ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ
ಮಂಗಳೂರು: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣ ರಿಗೆ...
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ:ಆದಾಯ ಪ್ರಮಾಣ ಪತ್ರ ಅಪ್ಲೋಡ್ ಫೆ.29 ಕೊನೆಯ ದಿನ
ಮಂಗಳೂರು: ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ.
2023-24 ನೇ ಸಾಲಿನಲ್ಲಿ ಇತರೆ ಇಲಾಖೆಗಳ ( ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ...
ವಿಧಾನ ಸಭಾ ಕಲಾಪ ವೀಕ್ಷಿಸಿದ ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು
ಸುಳ್ಯ,: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು.ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ್ಲಿ ಶಾಲೆಯ 14 ಮಂದಿ ಪುಟಾಣಿಗಳು ವಿಧಾನ ಸಭಾ ಕಲಾಪ ವೀಕ್ಷಿಸಿದರು. ಅದಕ್ಕೂ ಸಭಾಧ್ಯಕ್ಷ...
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ
ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು.ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ...
ಶ್ರೀನಿವಾಸ ವಿಶ್ವವಿದ್ಯಾಲಯ: ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾ ಮೆರವಣಿಗೆ
ಮ೦ಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಎ. ಶಾಮ ರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಸಮೂಹಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರಿನ ವಳಚ್ಚಿಲ್ನಲ್ಲಿರುವ ಪ್ರಶಾಂತ ಶ್ರೀನಿವಾಸ ಕ್ಯಾಂಪಸ್ನಲ್ಲಿರುವ ವೈಕುಂಠದಲ್ಲಿ ಭವ್ಯವಾದ ಆಧ್ಯಾತ್ಮಿಕ ಕೂಟ ನಡೆಯಿತು. ಕಾರ್ಯಕ್ರಮವು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಗೆ ಸಾಕ್ಷಿಯಾಯಿತು. ನವಗ್ರಹ ಶಾಂತಿ ಹೋಮ, ಚಕ್ರಾಬ್ಜ ಮಂಡಲಪೂಜೆ, ಲಕ್ಷ್ಮೀ ನಾರಾಯಣ ಹೋಮ, ವಾಯುಸ್ತುತಿ...
ಫೆ. 24ರಂದು ಫಾತಿಮಾ ರಲಿಯಾ ಅವರ ಕವನ ಸಂಕಲನ ಬಿಡುಗಡೆ
ಮ೦ಗಳೂರು: ಫಾತಿಮಾ ರಲಿಯಾ ಅವರ ಕವನ ಸಂಕಲನ 'ಅವಳ ಕಾಲು ಸೋಲದಿರಲಿ' ಶನಿವಾರ ಸಂಜೆ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ...
ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ: ಕುದ್ರೋಳಿ ಗಣೇಶ್ ಮನವಿ
ಮಂಗಳೂರು : ಮನರಂಜನೆ ಜತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ವಿನಂತಿಸಿದ್ದಾರೆ.ನಗರದ...
ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ
ಮ೦ಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.ರೈಲ್ವೆ ಮಂಡಳಿ ಬುಧವಾರ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ...
ವೀರರಾಣಿ ಅಬ್ಬಕ್ಕ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಉಳ್ಳಾಲ : ಫೆಬ್ರವರಿ 24ರ೦ದು ಉಳ್ಳಾಲ ನಗರಸಭೆಯ ಮಹಾತ್ಮಗಾಂಧಿ ರಂಗಮಂದಿರದಲ್ಲಿ ನಡೆಯಲಿರುವ 2023-24ರ ವೀರರಾಣಿ ಅಬ್ಬಕ್ಕ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮಾಜಿಶಾಸಕರು ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿಯವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಸದಸ್ಯರು ಊರಿನ ಸಂಘಸಂಸ್ಥೆ, ಮಹಿಳಾ ಒಕ್ಕೂಟ ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ ಉಳ್ಳಾಲದ...
ಮಾವಿನ ಕಾಯಿ ಕೊಯ್ಯುತ್ತಿರುವಾಗ ಮರದಿ೦ದ ಬಿದ್ದು ಸಾವು
ಉಪ್ಪಿನಂಗಡಿ : ಮರಕ್ಕೆ ಹತ್ತಿ ಮಾವಿನ ಕಾಯಿ ಕೊಯ್ಯುತ್ತಿರುವ ಸಮಯ ಹಿಡಿತ ತಪ್ಪಿ ಕೆಳಗೆ ಬಿದ್ದು ರಮೇಶ ಎ೦ಬವರು ಮೃತಪಟ್ಟ ಘಟನೆ ನೆಲ್ಯಾಡಿಯಲ್ಲಿ ಸ೦ಭವಿಸಿದೆ. ರಮೇಶ್ ಅವರಲ್ಲಿ 10 ವರ್ಷದ ಮಗಳು ಮಾವಿನ ಕಾಯಿಯನ್ನು ಕೊಯಿದು ಕೊಡುವಂತೆ ಕೋರಿದ್ದಳು. ಅದರ೦ತೆ ರಮೇಶ್ ಪಕ್ಕದಲ್ಲಿದ್ದ ಮಾವಿನ ಮರಕ್ಕೆ ಹತ್ತಿ ಮಾವಿನ ಕಾಯಿಯನ್ನು ದೊಂಟಿಯ ಸಹಾಯದಿಂದ ಬಡಿದು...








