ಮ೦ಗಳೂರು: ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂ. 14.ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಟವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ ಕಳೆದ ದಶಕದಲ್ಲಿ ಬ್ಯಾಂಕಿನ ಇತ್ತೀಚಿಗಿನ ಬೆಳವಣಿಗೆಯ ಬಗ್ಗೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಬ್ಯಾಂಕಿನ 113 ವರ್ಷಗಳ ಪರಂಪರೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು ಮತ್ತು ಬ್ಯಾಂಕನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಿಬ್ಬಂದಿಯ ಅಚಲ ಪ್ರಯತ್ನಗಳನ್ನು ಗುರುತಿಸಿದರು. ಪ್ರಶಸ್ತಿಯನ್ನು ಗಳಿಸಿದ ಶಾಖೆಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಗಳನ್ನು ಅಬಿನಂದಿಸಿ, ಮುಂದಿನ ವರ್ಷದಲ್ಲಿ ಯುವ ಸಿಬ್ಬಂದಿಗಳು ಮುಂದೆ ಬಂದು ತಮಗೆ ನೀಡಿದ ಗುರಿಯನ್ನು ತಲುಪಲು ಶ್ರಮ ವಹಿಸಿ ಶಾಖೆಗಳಿಗೆ ನೀಡಿದ ಗುರಿಯನ್ನು ತಲುಪಲು ಕಾರಣಕರ್ತರಾಗಬೇಕು ಎಂದರು.
ಕೆನರಾ ಬ್ಯಾಂಕಿನ ಮಾಜಿ ಜನರಲ್ ಮ್ಯಾನೇಜರ್ ಬಾಲಚಂದ್ರ ರಾವ್ ಅವರು , ಬ್ಯಾಂಕಿನ ಸಲಹೆಗಾರರಾದ ಎಸ್. ಎಚ್. ವಿಶ್ವೆಸ್ವರಯ್ಯ ಗುರಿ ಸಾಧಿಸಿದ ಮತ್ತು ಗುರಿ ಸಾಧಿಸಲು ಶ್ರಮ ವಹಿಸಿದ ಶಾಖ್ಯಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದರು.

ಸಿಬ್ಬಂದಿ ಕಾರ್ಯಕ್ಷಮತೆ ವಿಮರ್ಶೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ – 2025 ರ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಎನ್ಐಟಿಕೆ ಸುರತ್ಕಲ್ನ ಮಾಜಿ ಪ್ರಾಧ್ಯಾಪಕ ಮತ್ತು ಡೀನ್ ಡಾ| ಅಲೋಶಿಯಸ್ ಸಿಕ್ವೇರಾ ಮತ್ತು ವಂದನೀಯ ಅರುಣ್ ಲೋಬೊ (ಪದುವಾ ಕಾಲೇಜು ಪ್ರಾಂಶುಪಾಲರು) ಮುಖ್ಯ ಅತಿಥಿಗಳಾಗಿದ್ದರು, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಮತ್ತು ಆಡಳಿತ ಮಂಡಳಿಅಯ ಎಲ್ಲಾ ನಿರ್ದೇಶಕರು ವೇದಿಕೆಯಲ್ಲಿದ್ದರು. 30 ವರ್ಷಗಳ ಸೇವೆಯ ನಂತರ ಏಪ್ರಿಲ್ 2025 ರಲ್ಲಿ ನಿವೃತ್ತರಾದ ಬ್ಯಾಂಕಿನ ಸಿಬ್ಬಂದಿ ರಾಬರ್ಟ್ ಫೆರ್ನಾಂಡಿಸ್ ಅವರನ್ನು ಕುಟುಂಬ ಸಮೇತ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಪಠ್ಯೇತರ ಕ್ಷೇತ್ರದಲ್ಲಿ ಸಾಧನೆಗೈದ ಸಿಬ್ಬಂದಿ ಮತ್ತು ನಿದೇಶಕರ ಮಕ್ಕಳನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ವಿವಾಹವಾದ ಸಿಬ್ಬಂದಿ ಸದಸ್ಯರನ್ನು ಸನ್ಮಾನಿಸಲಾಯಿತು. ಹೊಸದಾಗಿ ವಿವಾಹವಾದ ವೃತ್ತಿಪರ ನಿರ್ದೇಶಕ ಸುಶಾಂತ್ ಸಲ್ಡಾನಾ ಅವರನ್ನು ಅವರ ಪತ್ನಿಯೊಂದಿಗೆ ಸನ್ಮಾನಿಸಲಾಯಿತು.
