ಪಿ .ಯು. ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ : ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್
ಮ೦ಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದ್ದಾರೆ.ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ“ಮಾನಸ ಮಾರ್ಗದರ್ಶನ ಹಾಗೂ ಸಂವಾದ”...
ಬೆಳ್ತಂಗಡಿ: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಉದ್ಘಾಟನೆ
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಬಳಿಯ ವೈಬವ್ ಅರ್ಕೆಡ್ನ ನೆಲಮಹಡಿಯಲ್ಲಿ ನ. 24 ರಂದು ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ಲೋಬೊ ಉದ್ಘಾಟಿಸಿದರು. ಶಾಖೆಯನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ನ ಧರ್ಮಗುರು ಅತೀ ವಂ. ಫಾ ವಾಲ್ಟರ್ ಡಿಮೆಲ್ಲೊ ಆಶೀವರ್ಚಿಸಿದರು.ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ...
ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...
ಉಚಿತ ಹೊಲಿಗೆ ಯಂತ್ರ ವಿತರಣೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು.
ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ...
‘ರೋಟರಿ ಚಿಣ್ಣರ ಉತ್ಸವ’
ಮ೦ಗಳೂರು:ರೋಟರ್ ಕ್ಲಬ್ ಮಂಗಳೂರು ಸೆಂಟ್ರಲ್, ರೋಟರಿ ಮಂಗಳೂರು ಸೆಂಟ್ರಲ್ -ಂಡೇಶನ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಇದರ ಸಂಯುಕ್ತಾಶ್ರಯದಲ್ಲಿ ೨೪ನೇ ವಾರ್ಷಿಕ ‘ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕೂಟ ಉರ್ವ ಕೆನರಾ ಹೈಸ್ಕೂಲ್ ಆವರಣದಲ್ಲಿ ರವಿವಾರ ದಿನವಿಡೀ ನಡೆಯಿಯು.ಕಾರ್ಯಕ್ರಮ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ,...
ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಶೀಘ್ರ ಕಾರ್ಯಗತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ
ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆವಿಲೀನ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗಕಾರ್ಯಗತಗೊಳಿಸುವಂತೆ ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿ...
ಅಗ್ನಿವೀರ ಸೇನಾ ನೇಮಕಾತಿಯ ಅಂತಿಮ ಫಲಿತಾಂಶದ ಪಟ್ಟಿ ಪ್ರಕಟ
ಮಂಗಳೂರು: ಅಗ್ನಿವೀರ ಸೇನಾ ನೇಮಕಾತಿ ಕಛೇರಿ ಬೆಂಗಳೂರು ಮತ್ತು ಸೇನಾ ನೇಮಕಾತಿ ಕಛೇರಿ, ಮಂಗಳೂರು ಈ ವಲಯದಲ್ಲಿ ಎರಡು ನೇಮಕಾತಿ ರ್ಯಾಲಿಗಳನ್ನು ನಡೆಸಲಾಗಿದ್ದು, ಕರ್ನಾಟಕ ರಾಜ್ಯದ ಒಟ್ಟು 826 ಅಭ್ಯರ್ಥಿಗಳನ್ನು 2024-25ನೇ ವರ್ಷದ ಭಾರತೀಯ ಸೇನೆ ನೇಮಕಾತಿಯ ಹಂತ-1ಕ್ಕೆ ಆಯ್ಕೆ ಮಾಡಲಾಗಿದೆ.
ಭಾಗವಹಿಸಿದ ಅಭ್ಯರ್ಥಿಗಳು ಅಂತಿಮ ಫಲಿತಾಂಶದ ಪಟ್ಟಿಯ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಕಚೇರಿಯ ನೋಟೀಸ್...
ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸು: ಮಹಾನಗರಪಾಲಿಕೆ ಎಚ್ಚರಿಕೆ
ಮಂಗಳೂರು:ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ವಿರುದ್ದ ಕ್ರಮ ಜರುಗಿಸಲಾಗುವುದು ಎ೦ದು ಮಹಾನಗರಪಾಲಿಕೆ ಎಚ್ಚರಿಕೆ ನೀಡಿದೆ.
ರಾಜ್ಯದ ಕೆಲವು 'ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವ ಮುನ್ನ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ...
ಡಿ.1-3: ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ – ಸಾರ್ವಜನಿಕ ಅಹವಾಲು ಸ್ವೀಕಾರ, ವಿಚಾರಣೆ
ಮಂಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 1 ರಿಂದ 3ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು...
ವಿಶ್ವಬಂಟರ ಸಮಾಗಮ: ಆಮಂತ್ರಣ ಪತ್ರಿಕೆ ಬಿಡುಗಡೆ
ಕಟೀಲು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ...







