ಬಂಟವಾಳ ರೈಲು ನಿಲ್ದಾಣ: 28.49 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿ
ಮ೦ಗಳೂರು: ಮೈಸೂರು ವಿಭಾಗದ ಬಂಟವಾಳ ರೈಲು ನಿಲ್ದಾಣವನ್ನು ‘ಎಬಿಎಸ್ಎಸ್’ ಯೋಜನೆಯಡಿ 28.49 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲು ಆಯ್ದುಕೊಳ್ಳಲಾಗಿದೆ ,ಫೆಬ್ರವರಿ26 ರಂದು ಬಂಟವಾಳ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಲಿದೆ.ಕಾರ್ಯಕ್ರಮವು 10:45 ಗಂಟೆಗೆ ಪ್ರಾರಂಭವಾಗಲಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್’ ಮೂಲಕ 12:30 ಗಂಟೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್...
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ
ಮಂಗಳೂರು: ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು,...
ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
ಬೆಂಗಳೂರು:ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ...
ಫೆ.28ರಂದು ಮೇಯರ್ ಪೋನ್-ಇನ್
ಮಂಗಳೂರು: ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ವೇಣೂರು ಮಸ್ತಕಾಭಿಷೇಕ : ವಾಹನ ಸಂಚಾರ ಮಾರ್ಗ ಬದಲಾವಣೆ ಆದೇಶ
ಮಂಗಳೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ.ಆದ್ದರಿಂದ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ ಮೂಡಬಿದ್ರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ,...
ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ; ಸವಾರ ಸಾವು
ಪುತ್ತೂರು: ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿಸ೦ಭವಿಸಿದೆ. ತೇಜಸ್ . ಪಿ (24) ಮೃತಪಟ್ಟ ಸ್ಕೂಟರ್ ಸವಾರ. ಸಹಸವಾರ ಪವನ್ ಕುಮಾರ್ (26) ಗಂಭೀರ ಗಾಯಗೊಂಡವರು.ತೇಜಸ್ ಅವರು ಪವನ್ ಕುಮಾರ್ ಅವರನ್ನು ಸ್ಕೂಟರ್ ನಲ್ಲಿ...
ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ
ಮಂಗಳೂರು: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣ ರಿಗೆ...
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ:ಆದಾಯ ಪ್ರಮಾಣ ಪತ್ರ ಅಪ್ಲೋಡ್ ಫೆ.29 ಕೊನೆಯ ದಿನ
ಮಂಗಳೂರು: ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ.
2023-24 ನೇ ಸಾಲಿನಲ್ಲಿ ಇತರೆ ಇಲಾಖೆಗಳ ( ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ...
ವಿಧಾನ ಸಭಾ ಕಲಾಪ ವೀಕ್ಷಿಸಿದ ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು
ಸುಳ್ಯ,: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು.ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ್ಲಿ ಶಾಲೆಯ 14 ಮಂದಿ ಪುಟಾಣಿಗಳು ವಿಧಾನ ಸಭಾ ಕಲಾಪ ವೀಕ್ಷಿಸಿದರು. ಅದಕ್ಕೂ ಸಭಾಧ್ಯಕ್ಷ...
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ
ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು.ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ...