ಸುನಿಲ್ ಮೆನೆಜಸ್, ಜನರಲ್ ಮ್ಯಾನೇಜರ್ ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಿದರು, ವೈಯಕ್ತಿಕ ಕಾರ್ಯಕ್ಷಮತೆ, ಸಾಮಾಜಿಕ ಮಾಧ್ಯಮ ಪ್ರಚಾರ, ಪೈವ್ ಸ್ಟಾರ್ ರೇಟಿಂಗ್ ಪಡೆದ ಶಾಖೆ (ಗೂಗಲ್), ಸಾಮಾಜಿಕ ಮಾಧ್ಯಮ ಗುರಿ ಸಾಧನೆ, ಮೈಲಿಗಲ್ಲು ಸಾಧನೆ ಪ್ರಶಸ್ತಿ (ಒಂದು ವರ್ಷ ಪೂರ್ಣಗೊಳಿಸಿದ ಶಾಖೆಗೆ), 2024–25ನೇ ವಿತ್ತೀಯ ವರ್ಷದಲ್ಲಿ ಅತ್ಯುತ್ತಮ ಸಾಧನೆಗೈದ ಶಾಖೆ ಮತ್ತು 2024–25ನೇ ವಿತ್ತೀಯ ವರ್ಷದಲ್ಲಿ ಅತ್ಯಧಿಕ ವಹಿವಾಟು ಸಾಧಿಸಿದ ಶಾಖೆಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಗೂಗಲ್ನಲ್ಲಿ ಪೈವ್ ಸ್ಟಾರ್ ರೇಟಿಂಗ್ ಪಡೆದ ಶಾಖೆಗಳಾದ ಕುಲಶೇಖರ, ಮೊರ್ಗನ್ಸ್ಗೇಟ್, ಮೂಡಬದ್ರಿ, ಶಿರ್ವಾ ಮತ್ತು ಉಳ್ಳಾಲ ಇವರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ, ಬಜ್ಪೆ, ಕುಲಶೇಖರ್ ಮತ್ತು ಮಾರ್ಗನ್ಸ್ಗೇಟ್ ಶಾಖೆಗಳು ಸಾಮಾಜಿಕ ಮಾಧ್ಯಮ ಗುರಿ ಸಾಧನೆ ಪ್ರಶಸ್ತಿಯನ್ನು ಪಡೆದುಕೊಂಡವು.
ಶಾಖೆಯ ಸ್ಥಾಪನೆಯ ಒಂದು ವರ್ಷದಲ್ಲಿ ಮೈಲಿಗಲ್ಲು ಸಾಧನೆ ಪ್ರಶಸ್ತಿಯನ್ನು ಬ್ರಹ್ಮಾವರ ಶಾಖೆ ಪಡೆದುಕೊಂಡಿತು. ಬಜ್ಪೆ ಶಾಖೆಯು ಅತ್ಯುತ್ತಮ ವ್ಯವಹಾರ ದಾಖಲಿಸಿದ ಶಾಖೆ ಪ್ರಶಸ್ತಿಯನ್ನು ಪಡೆದುಕೊಂಡಿತು. 2024-25ನೇ ವಿತ್ತೀಯ ವರ್ಷದಲ್ಲಿ ಅತಿ ಹೆಚ್ಚು ವಹಿವಾಟು ನಡೆಸಿದ ಶಾಖೆಗಾಗಿ ಕುಲಶೇಖರ ಶಾಖೆಯು ಪ್ರಶಸ್ತಿಯನ್ನು ಪಡೆದುಕೊಂಡಿತು. ಈ ಎಲ್ಲಾ ಶಾಖೆಗಳ ಶಾಖಾ ವ್ಯವಸ್ಥಾಪಕರಿಗೆ ಶಾಲು, ಪುಷ್ಪಗುಚ್ಛ, ಪ್ರಶಸ್ತಿ, ಮೆಚ್ಚುಗೆ ಪ್ರಮಾಣಪತ್ರ ಮತ್ತು ನಗದು ಬಹುಮಾನವನ್ನು ನೀಡಿ ಸನ್ಮಾನಿಸಲಾಯಿತು. ಈ ಶಾಖೆಗಳ ಸಿಬ್ಬಂದಿಗಳಿಗೆ ಪುಷ್ಪಗುಚ್ಛವನ್ನು ನೀಡಿ ಸನ್ಮಾನಿಸಲಾಯಿತು.
ಉಪಾಧ್ಯಕ್ಷರಾದ ಜೂಡ್ ಜೆರಾಲ್ಡ್ ಡಿ’ಸಿಲ್ವಾ, ನಿರ್ದೇಶಕರಾದ ಜೋಸೆಫ್ ಅನಿಲ್ ಪತ್ರಾವೊ, ಎಲ್ರಾಯ್ ಕ್ರಾಸ್ಟೊ, ಆಂಡ್ರೂ÷್ಯ ಡಿಸೋಜಾ, ಡೇವಿಡ್ ಡಿಸೋಜಾ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ಡಾ ಫ್ರೀಡಾ ಎಫ್. ಡಿಸೋಜಾ, ಐರಿನ್ ರೆಬೆಲ್ಲೊ, ಡಾ ಜೆರಾಲ್ಡ್ ಪಿಂಟೊ, ವಿನ್ಸೆಂಟ್ ಲಸ್ರಾದೊ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೋ, ಸುಶಾಂತ್ ಸಲ್ಡಾನಾ, ಆಡಳಿತ ಮಂಡಳಿ ಸದಸ್ಯರಾದ ಶರ್ಮಿಳಾ ಮಿನೇಜಸ್, ಫೆಲಿಕ್ಸ್ ಡಿ’ಕ್ರೂಜ್ ಮತ್ತು ಶ್ರೀ ಆಲ್ವಿನ್ ಮೊಂತೇರೊ ಉಪಸ್ಥಿತರಿದ್ದರು. ಉಪ ಪ್ರಧಾನ ವ್ಯವಸ್ಥಾಪಕ ರಾಜ್ ಎಫ್. ಮಿನೇಜಸ್ ಧನ್ಯವಾದ ಅರ್ಪಿಸಿದರು ಮತ್ತು ಹಿರಿಯ ವ್ಯವಸ್ಥಾಪಕ ಡೆರಿಲ್ ಲಸ್ರಾದೊ ಕಾರ್ಯಕ್ರಮವನ್ನು ನಿರೂಪಿಸಿದರು.
