24.8 C
Karnataka
Thursday, April 30, 2026

ಸುದ್ದಿ

ಶಿಕ್ಷಣಕ್ಕೆ ಅಂಗನವಾಡಿ ಭದ್ರ ಬುನಾದಿ: ಶಿವಾನಂದ ತಗಡೂರು

0
ಮಂಗಳೂರು : ಅಂಗನವಾಡಿ ಶಿಕ್ಷಣ ಎಳೆಯ ಮಕ್ಕಳ ಸಮಗ್ರ ಬೆಳವಣಿಗೆಗೆ ಭದ್ರ ಬುನಾದಿ ಹಾಕುತ್ತದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ ಶಾಲಾ ಶಿಕ್ಷಣಕ್ಕೆ ಸಿದ್ಧಗೊಳಿಸುವ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಜತೆ ಸಾರ್ವಜನಿಕ ಸಹಭಾಗಿತ್ವವೂ ಅಗತ್ಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.ನಗರದ ಬಿಜೈ ಅಂಗನವಾಡಿ ಕೇಂದ್ರದಲ್ಲಿ ಯುಗಾದಿ...

ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ಗೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿ

0
ಮ೦ಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ಗೆ ವಿಶೇಷ ಅನುದಾನದಲ್ಲಿ ಮೇಲ್ಛಾವಣಿ ಅಳವಡಿಸಲಾಗುತ್ತಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ...

ರಕ್ತದಾನ ಪುಣ್ಯದ ಕಾರ್ಯ-ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ರಕ್ತದಾನ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ಅತ್ಯಂತ ಪುಣ್ಯದ ಕಾರ್ಯವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಈ ಮಹತ್ವದ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದು ರೆಡ್ ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ನಗರದ ಶ್ರೀ ರಾಮಕೃಷ್ಣ ಕಾಲೇಜಿನ...

ದ.ಕ.ಜಿಲ್ಲಾ ರೆಡ್‌ಕ್ರಾಸ್‌ಗೆ ಪಾರುಲ್ ವಿ.ವಿ.ವಿದ್ಯಾರ್ಥಿ ತಂಡ ಭೇಟಿ

0
ಮಂಗಳೂರು : ಗುಜರಾತ್‌ನ ವಡೋದರದ ಪಾರುಲ್ ವಿಶ್ವವಿದ್ಯಾನಿಲಯದ ಬಿಎಸ್‌ಸಿ ಮತ್ತು ಎಂಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ತಂಡ ತಮ್ಮ ಅಧ್ಯಯನ ಪ್ರವಾಸದ ಅಂಗವಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಸಂಸ್ಥೆಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ "ದ.ಕ.ಜಿಲ್ಲಾ ರೆಡ್‌ಕ್ರಾಸ್ ತನ್ನ ಅತ್ಯಪೂರ್ವ...

ಸ್ಟಾರ್ಟ್‌ಅಪ್ ಮೇಳ 5.0: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ನವೋದ್ಯಮಗಳ ಸಂಗಮ

0
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂಟರ್‌ಪ್ರೆನರ್‌ಶಿಪ್ ಡೆವಲಪ್‌ಮೆಂಟ್ ಸೆಲ್ (EDC) ಮತ್ತು ಇನ್‌ಸ್ಟಿಟ್ಯೂಷನ್ಸ್ ಇನ್ನೋವೇಶನ್ ಕೌನ್ಸಿಲ್ (IIC) ವತಿಯಿಂದ ಮಾರ್ಚ್ 13 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ‘ಸ್ಟಾರ್ಟ್‌ಅಪ್ ಮೇಳ 5.0: ದಿ ನೆಕ್ಸಸ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೈಚಾರಿಕತೆ, ಸಮಸ್ಯೆ ಪರಿಹಾರ ಮತ್ತು ನವೋದ್ಯಮಗಳ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿ ಹೊಂದಿದ್ದ ಈ ಕಾರ್ಯಕ್ರಮವು ಪ್ರದರ್ಶನ...

ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

0
ಮ೦ಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ...

ಮಾ.18 ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

0
ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಮಾರ್ಚ್ 18 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ. ಈ ಕ್ರ್ಯಾಶ್ ಕೋರ್ಸ್‌ನಲ್ಲಿ ಪ್ರತಿಯೊಂದು ಅಧ್ಯಾಯವನ್ನು ತಜ್ಞ ಉಪನ್ಯಾಸಕರು ಬೋಧಿಸುವುದರ ಜೊತೆಗೆ ಅಧ್ಯಯನಕ್ಕೆ ಅಗತ್ಯವಾದ ರೆಫರೆನ್ಸ್ ಮಾಡ್ಯೂಲ್‌ಗಳು ಹಾಗೂ ತರಗತಿ ಕಾರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ....

ಮಹಿಳಾ ಸಂಪನ್ಮೂಲ ಕೇಂದ್ರ ಹಸ್ತಾಂತರ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ

0
ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಶನಿವಾರ ಉದ್ಘಾಟಿಸಲಾಯಿತು.ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಸಿ.ಎಸ್.ಆರ್ ಅನುದಾನದಲ್ಲಿ ಜಿಲ್ಲಾ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಎಲ್ಲಾ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗಿದ್ದು, ಮಹಿಳಾ ದಿನಾಚರಣೆಯನ್ನು ಆಚರಿಸುವ ಮೂಲಕ ಲೋಕಾರ್ಪಣೆ ಮಾಡಲಾಯಿತು.ಮುತ್ತೂಟ್...

ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನ ಬಿಡುಗಡೆ

0
ಮಂಗಳೂರು : ಮಾರ್ಚ್ 20 ರ೦ದು ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಆಯೋಜಿಸಲಿರುವ ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಎ. ಸದಾನಂದ ಶೆಟ್ಟಿಯವರು ಬಿಡುಗಡೆ ಮಾಡಿದರು. ಈ ಲಾಂಛನವನ್ನು ಐ.ಎಮ್. ಜೆ. ಇನ್ಸ್ ಟಿಟ್ಯೂಟ್ ಆಫ್ ಸಯನ್ಸ್ ಅಂಡ್ ಕಾಮಸ್೯ ಮೂಡ್ಲಕಟ್ಟೆ...

ಜನಾಂಗೀಯ ಅಧ್ಯಯನದ ಮಾದರಿ ಸೃಷ್ಟಿಸಿದ ವಾಮನ ನಂದಾವರರು : ಡಾ. ಚಲಪತಿ

0
ಮಂಗಳೂರು: ಜಾನಪದ ಸಂಶೋಧಕರಾಗಿದ್ದ ಡಾ. ವಾಮನ ನಂದಾವರ ಅವರು ವೈಯಕ್ತಿಕ ನೆಲೆಯಲ್ಲಿ ನಡೆಸಿದ ಅಧ್ಯಯನ ಕೇವಲ ಕರಾವಳಿಯ ಜನಪದೀಯ ಹಾಗೂ ಜನಾಂಗೀಯ ಅಧ್ಯಯನಕ್ಕೆ ಮಾತ್ರ ಸೀಮಿತವಾದುದಲ್ಲ, ಅದು ಒಟ್ಟು ಕರ್ನಾಟಕದ ಒಳಗೆ ಜನಪದೀಯವಾಗಿ ಜನಾಂಗೀಯ ಅಧ್ಯಯನವನ್ನು ಹೇಗೆ ಮಾಡಬೇಕೆಂಬ ಮಾದರಿಯನ್ನು ತೋರಿಸಿ ಕೊಟ್ಟಿತು ಎಂದು ಮೈಸೂರು ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರದ ಸಂಶೋಧಕ ಡಾ....