22.8 C
Karnataka
Sunday, June 15, 2025

ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಮಂಗಳೂರು : ಇಂದಿರಾ ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
ಸಚಿವರು ಮೂಡಬಿದ್ರೆಯಲ್ಲಿ ಮಾತನಾಡಿ ಸರ್ಕಾರದ ಯೋಜನೆಗಳ ಲಾಭವು ನೇರವಾಗಿ ಬಡವರಿಗೆ ತಲುಪಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಧ್ಯೇಯವಾಗಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಲ್ಯದಲ್ಲಿ ತಾವು ಅನುಭವಿಸಿದ ಹಸಿವಿನ ಸಂಕಟವನ್ನು ಗಮನದಲ್ಲಿಟ್ಟುಕೊಂಡು ಬಡಜನರು ಮತ್ತು ದುರ್ಬಲರು ಹಸಿವಿನಿಂದ ಇರಬಾರದು ಮತ್ತು ಸರಕಾರದ ಯೋಜನೆಗಳ ಲಾಭ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರು . ತಮ್ಮ ಪ್ರಥಮ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಇಂದಿರಾ ಕ್ಯಾಂಟೀನ್‍ಗೆ ಚಾಲನೆ ನೀಡಿದರು. ರಾಜ್ಯದ ಎಲ್ಲಾ ಪ್ರಮುಖ ಪೇಟೆ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ 4 ಕಡೆ ಇಂದಿರಾ ಕ್ಯಾಂಟೀನ್ ಮಂಜೂರಾಗಿದ್ದು ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿಯಲ್ಲಿ ಇಂದು ಚಾಲನೆಗೊಂಡಿದೆ. ಬಜಪೆಯಲ್ಲಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳಲಿದೆ ಎಂದು ಅವರು ತಿಳಿಸಿದರು.
ಅಭಿವೃದ್ಧಿಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಸಮಾನವಾಗಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಮೂಡಬಿದ್ರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles