23.9 C
Karnataka
Sunday, April 20, 2025

ಫೆ.27 : ಬಲೆ ತುಳು ಓದುಗ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಮೂರನೇ ಕಾರ್ಯಕ್ರಮ ಫೆ. 27 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಗುರುವಾರದಂದು ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ- ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 40 ವಿದ್ಯಾರ್ಥಿಗಳು ಉರ್ವಾಸ್ಟೋರ್‍ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ ಇಲಾಖೆಯ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಪ್ರಿಯಾ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.


Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles