24.5 C
Karnataka
Thursday, April 30, 2026

ಚಿನ್ನ ದರೋಡೆ ಮಾಡಿದ ಆರೋಪಿಗಳ ಬ೦ಧನ

ಮ೦ಗಳೂರು: ಕಸ್ಟಮ್ ಅಧಿಕಾರಿಗಳೆ೦ದು ಹೇಳಿ ವ್ಯಕ್ತಿಯೋವ೯ರಿ೦ದ ಬಂಗಾರದ ಗಟ್ಟಿಯನ್ನು ಕಿತ್ತುಕೊಂಡು ದರೋಡೆ ಮಾಡಿದ ಆರೋಪಿಗಳನ್ನು ಮ೦ಗಳೂರು ಪೊಲೀಸರು ಬ೦ಧಿಸಿದ್ದಾರೆ.
ಆ.13 ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೋಟೆಲ್ನ ಸಮೀಪ ಆಟೋ ಕಾಯುತ್ತಿದ್ದಾಗ, ಆರು ಜನ ಅಪರಿಚಿತರು ಇನ್ನೋವಾ ಕಾರಿನಲ್ಲಿ ಬಂದು ದೂರುದಾರರಾದ ಹರಿ ಭಾನುದಾಸ ಥೋರಟ್ರನ್ನು ಸಂಪರ್ಕಿಸಿ ತಾವು ಕಸ್ಟಮ್ ಅಧಿಕಾರಿಗಳು, ನಿಮ್ಮ ವಿರುದ್ದ ಮಾಹಿತಿ ಇದೆ, ವಿಚಾರಣೆ ಮಾಡಬೇಕು ಎಂದು ತಿಳಿಸಿ, ತಮ್ಮೊಂದಿಗೆ ಬನ್ನಿ ಅಂತಾ ಗದರಿಸಿ ಅವರನ್ನು ಹಿಡಿದುಕೊಂಡು ಬಲವಂತವಾಗಿ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದರು. ಉಡುಪಿ ಹೈವೇ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಲುಪಿದಾಗ ಬಳಿ ಥೋರಟ್‌ ಬಳಿ ಇದ್ದ ಸುಮಾರು 35,00,000/- ರೂಪಾಯಿ ಬೆಲೆ ಬಾಳುವ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ಹೆದರಿಸಿ ಕಿತ್ತುಕೊಂಡು ದರೋಡೆ ಮಾಡಿ, ಅವರನ್ನು ಕುಮಟಾ ತಾಲೂಕಿನ ಶಿರಸಿ ಬಳಿ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು.
ಈ ಬಗ್ಗೆ ಥೋರಟ್‌ ಕುಮುಟಾ ಠಾಣೆಯಲ್ಲಿ ದೂರು ನೀಡಿದಾಗ ಪ್ರಕರಣ ದಾಖಲಿಸಿ ಸರಹದ್ದಿನ ಆಧಾರದ ಮೇಲೆ ಮುಂದಿನ ಕ್ರಮದ ಬಗ್ಗೆ ಮಂಗಳೂರು .ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣವನ್ನು ಭೇಧಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಆಯುಕ್ತರು, ಸಿಸಿಬಿ ಅಧಿಕಾರಿ ಮತ್ತು ಕೇಂದ್ರ ಉಪವಿಭಾಗದಿಂದ ತಂಡವನ್ನು ರಚಿಸಸಲಾಗಿತ್ತು. ಪ್ರಕರಣದ ತನಿಖೆಯಲ್ಲಿ ಕಂಡ ಬಂದ ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಮತ್ತು ಇತರೆ ಮಾಹಿತಿಗಳಿಂದ ಈವರೆಗೆ ಒಟ್ಟು 5 ಜನ ಆರೋಪಿಗಳನ್ನು ಸೋಮವಾರ ಸಂಜೆ ಮಹಾರಾಷ್ಟ್ರದ ಪುಣೆ ಎಂಬಲ್ಲಿ ಪತ್ತೆ ಮಾಡಲಾಗಿದೆ. ಆರೋಪಿಗಳು ವಿಚಾರಣಾ ಕಾಲದಲ್ಲಿ ತಪ್ಪೋಪ್ಪಿಗೆ ಮಾಡಿದ್ದು ದೊಚ್ಚಿದ್ದ ಚಿನ್ನವನ್ನು ಮಾರಾಟ ಮಾಡಿದ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದು, ಮುಂದೆ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗುವುದು. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನ ಪಡಿಸಲಾಗುವುದು ಎ೦ದು ಪೊಲೀಸರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles