ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ
ಮಂಗಳೂರು: ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರು ಹೇಳಿದರು.ಅವರು ಮಂಗಳವಾರ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ...
ಬೀದಿಬದಿ ವ್ಯಾಪಾರಿಗಳಿಗೆ ಸಾಲ: ಇಂದು ಪಿಎಂ ಸ್ವನಿಧಿ ಸಮೃದ್ಧಿ ಮೇಳ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಬರ ನಿಧಿ, ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಸೌಲಭ್ಯ ಒದಗಿಸುವ ಸ್ವ್ವನಿಧಿ ಸಮೃದ್ಧಿ ಮೇಳವನ್ನು ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ನಗರದÀ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ...
ಲೋಕೋಪಯೋಗಿ ಇಲಾಖೆ: ಫೆ. 29 ರಿಂದ ರಸ್ತೆ ಸಂಚಾರ ಸಮೀಕ್ಷೆ
ಮಂಗಳೂರು:ಲೋಕೋಪಯೋಗಿ ಇಲಾಖೆಯಿಂದ 2024 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆ ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ...
ಮಾ. 1 ರಿಂದ ಜಾನಪದ ಕಡಲೋತ್ಸವ
ಮಂಗಳೂರು: ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್ ಚ೦ದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ....
ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 110 ನೆ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಬಿಜೆಪಿ, ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಕಾರ್ಮಿಕರನ್ನು ಸನ್ಮಾನಿಲಾಯಿತು. ರಾಜ್ಯ...
ಫಾತಿಮಾ ರಲಿಯಾ ಕವನ ಸಂಕಲನ ಬಿಡುಗಡೆ
ಮ೦ಗಳೂರು: ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ 'ಅವಳ ಕಾಲು ಸೋಲದಿರಲಿ' ಕವನ ಸಂಕಲನವನ್ನು ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರು ಬಿಡುಗಡೆಗೊಳಿಸಿದರು.ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ...
ಚೇಳಾರ್ ನಲ್ಲಿ ಆದಿತ್ಯ ಮುಕ್ಕಾಲ್ದಿಯವರಿಗೆ ನುಡಿ ನಮನ
ಸುರತ್ಕಲ್: ಚೇಳಾರ್ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಗಡಿ ಪ್ರಧಾನರಾದ ಖಂಡಿಗೆ ಬೀಡು ಆದಿತ್ಯ ಮುಕ್ಕಾಲ್ದಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಗೌರವಾರ್ಥ ಸಾರ್ವಜನಿಕ ನುಡಿನಮನ ಕಾರ್ಯಕ್ರಮವು ಚೇಳಾರ್ ಖಂಡಿಗೆ ಬೀಡು ಶ್ರೀ ಧರ್ಮರಸು ದೈವಸ್ಥಾನದಲ್ಲಿ ನಡೆಯಿತು.ಪಣಿಯೂರು ಗುತ್ತು ಕರುಣಾಕರ ಶೆಟ್ಟಿ ಮಾತನಾಡಿ ಆದಿತ್ಯ ಮುಕ್ಕಾಲ್ದಿ ಅವರು ಮುವತ್ತು ವರ್ಷಗಳ ಕಾಲ ಗಡಿ...
ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ
ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ್ಕಳಿಗೆ ಕ್ರೈಸ್ತ ಶಿಕ್ಷಣ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಶುಭ ಹಾರೈಸಿದರು....
ಪಂಚಾಯತ್ ರಾಜ್ ಜನಪ್ರತಿನಿಧಿಗಳಿಗೆ “ಹೊ೦ಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು
ಮ೦ಗಳೂರು: ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾನಸಿಕ ನೆಮ್ಮದಿ ಹಾಗೂ ಸೌಹಾರ್ದ ಸಂಬಂಧಗಳನ್ನು ಬೆಳೆಸುವ ಉದ್ದೇಶದಿಂದ ಗ್ರಾಮ ಸ್ವರಾಜ್ ಟ್ರಸ್ಟ್ (ರಿ) ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಗಳು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರದೊಂದಿಗೆ"ಹೊಂಬೆಳಕು" ಎನ್ನುವ ನಾಮಂಕಿತದೊಂದಿಗೆ...
ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮಂಗಳಗಂಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ ನಡೆಸಲಾಯಿತು.ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ...







