಾರಂಭವಾಗಲಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್’ ಮೂಲಕ 12:30 ಗಂಟೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್...
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ
ಮಂಗಳೂರು: ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು,...
ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
ಬೆಂಗಳೂರು:ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ...
ಫೆ.28ರಂದು ಮೇಯರ್ ಪೋನ್-ಇನ್
ಮಂಗಳೂರು: ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ವೇಣೂರು ಮಸ್ತಕಾಭಿಷೇಕ : ವಾಹನ ಸಂಚಾರ ಮಾರ್ಗ ಬದಲಾವಣೆ ಆದೇಶ
ಮಂಗಳೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ.ಆದ್ದರಿಂದ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ ಮೂಡಬಿದ್ರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ,...
ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ; ಸವಾರ ಸಾವು
ಪುತ್ತೂರು: ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿಸ೦ಭವಿಸಿದೆ. ತೇಜಸ್ . ಪಿ (24) ಮೃತಪಟ್ಟ ಸ್ಕೂಟರ್ ಸವಾರ. ಸಹಸವಾರ ಪವನ್ ಕುಮಾರ್ (26) ಗಂಭೀರ ಗಾಯಗೊಂಡವರು.ತೇಜಸ್ ಅವರು ಪವನ್ ಕುಮಾರ್ ಅವರನ್ನು ಸ್ಕೂಟರ್ ನಲ್ಲಿ...





