24.5 C
Karnataka
Thursday, April 30, 2026

ಕಳೆದುಕೊಂಡ ಹತ್ತು ಲಕ್ಷ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ ಮೂಡಬಿದ್ರೆ ಪೊಲೀಸರು

ಮ೦ಗಳೂರು: ಆ.8 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರವರ ಪತ್ನಿ ವಿಜಯ ರವರು ಕುಪ್ಪೆ ಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದರ್ಭ ಮಧ್ಯಾಹ್ನ 2 ಗಂಟೆಗೆ ಮೂಡಬಿದ್ರೆ ಪೇಟೆಯಲ್ಲಿ ಎರಡು ಬಳೆ ಮತ್ತು ಚಿನ್ನದ ಸರ ಒಟ್ಟು ಒಂಬತ್ತು ಪವನ್ ಚಿನ್ನ ಮತ್ತು ಪರ್ಸ್ ಸಮೇತ ಕಳೆದುಕೊಂಡಿರುತ್ತಾರೆ. ಈ ಬಗ್ಗೆ ಅದೇ ದಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.


ದೂರಿನ ಅನ್ವಯ ಪತ್ತೆ ಕಾರ್ಯದಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ರವರ ನೇತೃತ್ವದಲ್ಲಿ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಮಹಮದ್ ಹುಸೇನ್,ಮಹಮದ್ ಇಕ್ಬಾಲ್, ಅಖಿಲ್ ಅಹಮದ್ ನಾಗರಾಜ ಲಮಾಣಿ ಮತ್ತು ವೆಂಕಟೇಶ್ ಅವರು ಎರಡು ದಿನಗಳಲ್ಲಿ ಪತ್ತೆಗೆ ಶ್ರಮಿಸಿ ಕಳೆದುಕೊಂಡ ಬಂಗಾರ ಮತ್ತು ಪರ್ಸ್ ನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸುತ್ತಾರೆ. ಬಂಗಾರದ ಮೌಲ್ಯ ಸುಮಾರು 10 ಲಕ್ಷ ಆಗಬಹುದು. ಈ ಬಗ್ಗೆ ಸಾರ್ವಜನಿಕರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles