ಮ೦ಗಳೂರು: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್. ಫೆ. 25ರಿ೦ದ ನಾಪತ್ತೆಯಾಗಿದ್ದ.ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ಕಾಯಾ೯ಚರಣೆ ಕೈಗೊಳ್ಳಲಾಗಿತ್ತು.
