ಜ.24 : ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ರಾಷ್ಟ್ರೀಯ ಲೋಕ ಅದಾಲತ್
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ಜನವರಿ 24 ರಂದು ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಲಾಗಿದೆ.ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ಲೋಕ ಅದಾಲತ್ನ ಮೂಲಕ...
ರೆಡ್ಕ್ರಾಸ್ನಿಂದ ರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು : ವಿದ್ಯಾರ್ಥಿಗಳು ಮೋಜಿನ ಆಕರ್ಷಣೆಗಳಿಂದ ವಿಚಲಿತರಾಗದೆ ಭವಿಷ್ಯದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲೇ ಸೇವೆಗೆ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಯುವಜನತೆ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಸಂದೇಶ ಸ್ಫೂರ್ತಿಯಾಗಿದೆ ಎಂದು ರೆಡ್ಕ್ರಾಸ್ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಭಾರತೀಯ ರೆಡ್ಕ್ರಾಸ್ ಸೊಸೈಟಿ ಮತ್ತು ಯೂತ್...
ಜ.12-16;ಆಳ್ವಾಸ್ನಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ
ಮಂಗಳೂರು: ಜನವರಿ 12ರಿಂದ16 ರವರೆಗೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ೮೫ನೇ ಅಖಿಲ ಭಾರತಪುರುಷ ಹಾಗೂ ಮಹಿಳೆ ಯರಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ನ್ನು ಆಯೋಜಿಸಲಾಗಿದೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿ ಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.ಈ...
ಕಲಾವಿದನ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ
ಮಂಗಳೂರು : ಕಠಿಣ ಪರಿಶ್ರಮ , ಶ್ರದ್ಧೆಯಿಂದ ಸಂಗೀತ ಕಲೆ ಒಲಿಯುತ್ತದೆ. ನಿರಂತರ ಅಭ್ಯಾಸದಿಂದ ಮಾತ್ರ ಶ್ರೇಷ್ಠ ಕಲಾವಿದನಾಗಿ ರೂಪುಗೊಳ್ಳಬಹುದು ಎಂದು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಹೇಳಿದರು.ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಆಯೋಜಿಸಲಾದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು ಸಂಗೀತ ಕಲಾವಿದರ ಬೆಳವಣಿಗೆಗೆ ಎಲ್ಲರ...
ರಾಕೇಶ್ ಅಡ್ಕ ಅವರಿಗೆ ಕಂಬಳ ಗುತ್ತು ಪ್ರಶಸ್ತಿ
ಮ೦ಗಳೂರು: ತೆಂಕು ತಿಟ್ಟು ಯಕ್ಷಗಾನ ದ ಬಹು ಮುಖ ಪ್ರತಿಭೆಯ ಪ್ರಸಿದ್ದ ಯುವ ವೇಷಧಾರಿ, ಯಕ್ಷ ಗುರು, ಸಂಘಟಕ , ಪ್ರಯೋಗ ಶೀಲ ನಿರ್ದೇಶಕ ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ಪ್ರದಾನ 11ಜನವರಿ ಆದಿತ್ಯವಾರ ಕದ್ರಿ ಕಂಬಳ ಗುತ್ತಿನ ಪಾವಂಜೆ ಮೇಳದ ಸೇವೆ ಆಟ...
ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು, ಜ.10:“ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ...
ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಮ೦ಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ "ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ" ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು...
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ : ಸಚಿವ ಈಶ್ವರ ಬಿ ಖಂಡ್ರೆ
ಮಂಗಳೂರು: ಮುಂಬರುವ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಅವರು ಶುಕ್ರವಾರ ನಗರದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ ಮಾತನಾಡಿದರು.ರಾಜ್ಯದಲ್ಲಿ ಅತ್ಯಧಿಕ ಗೇರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಇಲ್ಲಿ ಗೇರು ಸಸಿಗಳಿಗೆ ಹೆಚ್ಚು ಬೇಡಿಕೆ ಇರುವ ಬಗ್ಗೆ...
ಜ.14ರಂದು ಅಜೋಯ್ ಚಕ್ರವರ್ತಿ `ಸ್ವರ ಸಂಧ್ಯಾ’ ಸಂಗೀತ ಕಛೇರಿ
ಮಂಗಳೂರು: ನಗರದ ಪ್ರಸಿದ್ಧ ಸಂಗೀತ ಸಂಸ್ಥೆ ಸ್ವರಲಯ ಸಾಧನಾ ಫೌಂಡೇಶನ್ ಹಾಗೂ ಕಲಾ ಶಾಲೆ ವತಿಯಿಂದ ಜ.14ರಂದು ನಗರದ ಪುರಭವನದಲ್ಲಿ ಆಯೋಜನೆಗೊಳ್ಳಲಿರುವ ಸ್ವರ ಸಂಕ್ರಾಂತಿ ಕಾರ್ಯಕ್ರಮದಲ್ಲಿ ದೇಶದ ಖ್ಯಾತ ಹಿಂದೂಸ್ಥಾನಿ ಗಾಯಕ, ಪದ್ಮಶ್ರೀ ಪಂಡಿತ್ ಅಜೋಯ್ ಚಕ್ರವರ್ತಿ ಅವರ `ಸ್ವರ ಸಂಧ್ಯಾ' ಸಂಗೀತ ಕಛೇರಿ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು ನಗರದಲ್ಲಿ ಪ್ರಥಮ ಬಾರಿಗೆ ಕಛೇರಿ ನಡೆಸಿಕೊಡಲಿರುವ...
ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ
ಮ೦ಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. , ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪ್ರಾರ್ಥನೆ ಮತ್ತು ಚಿಂತನೆಯಲ್ಲಿ ಪಾಲ್ಗೊಂಡಿದ್ದರು.
ದಿನದ ಕಾರ್ಯಕ್ರಮಗಳು ಬೆಳಿಗ್ಗೆ 6 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಪತ್ರಿಕೆ 'ಉಜ್ವಾಡ್'ನ ಸಂಪಾದಕರಾದ ವಂ| ಆಲ್ವಿನ್ ಸಿಕ್ವೇರಾ, ಒಸಿಡಿ ಅವರಿಂದ...







