28.8 C
Karnataka
Sunday, May 19, 2024

ಡಿ.30ರಂದು ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್‌(ಗೋವಾ) ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸೆಂಟ್ರಲ್‌ ರೈಲು ನಿಲ್ದಾಣದ ಒಂದೇ ಫ್ಲ್ಯಾಟ್‌ಫಾರಂನಲ್ಲಿಔಪಚಾರಿಕ ಸಮಾರಂಭ ನಡೆಯಲಿದೆ.
ಈ ರೈಲು ನಿಗದಿತ 4.45 ಗಂಟೆ ಅವಧಿಯಲ್ಲಿ ಮಂಗಳೂರಿನಿಂದ ಮಡ್ಗಾಂವ್‌ ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ 2 ನಿಮಿಷಗಳ ನಿಲುಗಡೆ ಇರುತ್ತದೆ. ಗುರುವಾರ ತಾಂತ್ರಿಕ ನಿರ್ವಹಣೆ ಸಲುವಾಗಿ ವಂದೇ ಭಾರತ್‌ ಸಂಚಾರ ಇರುವುದಿಲ್ಲ. ಪ್ರಯಾಣ ದರ 1,200 ರು. ಆಗಿರುತ್ತದೆ. ರೈಲಿನಲ್ಲಿ ಊಟೋಪಹಾರ ಬೇಕಾದರೆ, ಬುಕ್ಕಿಂಗ್‌ ವೇಳೆ ಪ್ರತ್ಯೇಕವಾಗಿ ಮೆನುವಿಗೆ ಬೇಡಿಕೆ ಸಲ್ಲಿಸಬೇಕು .


ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸುದ್ದಿಗಾರರೊ೦ದಿಗೆ ಮಾತನಾಡಿ ವಂದೇ ಭಾರತ್‌ ರೈಲು ಸಂಚಾರದಿಂದ ಉಡುಪಿ, ಕಾರವಾರ ಹಾಗೂ ಗೋವಾ ಪ್ರವಾಸಿಗರಿಗೆ ಬಹಳ ಅನುಕೂಲವಾಗಲಿದೆ. ಅಲ್ಲಿಂದ ದ.ಕ. ಜಿಲ್ಲೆಗೆ ಪ್ರವಾಸಕ್ಕೆ ಆಗಮಿಸುವವರಿಗೂ ಉಪಯುಕ್ತವಾಗಲಿದೆ. ಈ ರೈಲು ಸಂಚಾರ ಧಾರ್ಮಿಕ, ಬೀಚ್‌ ಹಾಗೂ ಶೈಕ್ಷಣಿಕ ಪ್ರವಾಸಕ್ಕೆ ನೆರವಾಗಲಿದೆ. ಗೋವಾಕ್ಕೆ ಅನ್ಯ ಕೆಲಸದ ನಿಮಿತ್ತ ತೆರಳುವವರು ಒಂದೇ ದಿನದಲ್ಲಿ ಕೆಲಸ ಮುಗಿಸಿ ಬರಬಹುದಾಗಿದೆ ಎಂದರು.
ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ರೈಲಿಗೆ ಮುಂಬೈ-ಮಡ್ಗಾಂವ್‌ ವಂದೇ ಭಾರತ್‌ ರೈಲಿನ ಸಂಪರ್ಕ ಕಲ್ಪಿಸಲಾಗಿದೆ. ಮಂಗಳೂರಿನಿಂದ ಬೆಳಗ್ಗೆ 8.30ಕ್ಕೆ ಹೊರಟು ಮಧ್ಯಾಹ್ನ 1.15ಗಂಟೆಗೆ ಮಡ್ಗಾಂವ್‌ಗೆ ತಲುಪಲಿದೆ. ಅಲ್ಲಿಂದ ಮುಂಬೈಗೆ ವಂದೇ ಭಾರತ್ ರೈಲು ಸಂಪರ್ಕ ಸಿಗಲಿದೆ. ಹಾಗಾಗಿ ಮುಂಬೈಗೆ ಪ್ರಯಾಣಿಸುವವರು ಮಂಗಳೂರಿನಿಂದ ವಂದೇ ಭಾರತ್‌ ರೈಲಿನ
ಮೂಲಕ ಕೇವಲ 10 ಗಂಟೆಯಲ್ಲಿ ತಲುಪಲು ಸಾಧ್ಯವಿದೆ ಎಂದು ಹೇಳಿದರು.
ಉದ್ಘಾಟನಾ ರೈಲು ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮಧ್ಯಾಹ್ನ12.25 ಉಡುಪಿ, ಅಲ್ಲಿಂದ 12.27ಕ್ಕೆ ಹೊರಟು 2.52 ಕಾರವಾರ, ಅಲ್ಲಿಂದ 2.54ಕ್ಕೆಹೊರಟು ಸಂಜೆ 4.40ಕ್ಕೆ ಮಡ್ಗಾಂವ್‌ ತಲುಪಲಿದೆ. ಡಿ.31ರಿಂದ ಗುರುವಾರ ಹೊರತುಪಡಿಸಿ ಪ್ರತಿನಿತ್ಯ ಮಂಗಳೂರು-ಮಡ್ಗಾಂವ್‌ ನಡುವೆ ವಂದೇ ಭಾರತ್ ರೈಲು ಸಂಚರಿಸಲಿದೆ.ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಸುಮಾರು 350 ಕೋಟಿ ರು.ಗಳ ಕಾಮಗಾರಿಗೆ
ಟೆಂಡರ್‌ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಕೂಡ ಆರಂಭವಾಗಲಿದೆ. ದ.ಕ.ಜಿಲ್ಲೆಯಲ್ಲಿಕೇಂದ್ರ ಸರ್ಕಾರದಿಂದ ರೈಲ್ವೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ 416.98 ಕೋಟಿ ರು.ಮಂಜೂರಾಗಿದೆ. ಸೆಂಟ್ರಲ್‌ ನಿಲ್ದಾಣದಲ್ಲಿ ವಿವಿಧ ಕಾಮಗಾರಿಗೆ 13.29 ಕೋಟಿ ರು., ಸಕಲೇಶಪುರ-ಮಂಗಳೂರು ವರೆಗೆ 7 ಲೆವೆಲ್ ಕ್ರಾಸ್‌ ಮೇಲ್ಸೇತುವೆಯಾಗಿ ಪರಿವರ್ತಿಸಲು
44.13 ಕೋಟಿ ರು., ಸೆಂಟ್ರಲ್ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆ ಆಧುನೀಕರಣಗೊಳಿಸಲು 1.40 ಕೋಟಿ ರು., ಹೊಸ ಫ್ಲ್ಯಾಟ್‌ಫಾರಂಗಳಿಗೆ ಶೆಲ್ಟರ್‌, ಲಿಫ್ಟ್‌ ಅಳವಡಿಕೆಗೆ 2.5ಕೋಟಿ ರು. ಮಂಜೂರಾಗಿದೆ. ಪ್ರಸಕ್ತ 1,537.65 ಕೋಟಿ ರು.ಗಳ ವಿವಿಧ ಕಾಮಗಾರಿಗಳುಪ್ರಗತಿಯಲ್ಲಿವೆ ಎಂದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, ರೈಲ್ವೆ ಪಾಲಕ್ಕಾಡ್‌ ವಿಭಾಗೀಯ ಅಧಿಕಾರಿ ಅರುಣ್‌ಚತುರ್ವೇದಿ, ಎಡಿಆರ್‌ಎಂ ಜಯಕೃಷ್ಣ ಉಪಸ್ಥತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles