ಮ೦ಗಳೂರು: 2024–25ನೇ ಹಣಕಾಸು ವರ್ಷದಲ್ಲಿ ಎಂ.ಸಿ.ಸಿ. ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ 9.51 ಕೋಟಿ ರೂ. ಅಭೂತಪೂರ್ವ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಹೇಳಿದರು.
ಅವರು ಸೆ.21ರಂದು ನಡೆದ ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎಂ.ಸಿ.ಸಿ. ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟೆಂಬರ್ 21ರ೦ದು ಮಂಗಳೂರಿನ ಕೊಡಿಯಾಲ್ಬೈಲ್ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್ನಲ್ಲಿ ನಡೆಯಿತು.

9.51 ಕೋಟಿ ರೂ.ನಿವ್ವಳ ಲಾಭ, 705.40 ಕೋಟಿ ರೂ.ಠೇವಣಿಗಳು (10% ಹೆಚ್ಚಳ), 535.49 ಕೋಟಿ ರೂ. ಮುಂಗಡಗಳು (25.21% ಬೆಳವಣಿಗೆ), 830.30 ಕೋಟಿ ರೂ.ದುಡಿಯುವ ಬಂಡವಾಳ (10.03% ಹೆಚ್ಚಳ), 32.43 ಕೋಟಿ ರೂ.ಷೇರು ಬಂಡವಾಳ (14.07% ಬೆಳವಣಿಗೆ), ಎನ್ಪಿಎ 1.40%, ಆರ್ ಒಎ 1.15%. ಮಾರ್ಚ್ 31, 2025 ರಂತೆ ಸಿಅರ್ಎಆರ್ 18.92% ಇದ್ದು ಇದು ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಕನಿಷ್ಟ ಮಿತಿ ಶೇ.12ಕ್ಕಿಂತ ಹೆಚ್ಚಾಗಿರುತ್ತದೆ ಮತ್ತು ವ್ಯವಹಾರ ವಹಿವಾಟು 1300 ಕೋಟಿ ರೂ. ದಾಟಿದೆ ಎಂದು ಅಧ್ಯಕ್ಷರು ವಿವರಿಸಿದರು.
ದೀಪ ಬೆಳಗಿಸುವ ಕಾರ್ಯವನ್ನು ಸಹಕಾರ ರತ್ನ ಅನಿಲ್ ಲೋಬೊ (ಅಧ್ಯಕ್ಷರು), ಜೆರಾಲ್ಡ್ ಜೂಡ್ ಡಿ’ಸಿಲ್ವಾ (ಉಪಾಧ್ಯಕ್ಷರು), ಸಿ.ಜಿ. ಪಿಂಟೊ (ವೃತ್ತಿಪರ ನಿರ್ದೇಶಕರು) ಮತ್ತು ಆಹ್ವಾನಿತರಾದ ಪ್ರವೀಣ್ ಸಂದೀಪ್ ಲೋಬೊ (ವಕೀಲರು ಮತ್ತು ನೋಟರಿ), ಮೆಲ್ವಿನ್ ಅರಾನ್ಹಾ (ಉಪಾಧ್ಯಕ್ಷರು, ಪ್ಯಾರಿಷ್ ಕೌನ್ಸಿಲ್, ಶಿರ್ವಾ ಚರ್ಚ್) ಅನಿತಾ ಫ್ರಾಂಕ್ (ಕಾರ್ಯದರ್ಶಿ, ಮಹಿಳಾ ಆಯೋಗ, ಮಂಗಳೂರು ಡಯಾಸಿಸ್), ಮೇಬಲ್ ಡಿಸೋಜಾ (ಮಾಜಿ ಅಧ್ಯಕ್ಷೆ ಕ್ಯಾಥೋಲಿಕ್ ಸಭಾ, ಕುಂದಾಪುರ) ಮತ್ತು ಜೆ.ವಿ. ಡಿಮೆಲ್ಲೊ (ಎಂಸಿಸಿ ಬ್ಯಾಂಕ್ನ ಮಾಜಿ ನಿರ್ದೇಶಕರು) ನಿರ್ವಹಿಸಿದರು. ಬ್ಯಾಂಕಿನ ಸ್ಥಾಪಕ ಪಿಎಫ್ಎಕ್ಸ್ ಸಲ್ಡಾನ್ಹಾ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಕಳೆದ ವರ್ಷದಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿ’ಸಿಲ್ವಾ ಅವರು 106ನೇ ವಾರ್ಷಿಕ ಮಹಾಸಭೆಯ ನಡವಳಿಗಳನ್ನು ಓದಿದರು. 2024–25ರ ಲೆಕ್ಕಪರಿಶೋಧಿತ ಹಣಕಾಸು ತ:ಖ್ತೆ, ಲೆಕ್ಕಪರಿಶೋಧನಾ ವರದಿ ಮತ್ತು ಅನುಸರಣೆ, 2025-26ನೇ ವರ್ಷದ ಕಾರ್ಯ ಚಟುವಟಿಕೆಗಳು ಮತ್ತು 2025–26ರ ಬಜೆಟ್ ಮತ್ತು ಉಪವಿಧಿಗಳಿಗೆ ಪ್ರಸ್ತಾವಿತ ತಿದ್ದುಪಡಿಗಳನ್ನು ವಾರ್ಷಿಕ ಮಹಾಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.
ನಿರ್ದೇಶಕರಾದ ಅಂಡ್ರೂ ಡಿಸೋಜ, ಜೋಸೆಫ್ ಎಮ್. ಅನಿಲ್ ಪತ್ರಾವೊ, ಡಾ| ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ಎಲ್ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿ’ಸೋಜ, ಹೆರಾಲ್ಡ್ ಮೊಂತೇರೊ, ಜೆ. ಪಿ. ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ಉಪಸ್ಥಿತರಿದ್ದರು.
ಬ್ರಹ್ಮಾವರ ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ನಿರೂಪಿಸಿದರು.


