ಮಂಗಳೂರು ದಸರಾ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು
ಮ೦ಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ ನಡೆಸಿದರು.ನಗರದ ಸರ್ಕ್ಯುಟ್ ಹೌಸ್ ನಲ್ಲಿ ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ದಸರಾ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರವನ್ನು ಅಲಂಕರಿಸುವ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚಿಸಿದರು. ನಗರದಾದ್ಯಂತ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ನಗರದ...
ದ.ಕ.ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ; ಶೇ. 25 ಬೋನಸ್ ಹಾಗೂ ಶೇ.15 ಡಿವಿಡೆಂಟ್ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 2024-25ನೇ ಸಾಲಿನಲ್ಲಿ ಒಟ್ಟು ರೂ. 1173.70 ಕೋಟಿಯ ವಹಿವಾಟು ಮಾಡಿ ರೂ.12.79 ಕೋಟಿ ನಿವ್ವಳ ಲಾಭ ಗಳಿಸಿದ್ದು ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 5.84% ರಷ್ಟು ಪ್ರಗತಿ ಸಾಧಿಸಿದೆ. ಒಕ್ಕೂಟವು ಗುಣಮಟ್ಟದ ಹಾಲಿನ ಸಂಗ್ರಹಣೆಯಲ್ಲಿ ರಾಜ್ಯದಲ್ಲಿ ಅಗ್ರ ಸ್ಥಾನದಲ್ಲಿದೆ. ರೈತರಿಗೆ ಪ್ರತೀ ಲೀಟರ್...
55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮ೦ಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಸಿ.ಆರ್. ಚಂದ್ರನ್ ( 78 ವರ್ಷ) ಬ೦ಧಿತ ಆರೋಪಿ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ LPC ವಾರಂಟ್ ಆಸಾಮಿ ಯಾಗಿರುವ ಕೇರಳ ಮಲಪುರಂ ಜಿಲ್ಲೆಯ ಚಂದ್ರನ್ ( 78 ವರ್ಷ) ಎಂಬಾತನು ಕಳೆದ 55ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು...
ಮಕ್ಕಳ ಸಹಾಯವಾಣಿ ಸಂಖ್ಯೆ 1098 : ಮುಖ್ಯ ಕಾರ್ಯದರ್ಶಿಗಳ ಸೂಚನೆ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ...
ಸೆ. 22ರಿಂದ ಮಂಗಳೂರು ದಸರಾ ವೈಭವ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಿ೦ದ ಅಕ್ಟೋಬರ್ 3ರವರೆಗೆ ಮಂಗಳೂರು ದಸರಾ ಮಹೋತ್ಸವ ಜರುಗಲಿದೆ.
ಸೆ.22ರಂದು ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥನೆಯೊಂದಿಗೆ ಪುಣ್ಯಾಹ ಹೋಮ ನವಕಲಶಾಭಿಷೇಕ ನಡೆದು ಪೂರ್ವಾಹ್ನ 12ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 3ರ ತನಕ ಕೇಂದ್ರದ ಮಾಜಿ ಸಚಿವರು, ಕ್ಷೇತ್ರದ ಅಭಿವೃದ್ಧಿಯ ರುವಾರಿ...
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
ಮಂಗಳೂರು: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ರಕ್ಷಣೆ ನೀಡುವ ಉದ್ದೇಶದಿಂದ ರೂಪಿಸಲಾದ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮವು ಗುರುವಾರ ಮಂಗಳೂರು ಉರ್ವಾ ಲೇಡಿಹಿಲ್ ಸೆಂಟ್ರಲ್ ಸ್ಕೂಲ್(ಐಸಿಎಸ್ಇ)ಯಲ್ಲಿ ಆಯೋಜಿಸಲಾಯಿತು. ಮಕ್ಕಳ ಸುರಕ್ಷತೆ, ಪೋಷಕರು –ಶಿಕ್ಷಕರು ಮತ್ತು ಸಮಾಜದ ಜವಾಬ್ದಾರಿ ಹಾಗೂ ಕಾಯ್ದೆಯ ವಿಧಿ-ವಿಧಾನಗಳ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.ಹೆಚ್ಚುವರಿ ಜಿಲ್ಲಾ ಮತ್ತು...
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್ಲೈನ್ನಲ್ಲಿ ಆಸಕ್ತ ಮಹಿಳಾ...
ಸವಲತ್ತು ನೀಡಲು ವಿಳಂಬ: ತಹಶೀಲ್ದಾರ್ ವಿರುದ್ಧ ದೂರು ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿದೆ.ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು)...
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓಝೋನ್ ದಿನಾಚರಣೆ
ಮಂಗಳೂರು: ಅಂತರಾಷ್ಟ್ರೀಯ ಓಝೋನ್ ದಿನಾಚರಣೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿ ಡಾ ಲಕ್ಷ್ಮಿಕಾಂತ್ ಹೆಚ್ ಮಾತನಾಡಿ, ಓಝೋನ್ ಪದರ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವುದರ ಜೊತೆಗೆ ಭೂಮಂಡಲದಲ್ಲಿರುವ ಜೀವ ಸಂಕುಲವನ್ನು ರಕ್ಷಣೆ ಮಾಡುವ ಪದರವಾಗಿ ಕಾರ್ಯ ನಿರ್ವಹಿಸುತ್ತದೆ. ಸೂರ್ಯನ ನೇರಳಾತೀತ...
ಕೆ.ಎಸ್.ಆರ್.ಟಿ.ಸಿ: ಸಂದರ್ಶನ ಸೆ.18ಕ್ಕೆ ವಿಸ್ತರಣೆ
ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 10 ರಂದು ನಿಗದಿಪಡಿಸಲಾಗಿದ್ದ ಸಂದರ್ಶನ ದಿನಾಂಕವನ್ನು ಸೆಪ್ಟೆಂಬರ್ 18 ಕ್ಕೆ ವಿಸ್ತರಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




