ಅಗಲ್ಪಾಡಿ ಕ್ಷೇತ್ರದಲ್ಲಿ ಯಾಗ: ಭವ್ಯ ಶೋಭಯಾತ್ರೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಕಾ ಯಾಗದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಮಂಗಳವಾರ ಭವ್ಯ ಶೋಭಯಾತ್ರೆಯೊಂದಿಗೆ ನಡೆಯಿತು.
ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಿಂದ ಆರಂಭಗೊಂಡ ಹಸಿರುವಾಣಿ ಹೊರೆಕಾಣಿಕೆಗೆ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು....
ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ
ಸುರತ್ಕಲ್: ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ ಹೇಳಿದರು .ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರೀಲ್ 26 ರಂದು...
ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...
ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ
ಸುರತ್ಕಲ್: ಏಪ್ರಿಲ್ 22ರಿಂದ30ರ ತನಕ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ನಡೆಯಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು...
ಶ್ರೀನಿವಾಸ ವಿಶ್ವವಿದ್ಯಾಲಯದ ವೈಕುಂಠದಲ್ಲಿ ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾಪನೆ, ಶ್ರೀನಿವಾಸ ಕಲ್ಯಾಣ ಸಂಪನ್ನ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು ಎ.ಶಾಮರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಗ್ರೂಪ್ಆ ಫ್ ಕಾಲೇಜುಗಳ ಸಹಯೋಗದೊಂದಿಗೆ ಮಂಗಳೂರಿನ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಕ್ಯಾಂಪಸ್ ವೈಕುಂಠದಲ್ಲಿ ಆಧ್ಯಾತ್ಮಿಕ ಆಚರಣೆ ಯಶಸ್ವಿಯಾಗಿ ನೆರವೇರಿತು.ಬೆಳಗ್ಗೆ 4:30ಕ್ಕೆ ಭಕ್ತರು ಗಣಹೋಮದಲ್ಲಿ ಪಾಲ್ಗೊಂಡು, ನಂತರ ಪ್ರತಿಷ್ಠಾ ಪ್ರಸನ್ನ ಪೂಜೆಯೊಂದಿಗೆ ದಿನವು ಶ್ರದ್ಧಾಭಕ್ತಿಯಿಂದ ಪ್ರಾರಂಭವಾಯಿತು. ಕಲಶಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಕಲ್ಪೋಕ್ತ ಪೂಜೆ, ಮತ್ತು ದಂಪತಿ...
ಮಾ.25: ಕುಲಶೇಖರ ಹೋಲಿ ಕ್ರಾಸ್ ಚರ್ಚಿನಲ್ಲಿ “ಶಿಲುಬೆಯ ಹಾದಿ” ಕಾಯ೯ಕ್ರಮ
ಮಂಗಳೂರು: ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ.25 ರ ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಕಾರ್ಯಕ್ರಮ ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.ಮಂಗಳೂರಿನ...
ನ.30: ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ
ಮಂಗಳೂರು: ವಾಮಂಜೂರು ಮೂಡುಶೆಡ್ಡೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಭಜನೋತ್ಸವದೊಂದಿಗೆ ಸಂಪನ್ನಗೊಂಡ ಶ್ರೀರಾಮ ವೈಭವ
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಶ್ರೀರಾಮ ವೈಭವ ಭಜನೋತ್ಸವ ಕಾರ್ಯಕ್ರಮ ಕೆನರಾ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಕೃಷ್ಣಮಂದಿರದ ಶ್ರೀರಾಮ ದರ್ಬಾರ್ ನಲ್ಲಿ ನಡೆಯಿತು. ಸೀತಾ ಸಹಿತ ಶ್ರೀ ರಾಮನ ದಿವ್ಯಮೂರ್ತಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.
ಮುಂಜಾನೆಯಿಂದಲೇ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ...
ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರ ಜಾರಂದಾಯ ದೈವಸ್ಥಾನ ನಿರ್ಮಾಣಕ್ಕೆ ನಿಧಿಕುಂಭ-ಶಿಲಾನ್ಯಾಸ
ಗುರುಪುರ : ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರದ ಸಾನಿಧ್ಯದಲ್ಲಿ ನ. ೩೦ರಂದು ಬೆಳಿಗ್ಗೆ ೯ಕ್ಕೆ ಜಾರದ ಕಲ್ಲುರ್ಟಿ ದೈವ, ಸಾರಾಳ ಜುಮಾದಿ(ಧೂಮಾವತಿ) ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಆದಿ ಜಾರ ಕ್ಷೇತ್ರದ ಜಾರದ ಗಿರಿಯಲ್ಲಿ ಗ್ರಾಮದ ದೈವ ಶ್ರೀ ಜಾರಂದಾಯ ಬಂಟ, ಸಾರಾಳ ಜುಮಾದಿ ಬಂಟ...
ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು : ಹೊಸ ಕಟ್ಟಡದ ಉದ್ಘಾಟನೆ
ವಾಮಂಜೂರು: ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು ಇದರ ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ದಿವ್ಯ ಬಲಿಪೂಜೆಯೊಂದಿಗೆ ಡಿ. 3ರ೦ದು ನೆರವೇರಿತು.ವಂದನೀಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾರವರು ಇತರ ಹನ್ನೆರಡು ಮಂದಿ ಗುರುಗಳೊಂದಿಗೆ ಪೂಜಾವಿಧಿಯನ್ನು ನಡೆಸಿದರು. ಬೆಥನಿ ಸಂಸ್ಥೆಯ ಮಹಾಮಾತೆ ವಂದನೀಯ ಭಗಿನಿ ರೋಸ್ಸೆ ಲಿನ್ರವರು ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು...








