ಬೆಳಗಾವಿ: ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ
ಮ೦ಗಳೂರು: ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಡಿ.11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ...
ಬಹುಸಂಸ್ಕೃತಿ ಉತ್ಸವದಲ್ಲಿ ವಿವಿಧ ಭಾಷೆಗಳ ಸಾಂಸ್ಕೃತಿಕ ವೈವಿಧ್ಯ
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ʼಬಹುಸಂಸ್ಕೃತಿ ಉತ್ಸವʼದಲ್ಲಿ ವಿವಿಧ ಭಾಷಾ ಸಂಸ್ಕೃತಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್...
ವಿಪತ್ತು ನಿರ್ವಹಣೆ ಯೋಜನೆ : ಅಮೆರಿಕ ತಂಡದಿಂದ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು ಎಸ್ ಕಾನ್ಸುಲೇಟ್ ಜನರಲ್ ಚೆನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ...
ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...
ನ.19ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ
ಮಂಗಳೂರು: ನವೆಂಬರ್ 19ರಂದು ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಮೇಯರ್ ನೇರ ಪೋನ್-ಇನ್ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ.
ಸಾರ್ವಜನಿಕರು ನೇರ ಫೆÇೀನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824-2220318 ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜವಾಹರಲಾಲ್ ನೆಹರೂ ಅವರಿ೦ದ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ:ಕೆ.ಹರೀಶ್ ಕುಮಾರ್
ಮಂಗಳೂರು: ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರೂರವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ...
ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು.ಕೇಂದ್ರೀಯ...
ವಿಧಾನ ಪರಿಷತ್ ಚುನಾವಣೆ : ಗುರುವಾರ ಮತ ಎಣಿಕೆ
ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದೆ. ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ...
ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ
ಮ೦ಗಳೂರು: ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯಲ್ಲಿ ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಅಕ್ಟೋಬರ್ 13ರಂದು ಆಯೋಜಿಸಲಾದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್, ಅವರಿಗೆ ನೀಡಿ ಗೌರವಿಸಿತು.
35 ವರ್ಷಗಳ ಹಿಂದೆ...
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಥಿ೯ಕ ನೆರವು
ಮ೦ಗಳೂರು: ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವುಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿದರು.ಮೈಕಲ್ ಡಿ ಸೋಜ ಅವರು ಮಾತನಾಡಿ ಮಕ್ಕಳು ಹೆತ್ತವರ ಬಗ್ಗೆ...







