ಮ೦ಗಳೂರು: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಲು ಮತ್ತು ಬೆಳ್ಮಣ್ ಪ್ರದೇಶದ ಸುತ್ತಮುತ್ತಲಿನ ಶಿಕ್ಷಕರ ಸಮರ್ಪಣೆ ಮತ್ತು ಸೇವೆಯನ್ನು ಗೌರವಿಸಲು ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಸೆ.9 ರಂದು ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಮುಲ್ಲಡ್ಕ ಡಾನ್ ಬಾಸ್ಕೋ ಶಾಲೆಯ ಪ್ರಾಂಶುಪಾಲ ಫಾದರ್ ಮಿಲ್ಟನ್ ಫೆರ್ನಾಂಡಿಸ್, ನಿವೃತ್ತ ಶಿಕ್ಷಕಿ ಮತ್ತು ಸೈಂಟ್ ಜೋಸೆಫ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮಾಜಿ ಮುಖ್ಯೋಪಾಧ್ಯಾಯಿನಿ ಲಿಡ್ವಿನ್ ಅರಾನ್ಹಾ, ಮತ್ತು ಕುರ್ಕಿಲಬೆಟ್ಟು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಗ್ರೆಟ್ಟಾ ಮಸ್ಕರೇನ್ಹಸ್ ಅವರು ಗೌರವ ಅತಿಥಿಗಳಾಗಿದ್ದರು.

ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರು, ಹೊಸದಾಗಿ ಸ್ಥಾಪನೆಯಾದ, ಬೆಳ್ಮಣ್ ಶಾಖೆಯು ಕೇವಲ ಆರು ತಿಂಗಳಲ್ಲಿ 6 ಕೋಟಿಗೂ ಮೀರಿದ ವಹಿವಾಟು ಸಾಧಿಸಿದೆ .ಇದು ಸ್ಥಳೀಯ ಸಮುದಾಯದ
ಫಾದರ್ ಮಿಲ್ಟನ್ ಫೆರ್ನಾಂಡಿಸ್ ಅವರು ತಮ್ಮ ಭಾಷಣದಲ್ಲಿ, ಶಿಕ್ಷಕರನ್ನು ಗೌರವಿಸಲು ಬ್ಯಾಂಕ್ ಮತ್ತು ಇದರ ಸಿಬ್ಬಂದಿ ತೆಗೆದುಕೊಂಡ ಉಪಕ್ರಮವನ್ನು ಶ್ಲಾಘಿಸಿದರು. ಶಿಕ್ಷಕರಿಗೆ ನೀಡಿದ ಮನ್ನಣೆಗೆ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದರು.
ಮತ್ತೊಬ್ಬ ಅತಿಥಿ ಲಿಡ್ವಿನ್ ಅರಾನ್ಹಾ ಅವರು ಬ್ಯಾಂಕಿನ ಚಿಂತನಶೀಲ ಕಾರ್ಯವನ್ನು ಶ್ಲಾಘಿಸಿದರು. 18–19ನೇ ಸಾಲಿನ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಲಿಡಿಯಾ ಅರಾನ್ಹಾ ಮತ್ತು ಕುರ್ಕಿಲಬೆಟ್ಟು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಗ್ರೆಟ್ಟಾ ಮಸ್ಕರೇನ್ಹಸ್ ಅವರನ್ನು ಸನ್ಮಾನಿಸಲಾಯಿತು. ಒಟ್ಟು 60 ಶಿಕ್ಷಕರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯಿತು,
ಡಾ| ಸರ್ವಪಲ್ಲಿ ರಾಧಾಕೃಷ್ಜನ್ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ನಿರ್ದೇಶಕ ಆಂಡ್ರ್ಯೂ ಡಿಸೋಜಾ ಸ್ವಾಗತಿಸಿದರು. ನಿರ್ದೇಶಕರಾದ ಎಲ್ರಾಯ್ ಕೆ. ಕ್ರಾಸ್ಟೊ, ಡಾ| ಜೆರಾಲ್ಡ್ ಪಿಂಟೊ, ಶಿಕ್ಷಕರು ಮತ್ತು ಗಣ್ಯರು ಸೇರಿದಂತೆ ಅತಿಥಿಗಳು ಭಾಗವಹಿಸಿದರು,


