ಎಚ್ಪಿಸಿಎಲ್ ಮುಷ್ಕರ ವಾಪಾಸ್
ಮಂಗಳೂರು:ಸುರತ್ಕಲ್ ಎಚ್ಪಿಸಿಎಲ್ ಸಂಸ್ಥೆಯಲ್ಲಿ ಎಲ್ಪಿಜಿ ಬುಲೆಟ್ ಟ್ಯಾಂಕರ್ ಕ್ಲೀನರ್ಗಳ ಸಂಬಳ ವಿವಾದದಲ್ಲಿ ನಡೆಯುತ್ತಿದ್ದ ಮುಷ್ಕರ ಹಿಂಪಡೆಯಲಾಗಿದೆ.ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಷ್ಕರ ಹಿಂಪಡೆದು, ನಾಳೆಯಿಂದ ಬುಲೆಟ್ ಟ್ಯಾಂಕರ್ಗಳಿಗೆ ಅಡುಗೆ ಅನಿಲ ಲೋಡಿಂಗ್ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಕ್ಲೀನರ್ಗಳಿಗೆ ಪ್ರತಿ ಟ್ರಿಪ್ಗೆ ರೂ. 900...
ಬಳ್ಪ ಸಂಸದರ ಆದರ್ಶ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ:ಕೇಂದ್ರ ಸಚಿವ ಭಗವಂತ್ ಖೂಬ
ಮಂಗಳೂರು:ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಶ್ಲಾಘಿಸಿದರು.ಅವರು ಬುಧವಾರ ಬಳ್ಪ-ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯ ದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ...
ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ
ಮಂಗಳೂರು:ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ಮನಪರಿವರ್ತನೆಗಾಗಿ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮದಲ್ಲಿ ಮಾತನಾಡಿದರು. ಜೈಲಿನಲ್ಲಿ ಖೈದಿಗಳೇ ವಿವಿಧ...
ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೋಮೋ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮಾಸಿಕ ರೂ.1,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ.12ರ...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು: ಶ್ರೀ ರಾಮ ವೈಭವ ಕಾರ್ಯಕ್ರಮ ಉದ್ಘಾಟನೆ
ಮಂಗಳೂರು: ವಿಭಿನ್ನ ಪರಂಪರೆಯನ್ನು ಹೊಂದಿರುವ ಭರತ ಖಂಡವನ್ನು ಆಳಿದ ಅದೆಷ್ಟೋ ಪುಣ್ಯಾತ್ಮರು ಭವ್ಯ ಪರಂಪರೆಯನ್ನು ಈ ಮಣ್ಣಿಗೆ ಅರ್ಪಿಸಿದ್ದಾರೆ.ಅಯೋಧ್ಯೆಯನ್ನು ಆಳಿದ ಶ್ರೀರಾಮ ಕೇವಲ ರಾಜನಾಗಿರಲಿಲ್ಲ;ಧರ್ಮಪ್ರಜ್ಞೆಯ ದ್ಯೋತಕನಾಗಿದ್ದನು. ಭಾರತಕ್ಕೆ ಶ್ರೀರಾಮ ಹೆಸರೇ ಸಕಲರನ್ನು ಒಂದುಗೂಡಿಸುವಂತೆ,ಧರ್ಮದ ಜಾಗೃತಿಯನ್ನು ಎಚ್ಚರಿಸಿ ಭಕ್ತಿಯ ಪರಾಕಾಷ್ಠೆಯಲ್ಲಿ ಮಿಂದೇಳುವ ಅಪರಿಮಿತ ಆನಂದವನ್ನು ಉಂಟುಮಾಡುತ್ತದೆ ಎಂದು ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು...
ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್ನಿಂದ 5 ಲಕ್ಷ ರೂ.ದೇಣಿಗೆ
ಮಂಗಳೂರು : ದ.ಕ.ಜಿಲ್ಲಾಧಿಕಾರಿ ಕಚೇರಿ ಸಮೀಪ ನಿರ್ಮಾಣವಾಗುತ್ತಿರುವ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ 5 ಲಕ್ಷ ರೂ.ದೇಣಿಗೆ ನೀಡಿದೆ. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅವರು ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್...
ಜ.20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ
ಮಂಗಳೂರು: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನಮೇಳ ಜ.20 ಹಾಗೂ 21ರಂದು ಸವಣೂರಿನ...
ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣ: ಡಿಸಿ ಸೂಚನೆ
ಮ೦ಗಳೂರು: ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು.ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ದಿದ್ದು, ಫುಡ್ ಕೋರ್ಟ್ ಗಳಿಗೆ ಪ್ರತ್ಯೇಕ ಘಟಕ ವನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್ ರಸ್ತೆ ಗಳನ್ನು...
ಅಮೃತರು ಸಾಹಿತ್ಯ ಲೋಕದ ಮೇರು ಪರ್ವತ:ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ
ಮಂಗಳೂರು : ಕಾವ್ಯ,ಕಥೆ,ನಾಟಕ, ಯಕ್ಷಗಾನ ಸಹಿತ ಸಾರಸ್ವತ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಅಮೃತ ಸೋಮೇಶ್ವರ ಅವರು ಸಾಹಿತ್ಯ ಲೋಕದ ಮೇರು ಪರ್ವತ. ಸದಾ ಹೊಸತನವನ್ನು ನಿರೂಪಿಸಿದ ಅಮೃತರು ರಾಷ್ಟ್ರ ಕವಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಎಂದು ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ ಹೇಳಿದರು.ಅಗಲಿದ ಹಿರಿಯ ಜಾನಪದ ತಜ್ಞ ಅಮೃತ ಸೋಮೇಶ್ವರ ಅವರಿಗೆ ಅಖಿಲ ಭಾರತೀಯ...
ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಭಟ್, ಸ್ಪರ್ಧಾತ್ಮಕ ಜಗತ್ತಿಗೆ ಅಂಕಗಳ ಜೊತೆಗೆ ಉದ್ಯೋಗಕೌಶಲಗಳು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ವಿಶೇಷ ಉಪನ್ಯಾಸದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಂಡರು....