ಕಾರು ಡಿಕ್ಕಿ ಹೊಡೆದು ಅಂಗವಿಕಲ ವ್ಯಕ್ತಿ ಸಾವು
ಕಡಬ : ಕಾರು ಹರಿದು ಅಂಗವಿಕಲ ವ್ಯಕ್ತಿ ಮೃತಪಟ್ಟ ಘಟನೆ ಕಡಬ ಬಸ್ಸು ನಿಲ್ದಾಣದ ಬಳಿ ಸ೦ಭವಿಸಿದೆ.ದರ್ಣಪ್ಪ ಎ೦ಬವರು ಮೃತಪಟ್ಟ ವ್ಯಕ್ತಿ. ದರ್ಣಪ್ಪ ಅವರು ಕಡಬ ಬಸ್ಸು ನಿಲ್ದಾಣದ ಬಳಿ ರಸ್ತೆಯ ಅಂಚಿನಲ್ಲಿದ್ದಾಗ, ಅಭಿಷೇಕ ಭಾಂದಲ ಎಂಬವರು ತಾವು ಚಲಾಯಿಸುತ್ತಿದ್ದ ಕಾರನ್ನು ಧರ್ಣಪ್ಪರವರು ಮೇಲೆಯೇ ಚಲಾಯಿಸಿರುತ್ತಾರೆ. ಇದರಿಂದಾಗಿ ಗಂಭೀರ ಗಾಯಗೊಂಡ ಧರ್ಣಪ್ಪರವರನ್ನು ಕಡಬ...
“ಪಿಎಂ ಸ್ವನಿಧಿ” “ಪಿಎಂ ವಿಶ್ವಕರ್ಮ”ಯೋಜನೆ:ಶಾಸಕ ವೇದವ್ಯಾಸ್ ಕಾಮತ್ ಸಭೆ
ಮ೦ಗಳೂರು: ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ "ಪಿಎಂ ಸ್ವನಿಧಿ" "ಪಿಎಂ ವಿಶ್ವಕರ್ಮ" ಸೇರಿದಂತೆ ಪ್ರಧಾನ ಮಂತ್ರಿಗಳ ವಿವಿಧ ಯೋಜನೆಯಡಿಯಲ್ಲಿ ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬೀದಿಬದಿ ವ್ಯಾಪಾರಿಗಳ ಸಂಘದ ಹಾಗೂ ವಿವಿಧ ಸಮುದಾಯಗಳ ಮುಖಂಡರ ಸಭೆ ನಡೆಸಿದರು.
ಮಂಗಳೂರು ಮಹಾನಗರ...
ಡಿ. 18 ರಂದು ರೋವರ್ಸ್ ಮತ್ತು ರೇಂಜರ್ಸ್ ನಾಯಕತ್ವ ತರಬೇತಿ
ಮಂಗಳೂರು,:ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವಿಕಾಸ್ ಪದವಿ ಪೂರ್ವ ಕಾಲೇಜು ಮಂಗಳೂರು, ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಹಯೋಗದಲ್ಲಿ ನಗರದ ಮೇರಿಹಿಲ್ ನಲ್ಲಿರುವ ವಿಕಾಸ ಪದವಿ ಪೂರ್ವ ಕಾಲೇಜಿನ, ಶ್ರೀಮದ್ ಸುಧೀಂದ್ರ ತೀರ್ಥ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ರೋವರ್ಸ್...
ಕಟ್ಟಡ ನಿರ್ಮಾಣದಲ್ಲಿ ನಿಯಮ ಉಲ್ಲಂಘನೆ:ತ್ವರಿತ ಕ್ರಮಕ್ಕೆ ಲೋಕಾಯುಕ್ತರ ಸೂಚನೆ
ಮಂಗಳೂರು: ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವುದರ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಶೀಲನಾ ಸಭೆಯಲ್ಲಿ...
ಪದವಿಪೂರ್ವ ಶಿಕ್ಷಣ ನಿರ್ದೇಶಕರಿಂದ ವಿವಿಧ ಕಾಲೇಜುಗಳಿಗೆ ಭೇಟಿ
ಮಂಗಳೂರು:ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿರ್ದೇಶಕರಾದ ಸಿಂಧು. ಬಿ.ರೂಪೇಶ್ ಅವರು ಶನಿವಾರ ಮಂಗಳೂರು ನಗರದ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಮೊದಲು ಬಲ್ಮಠ ಮಹಿಳಾ ಪದವಿಪೂರ್ವ ಕಾಲೇಜಿಗೆ ಆಗಮಿಸಿದ ಅವರು, ಕಾಲೇಜಿನ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಕಾಲೇಜಿನ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.ನಂತರ ನಗರದ ಬಿ.ಎಡ್....
ಮಹಾನಗರಪಾಲಿಕೆ: ಮಧ್ಯವರ್ತಿಗಳಿಲ್ಲದೇ ಖಾತಾ ನೋಂದಣಿ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿಗಳ ಖಾತೆಗಳನ್ನು ಇ-ಆಸ್ತಿ ಆನ್ಲೈನ್ ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಪ್ರಸ್ತುತ ಆನ್ಲೈನ್ ವ್ಯವಸ್ಥೆಯಡಿ ಖಾತಾ ನೋಂದಣಿ, ವರ್ಗಾವಣೆ ಕೋರಿ ಅರ್ಜಿ ಸಲ್ಲಿಸುವಿಕೆ ಅತ್ಯಂತ ಸರಳ ರೀತಿಯಲ್ಲಿ ನಾಗರಿಕರೇ ಸಲ್ಲಿಸಬಹುದಾಗಿದ್ದು ಮಧ್ಯವರ್ತಿಗಳ ಸಹಾಯ ಪಡೆಯುವ ಅವಶ್ಯಕತೆ ಇರುವುದಿಲ್ಲ.ಇ-ಆಸ್ತಿ ತಂತ್ರಾಂಶದ ಮೂಲಕ ನಾಗರೀಕರು ಆಸ್ತಿಗಳ ಖಾತೆ ನೊಂದಾವಣೆ, ವರ್ಗಾವಣೆ ಅರ್ಜಿ...
ಡಿ.18ರಂದು ಶಾಸಕ ರಾಜೇಶ್ ನಾಯ್ಕ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ, ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಮಾತೃ ಭಾಷೆಯ ಜತೆಗೆ ಇತರ ಭಾಷೆಯನ್ನೂ ಕಲಿಯುವುದು ಉತ್ತಮ : ಕುಲದೀಪ್ ಸಿಂಗ್
ಮಂಗಳೂರು,:ಹಿಂದಿ ಭಾಷೆ ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ವಿಶ್ವ ಮಾನ್ಯಭಾಷೆಯಾಗಿದೆ. ಯಾವುದೇ ಭಾಷೆ ಕಲಿಯುತ್ತಿದ್ದೇವೆ ಎಂದಾದರೆ ಅದರ ಸಂಸ್ಕೃತಿಯನ್ನೂ ಕೂಡ ಕಲಿತಂತೆ ಆಗುತ್ತದೆ. ಆದರೆ ಮಾತೃಭಾಷೆಗೆ ಮೊದಲ ಆದ್ಯತೆ ಇರಲಿ. ಅದರ ಜೊತೆಗೆ ಹಿಂದಿ ಭಾಷೆಯನ್ನೂ ಕಲಿಯುವಲ್ಲಿ ಒಲವು ತೋರಿಸಿದರೆ ಉತ್ತಮ ಎಂದು ಎನ್. ಎಂ. ಪಿ. ಟಿ.ಯ ಹಿಂದಿ ಅಧಿಕಾರಿ ಕುಲದೀಪ್ ಸಿಂಗ್ ಹೇಳಿದರು.ನಗರದ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲಾ ಬಿಜೆಪಿ ವತಿಯಿ೦ದ ಸ್ವಾಗತ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಾಯ೯ಕ್ರಮದ ನಿಮಿತ್ತ ಡಿ.15ರ೦ದು ಆಗಮಿಸಿದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿ೦ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ್ ಎಂ., ಉಪ ಮೇಯರ್ ಸುನಿತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಬ್ಯಾಂಕ್ ಆಫ್...
ಪಿಂಚಣಿ ಯೋಜನೆ: ದ.ಕ. ಜಿಲ್ಲೆಯಲ್ಲಿ 1.77 ಲಕ್ಷ ಫಲಾನುಭವಿಗಳು
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು 177026 ಫಲಾನುಭವಿಗಳು ಹಣಕಾಸು ನೆರವು ಪಡೆದು ಆರ್ಥಿಕ ಭದ್ರತೆ ಹೊಂದಿರುತ್ತಾರೆ. ದುರ್ಬಲರಿಗೆ ಆಶಾಕಿರಣವಾಗಿರುವ ವಿವಿಧ ಪಿಂಚಣಿ ಯೋಜನೆಗಳಿಂದ ಬಹಳಷ್ಟು ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ವಿಕಲಚೇತನರಿಗೆ ಸೇರಿದಂತೆ ಸಮಾಜದ ವಿವಿಧ ದುರ್ಬಲರಿಗೆ...






