ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ: ಜಿಲ್ಲಾಧಿಕಾರಿ ಅಭಿನಂದನೆ
ಮಂಗಳೂರು: ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಚಿಂತನ್ ಎಸ್. ಶೆಟ್ಟಿ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.ಫ್ರೀ ಸ್ಟೈಲ್ ರಿಲೇ ಈಜುಕೂಟದಲ್ಲಿ ಚಿಂತನ್ ಶೆಟ್ಟಿ ಅವರು ಇತರ ಮೂವರು ಕ್ರೀಡಾಪಟುಗಳೊಂದಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. 3:26:26 ನಿಮಿಷದಲ್ಲಿ...
ಉಸ್ತುವಾರಿ ಸಚಿವರು ,ಲೋಕೋಪಯೋಗಿ ಸಚಿವರ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 15 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 3 ಗಂಟೆಗೆ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಮಂಗಳೂರು ಮಹಾನಗರ...
ಜಾತಿ – ಆದಾಯ ಪ್ರಮಾಣ ಪತ್ರ : ಸಹಾಯವಾಣಿ ಸಂಪರ್ಕಿಸಿರಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದು.ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ – 2220584, ದೂ.ಸಂ-0824 2220590,...
ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ
ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು...
ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ “ಆರಾಟ” ಸಿನಿಮಾ ಪ್ರದರ್ಶನಕ್ಕೆ ಆಯ್ಕೆ
ಮಂಗಳೂರು: ಪಿಎನ್ಆರ್ ಪ್ರೊಡಕ್ಷನ್ ನ ತಿಂಬರ ರಾಘವೇಂದ್ರ ಹೊಳ್ಳ ನಿರ್ಮಾಣದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಚಲನಚಿತ್ರವು ಮಾರ್ಚ್ 1 ರಿಂದ 8 ರ ತನಕ ನಡೆಯುವ ಹದಿನಾರನೇ ಬೆಂಗಳೂರು ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಕನ್ನಡ ವಿಭಾಗದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿರುತ್ತದೆ. ಆರಾಟ ಚಿತ್ರವು ಕಳೆದ ಜೂನ್ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ...
ಫೆ.18ರಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ
ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.18ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತಿಳಿಸಿದ್ದಾರೆ.
ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ...
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ
ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ)...
ಶಿಷ್ಟಾಚಾರ ಉಲ್ಲಂಘನೆ: ಕ್ರಮಕ್ಕೆ ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ...
ಶಿವಾಜಿ: ಶಿವದೂತೆ ಗುಳಿಗನ ಬಳಿಕ ಮತ್ತೊಂದು ಅದ್ದೂರಿ ಚಾರಿತ್ರಿಕ ನಾಟಕ
ಮ೦ಗಳೂರು: ತುಳು ರಂಗಭೂಮಿಯಲ್ಲೇ ಹೊಸ ದಾಖಲೆ ಬರೆದಿರುವ ಶಿವದೂತೆ ಗುಳಿಗೆ'ಯ ರೂವಾರಿ ವಿಜಯ ಕುಮಾರ್ ಕೊಡಿಯಾಲ್ಬೈಲ್ ಅವರು ಈಗ ಮತ್ತೊಂದು ಹೊಸ ಚಾರಿತ್ರಿಕ ನಾಟಕವನ್ನು ಪ್ರೇಕ್ಷಕರ ಮುಂದಿಡಲು ಮುಂದಾಗಿದ್ದಾರೆ. ಭಾರೀ ನಿರೀಕ್ಷೆ ಮೂಡಿಸಿರುವ ಈ ನಾಟಕವೇಶಿವಾಜಿ'.ಈ ನಾಟಕವು ಮಾ. 6ರಂದು ಕಟೀಲಿನಲ್ಲಿ ಮೊದಲ ಪ್ರದರ್ಶನ ಕಾಣಲಿದ್ದು, ಮಾರ್ಚ್ 13ರಂದು ಮಂಗಳೂರಿನ ಪುರಭವನದಲ್ಲಿ ಪ್ರದರ್ಶನ ನಡೆಯಲಿದೆ....
ಶರವು ಶ್ರೀ ಮಹಾಗಣಪತಿ ದೇವಸ್ಥಾನ: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಹೊರಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ
ಮಂಗಳೂರು : ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನೆ ನೆರವೇರಿತು. ಶರವು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿ, ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಮಾರಿಯಮ್ಮನ ಕೃಪೆಗೆ ಪಾತ್ರರಾಗೋಣ. ಯಾವುದೇ ಕಾರ್ಯ ಆರಂಭ ಮಾಡುವಾಗ ಗಣಪತಿಯ ಸ್ಮರಣೆ ಅಗತ್ಯ....






