ಮಾರ್ಚ್ 24: ‘ರೋಹನ್ ನೆಸ್ಟ್’ನ ಭೂಮಿಪೂಜೆ
ಮಂಗಳೂರು: ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24 ರ೦ದು ಸಂಜೆ 4 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ.ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ....
ಬಲ್ಮಠದ ಸರ್ಕಾರಿ ಕಾಲೇಜು:ಇನ್ಫೋಸಿಸ್ ಸಿ.ಎಸ್.ಆರ್ ನಿಧಿಯಿಂದ ಕಂಪ್ಯೂಟರ್ ಲ್ಯಾಬ್ ಕೊಡುಗೆ
ಮ೦ಗಳೂರು: ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ಬಲ್ಮಠದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟನೆಗೊಳಿಸಿದರು.
ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲು ಕಂಪ್ಯೂಟರ್ ಲ್ಯಾಬ್ ಗಳ ಅಗತ್ಯವಿರುವ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರುಗಳು ಶಾಸಕ...
ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಒಟ್ಟು 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರೂ.ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು. ವಿದ್ಯಾರ್ಥಿ ದತ್ತಿ ನಿಧಿಯಿಂದ ಪ್ರಸಕ್ತ ಸಾಲಿನಲ್ಲಿ...
ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು
ಮ೦ಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06203 ಮೈಸೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು...
ಇ–ಖಾತಾ ಸಮಸ್ಯೆ ಬಗೆಹರಿಸಲು ಸಚಿವರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ
ಮ೦ಗಳೂರು: ರಾಜ್ಯ ಸರ್ಕಾರವು ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರ ವ್ಯಾಪ್ತಿಯಲ್ಲಿ ಅವ್ಯವಸ್ಥೆಯ ಆಗರದಿಂದಾಗಿ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸುವಂತಾಗಿದ್ದು ಕೂಡಲೇ ಇದನ್ನು ಬಗೆಹರಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂದಾಯ ಸಚಿವ ಕೃಷ್ಣ ಭೈರೇಗೌಡರವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಸಮರ್ಪಕವಾಗಿ ಪೂರ್ವಸಿದ್ಧತೆ ಮಾಡದೇ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯಗೊಳಿಸಿರುವುದೇ...
ಭಿಕ್ಷಾಟನೆ :ಮಕ್ಕಳ ರಕ್ಷಣೆ
ಮಂಗಳೂರು : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರದ ಪ್ರದೇಶಗಳಾದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್ವೆಲ್ ವೃತ್ತ , ಕುದ್ರೋಳಿ, ರಥಬೀದಿ, ಕೆಪಿಟಿ ಸ್ಥಳಗಳಲ್ಲಿ ಕಾಯ್ಯಾಚರಣೆ...
ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್ ಕಮಿಷನರ್
ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ.ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ...
ರಚನಾ ಪ್ರಶಸ್ತಿ 2023-25: ಅರ್ಜಿ/ ನಾಮಪತ್ರ ಆಹ್ವಾನ
ಮ೦ಗಳೂರು: ರಚನಾ' - ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ, ಮಂಗಳೂರು ಮೂಲದ ವಿವಿಧೆಡೆಗಳಲ್ಲಿ ಹಬ್ಬಿಕೊಂಡಿರುವ ಕ್ಯಾಥೊಲಿಕ್ ಕ್ರೈಸ್ತ ಸಮುದಾಯದ, ತಂತಮ್ಮ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗಳನ್ನು ಮಾಡಿರುವ ಗಣ್ಯರನ್ನು ಪರಿಗಣಿಸಿ, ಆಯ್ದು ‘ರಚನಾ’ ಪ್ರಶಸ್ತಿಯನ್ನು ನೀಡುವ ಮೂಲಕ ಪುರಸ್ಕರಿಸುತ್ತಿದೆ. 2023-25ನೇ ಸಾಲಿನ ಈ ಕೆಳಗಿನ ಪ್ರಶಸ್ತಿಗಳಿಗಾಗಿ ನಾಮಪತ್ರಗಳನ್ನು ಆಹ್ವಾನಿಸಲಾಗಿದೆ.
ರಚನಾ ಕೃಷಿಕ,
ರಚನಾ ವೃತ್ತಿಪರ (ವೈದ್ಯರು,...
ವೃತ್ತಿ ಹಾಗೂ ಪ್ರವೃತ್ತಿಗಳಿಂದ ಬದುಕು ಸಾರ್ಥಕ: ಡಾ. ಬಿ.ಎ. ಕುಮಾರ ಹೆಗ್ಡೆ
ಮಂಗಳೂರು: ವೃತ್ತಿಯ ಜೊತೆ ಸಮಾಜಮುಖಿ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನಮೌಲ್ಯಯುತವಾಗಿರುತ್ತದೆ, ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ. ಎ. ಕುಮಾರ ಹೆಗ್ಡೆ ಹೇಳಿದ್ದಾರೆ.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಾಪಕರ ಸಂಘವನಶ್ರೀ ಹಾಗೂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಸನ್ಮಾನಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,...
ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು
ಮಂಗಳೂರು : ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಶುಕ್ರವಾರ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ, 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಈ ಪರೀಕ್ಷೆ ದಕ್ಷಿಣ ಕನ್ನಡ ಜಿಲ್ಲೆಯ 521 ಶಾಲೆಗಳ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು...





