27.8 C
Karnataka
Thursday, August 20, 2026
Home ರಾಜಕೀಯ

ರಾಜಕೀಯ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ

0
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...

ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್

0
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...

ಕಾ೦ಗ್ರೆಸ್‌ ವರಿಷ್ಠರನ್ನು ಭೇಟಿಯಾದ ಉಪಾಧ್ಯಕ್ಷ ಬಿ. ರಮನಾಥ ರೈ

0
ಮ೦ಗಳೂರು: ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮನಾಥ ರೈ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ‌.ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣಾತಯಾರಿ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ...

ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್

0
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...

ಸರ್ಕಾರ ನುಡಿದಂತೆ ನಡೆದಿದೆ : ಮ೦ಜುನಾಥ ಭಂಡಾರಿ

0
ಮ೦ಗಳೂರು: ಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆಯಲ್ಲಿ ಮಾಡಿದ ಘೋಷಣೆಗಳಲ್ಲಿ ಕೆಲವು ಘೋಷಣೆಗಳನ್ನು ೧೦೦ ದಿನದಲ್ಲಿ ಕಾರ್ಯರೂಪಕ್ಕೆ ತಂದಿದೇವೆ. ಸರ್ಕಾರ. ನುಡಿದಂತೆ ನಡೆದಿದೆ ಎ೦ದು ವಿಧಾನ ಪರಿಷತ್‌ ಸದಸ್ಯ ಮ೦ಜುನಾಥ ಭಂಡಾರಿ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್‌ ಕಚೇರಿಯಲ್ಲಿ ಮ೦ಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್‌ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾವಾರು ಭೇಟಿ ನೀಡಿ...

ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮಗಳನ್ನು ನೀಡಿದೆ:. ಬೈರತಿ ಸುರೇಶ್

0
ಮಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್ ಅವರು ಮೊದಲ ಬಾರಿಗೆ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಮಗೆಲ್ಲರಿಗೂ ತಾಯಿ ಇದ್ದಂತೆ. ಕಾಂಗ್ರೆಸ್ ಇಲ್ಲದೆ ನಮ್ಮ ಅಸ್ಥಿತ್ವ ಇರುವುದಿಲ್ಲ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಸರಕಾರ ನೀಡಿದ್ದು, ಜನಪರವಾದ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪಕ್ಷವನ್ನು ಕರಾವಳಿ...

ಕಾ೦ಗ್ರೆಸ್‌ ಸರಕಾರ ಸ್ಥಿರವಾಗಿದೆ: ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು : ರಮಾನಾಥ ರೈ

0
ಮಂಗಳೂರು: ಕಾ೦ಗ್ರೆಸ್‌ ಸರಕಾರ ಸ್ಥಿರವಾಗಿದ್ದು ೫ ವಷ೯ ಜನಪರ, ಬಡವರಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡಲಿದೆ. ಸರಕಾರವನ್ನುಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು .ಸರ್ಕಾರ ಭದ್ರವಾಗಿರುತ್ತದೆ ಎ೦ದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ ಭಿ. ರಮಾನಾಥ ರೈ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್‌ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್‌ ಸರಕಾರ ಆಡಳಿತಕ್ಕೆ ಬ೦ದ೦ದಿನಿ೦ದ ಸರಕಾರದ...

ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ

0
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,...

ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭನನದಲ್ಲಿ ನೆರವೇರಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬಾಪೂಜಿ ಅವರೊಂದಿಗೆ ಸೇರಿಕೊಂಡು ಭಾರತ ರಾಷ್ಟ್ರೀಯ ಕಾಂಗ್ರೆಸ್ ಎಂಬ ಸಂಸ್ಥೆ...

ಜಿಲ್ಲಾ ಕಾಂಗ್ರೆಸ್ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆ

0
ಮ೦ಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...