35.2 C
Karnataka
Sunday, May 3, 2026

ಸುದ್ದಿ

ಜುಲೈ 29 : ತ್ರೈಮಾಸಿಕ ಕೆ.ಡಿ.ಪಿ ಸಭೆ

0
ಮಂಗಳೂರು,ಜು.19: 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯು, ಜುಲೈ 29ರಂದು ಸೋಮವಾರ ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ‌

0
ಮಂಗಳೂರು:2024-25ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ ಮತ್ತು ಇಂಗ್ಲಿಷ್ ಹಾಗೂ ಲೈಬ್ರೆರಿ ಅಂಡ್ ಇನ್‍ಪೋರ್‍ಮೇಶನ್ ಸೈನ್ಸ್ ಕೋರ್ಸುಗಳಿಗೆ ಸೇರಲು ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್...

ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ರಾತ್ರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

0
ಮ೦ಗಳೂರು:ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ಭೂಕುಸಿತ/ಗುಡ್ಡ ಕುಸಿತ ಉಂಟಾಗುವ ಸಂಭವದ ಹಿನ್ನಲೆಯಲ್ಲಿ ವಾಹನಗಳ ಸಂಚಾರನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ - 275ರಲ್ಲಿ, ಸಂಪಾಜೆಯಿಂದ ಮಡಿಕೇರಿ ವರೆಗಿನ ಕೆಲಪ್ರದೇಶಗಳಲ್ಲಿ ಭೂಕುಸಿತ/ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಸದ್ರಿ ಮಾರ್ಗವಾಗಿ ಸಾಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು (ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ...

ಸೇತುವೆ ದುರ್ಬಲ : ರಸ್ತೆ ಬದಲಾವಣೆ

0
ಮಂಗಳೂರು:ಲೋಕೋಪಯೋಗಿ ಇಲಾಖೆ ಪುತ್ತೂರು ಉಪವಿಭಾಗ ವ್ಯಾಪ್ತಿಗೆ ಒಳಪಡುವ ಪುತ್ತೂರು ತಾಲೂಕು ಮುಡುಪಿನಡ್ಕ, ಈಶ್ವರಮಂಗಳ, ಪಾಂಚೋಡಿ, ಗಾಳಿಮುಖ ಜಿಲ್ಲಾ ಮುಖ್ಯ ರಸ್ತೆ 13.60 ಕಿ.ಮೀ ಕರ್ನೂರು ಕೋಟಿಗದ್ದೆ ಎಂಬಲ್ಲಿ ಸುಮಾರು 40 ವರ್ಷ ಹಳೆಯ ಸೇತುವೆ ದುರ್ಬಲವಾಗಿದೆ.ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಬರ್ಂಧಿಸಿ, ಮಾರ್ಗ ಬದಲಾವಣೆ ಮಾಡಿ ಪಲ್ಲತ್ತೂರು,...

ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಸಂಯೋಜಕರ ನೇಮಕ

0
ಮ೦ಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಕೆಪಿಸಿಸಿ ಕಾರ್ಯಕ್ರಮ ಅನುಷ್ಠಾನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ವಿವಿಧ ಬ್ಲಾಕ್ಕಾಂಗ್ರೆಸ್ ಸಮಿತಿಗಳಿಗೆ ಬ್ಲಾಕ್‌ವಾರು ಸಂಯೋಜಕರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇಮಿಕ ಮಾಡಿದ್ದಾರೆ.ಬೆಳ್ತಂಗಡಿ ನಗರ ಬ್ಲಾಕ್ - ಸುರೇಶ್ ನಾವೂರ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ -...

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಸಚಿವ ವಿ. ಸೋಮಣ್ಣ ಭೇಟಿ

0
ಮ೦ಗಳೂರು: ಮಂಗಳೂರಿಗೆ ಬುಧವಾರ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಬೆಳಿಗ್ಗೆಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು...

ಸೋನೆ ಮಳೆ- ಹಸಿರು ಇಳೆ ಕವಿಗೋಷ್ಠಿ

0
ಮಂಗಳೂರು : ಮರಗಳು ಬಿಸಿಲಿಗೆ ಬಾಡಿದರೂ ತಂಪಾದ ನೆರಳು ನೀಡುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವ ಬದುಕಿಗೆ ನೆರವಾಗುತ್ತಿರುವ ಪ್ರಕೃತಿಯಿಂದ ನಾವು ಪ್ರೇರಣೆ ಪಡೆಯಬೇಕು. ಪರರಿಗೆ ನೆರಳಾಗುವ ಬದುಕು ನಮ್ಮದಾಗಬೇಕು ಎಂದು ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ...

ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರ

0
ಮಂಗಳೂರು: ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ...

ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ:ಮೋಹನ್‌ದಾಸ್ ಕಾಮತ್ ಮಂಜೇಶ್ವರ

0
ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ. ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್‌ದಾಸ್ ಕಾಮತ್ ಮಂಜೇಶ್ವರ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್...

ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಪ್ರತಿಷ್ಠಿತ ಐ.ಎಸ್.ಒ.ಮಾನ್ಯತೆ

0
ಮಂಗಳೂರು: ಮಂಗಳೂರಿನ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಪ್ರಾಯೋಜಿತ ಬೆಂಜನ ಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಪ್ರತಿಷ್ಠಿತ ಐ.ಎಸ್.ಒ. 9001:2015 ಮತ್ತು ಐ.ಎಸ್.ಒ.21001: 2018 ಪ್ರಮಾಣಪತ್ರದ ಮಾನ್ಯತೆ ಲಭಿಸಿದೆ. ಕಾಲೇಜಿನ ಮೂರುಕೋರ್ಸುಗಳಿಗೆ 2022 ರಲ್ಲಿ ಎನ್.ಬಿ.ಎ ಮಾನ್ಯತೆ ,2023ರಲ್ಲಿ ನ್ಯಾಕ್ ಎಕ್ರೆಡಿಟೇಶನ್ ನಲ್ಲಿ ಎ ಗ್ರೇಡ್ ಮಾನ್ಯತೆ ಬಳಿಕ ಇದೀಗ ಕಾಲೇಜು ಮತ್ತೊಂದು ಮಹತ್ವದ ಸಾಧನೆ ದಾಖಲಿಸಿ...