24.9 C
Karnataka
Thursday, April 30, 2026

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

ಮಂಗಳೂರು: ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್‍ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು.
ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ ಇದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹ ಬಳಕೆ ಅನಿಲ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles