ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ತೊಕ್ಕೊಟ್ಟು ಅಲೆಕಳ ನಿವಾಸಿ ಮೊಹಮ್ಮದ್ ಇರ್ಷಾದ್ ( 28 ) ಬ೦ಧಿತ ಆರೋಪಿ.

ನ.10 ರಂದು ಓರ್ವ ವ್ಯಕ್ತಿ ಅಕ್ರಮವಾಗಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಆರೋಪಿತನಿಂದ 70 ಸಾವಿರ ರೂ ಮೌಲ್ಯದ 12 ಗ್ರಾಂ ನಿಷೇಧಿತ ಎ೦ಡಿಎ೦ಎ, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿರುತ್ತಾರೆ.
