23.1 C
Karnataka
Thursday, May 21, 2026
Home ರಾಜಕೀಯ

ರಾಜಕೀಯ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ: ನೂತನ ಪದಾಧಿಕಾರಿಗಳ ನೇಮಕ

0
ಮ೦ಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ,ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್ ಅಮೀನ್ ಬಜಾಲ್, ಟಿ.ಡಿ.ವಿಕಾಸ್ ಶೆಟ್ಟಿ,...

ಕಾವೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆ

0
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ‌ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಬಿಜೆಪಿಗೆ ಸೋಲಿನ ಭಯ ಈಗಲೇ ಶುರುವಾಗಿದೆ. ಅದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರಂಭಿಸಿದ್ದಾರೆ. ಆದರೆ ತಾನು...

ಪ್ರಧಾನಿ ರೋಡ್‌ ಶೋ ಭರ್ಜರಿ ಯಶಸ್ಸು: ಸತೀಶ್ ಕುಂಪಲ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಭರ್ಜರಿ ಯಶಸ್ಸು ಕಂಡಿದ್ದು, ಲಕ್ಷಾಂತರ ಜನರು ತಮ್ಮ ನೆಚ್ಚಿನ ನಾಯಕನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದರು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಪ್ರಧಾನಿ ಮೋದಿ ಅವರಿಗೆ ದ.ಕ ಜಿಲ್ಲಾ ಬಿಜೆಪಿ ಹಾಗೂ ಜನತೆಯ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಜಿಲ್ಲಾ...

ಬಲಿಷ್ಠ ಭಾರತ ನಿರ್ಮಾಣದಲ್ಲಿ ವಕೀಲರ ಸಮುದಾಯದ ಪಾತ್ರ ದೊಡ್ಡದು: ಪ್ರತಾಪ್ ಸಿಂಹ ನಾಯಕ್

0
ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು ವಕೀಲರ ಮಾತಿಗೆ ಸಮಾಜದಲ್ಲಿ ತೂಕ ಹೆಚ್ಚು. ಅವರ ಸಲಹೆಗಳನ್ನು ಮೀರುವ ವ್ಯಕ್ತಿಗಳು ಯಾರೂ ಇಲ್ಲ....

ಕಾಂಗ್ರೆಸ್ ಸರಕಾರ ಬಂದಾಗೆಲ್ಲ ಆತಂಕವಾದ ತಾಂಡವ: ನಳಿನ್ ಕುಮಾರ್ ಕಟೀಲ್

0
ಮಂಗಳೂರು: ರಾಜ್ಯದಲ್ಲಿ ಯಾವಾಗೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬರುತ್ತದೋ ಆಗೆಲ್ಲ ಈ ರಾಜ್ಯದಲ್ಲಿ ಆತಂಕವಾದ ತಾಂಡವವಾಡುತ್ತದೆ. ಕಾಂಗ್ರೆಸ್ ಗೆ ಬಹುಮತ ಬಂದು ಮೆರವಣಿಗೆ ಮಾಡುವಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗುತ್ತದೆ. ರಸ್ತೆಯಲ್ಲಿ ಮೊಳಗಿದ ಆ ಘೋಷಣೆ, ವಿಧಾನ ಸೌಧದೊಳಗೂ ವ್ಯಾಪಿಸುತ್ತದೆ. ದೇಶವಿರೋಧಿ ಹೇಳಿಕೆ ಕೊಟ್ಟವರನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದರೂ ಅವರನ್ನು ಕಾಂಗ್ರೆಸ್...

ಏ.14ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ್‍ಯಾಲಿ

0
ಮಂಗಳೂರು: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕರ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್...

ರೈಲ್ವೇ ಇಲಾಖೆ ಮಾರಾಟ ಹುನ್ನಾರ : ಸದಾಶಿವ ಉಳ್ಳಾಲ್ ಆರೋಪ

0
ಮಂಗಳೂರು: ಭೂನ್ಯಾಯ ಮಂಡಳಿ, ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೇ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆಂದು ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಆರೋಪಿಸಿದ್ದಾರೆ.ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ:ಪದ್ಮರಾಜ್ ಆರ್. ಪೂಜಾರಿ

0
ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ರಾಜಕೀಯದ ಕನಸು ಕಂಡವನು ನಾನಲ್ಲ. ಆದರೆ ಎಲ್ಲರ ಒತ್ತಾಸೆಯ ಮೇರೆಗೆ ರಾಜಕೀಯಕ್ಕೆ ಬರುವಂತಾಯಿತು. ನಾರಾಯಣಗುರುಗಳ ಆದರ್ಶವನ್ನೇ ಮೂಲವಾಗಿಟ್ಟುಕೊಂಡು ಸಾಮಾಜಿಕ ಕಾರ್ಯಗಳಿಗೆ ಮುಂದಾದೆ. ಇಂದು ರಾಜಕೀಯದ ಅವಕಾಶವೂ...

ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್

0
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...

ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ರೂಪ ಚೇತನ್ ಅಧಿಕಾರ ಸ್ವೀಕಾರ

0
ಮಂಗಳೂರು: ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ರೂಪ ಚೇತನ್ ಅವರ ಅಧಿಕಾರ ಸ್ವೀಕಾರ ಹಾಗೂ ಪದಾಧಿಕಾರಿಗಳ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಬಳಿಕ ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ರಮಣಿ ಉಮೇಶ್, ಮೀನಾ...