‘ಕಲಾ ಪರ್ಬ’ದ ಲಾಂಛನ ಬಿಡುಗಡೆ
ಮಂಗಳೂರು : ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ನಲ್ಲಿ ನಡೆಯಲಿರುವ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್ನ ಒಟ್ಟು ಅಭಿವೃದ್ದಿ ಹಾಗೂ...
ಭುವನೇಂದ್ರ ಪುದುವೆಟ್ಟು ಅವರಿಗೆ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ
ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆಯಿತು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು...
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
ಮ೦ಗಳೂರು: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು...
ನ.28ರಂದು ಮೂಡಬಿದ್ರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ
ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28ರಂದು ಬೆಳಿಗ್ಗೆ 11ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ನಡೆಯಲಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿಯೂ ಸಾರ್ವಜನಿಕರು ಅಹವಾಲು/ದೂರುಗಳನ್ನು ನೀಡಬಹುದು ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಅರ್ಜಿದಾರರು ನಮೂನೆ...
ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ
ನವೆಂಬರ್ 21 ಗುರುವಾರ ಬೆಳಿಗ್ಗೆ 10.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 10:55 ಕ್ಕೆ ನಗರದ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿರುವ ರೂಬಿಕಾಮ್ 2024, ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ....
ತ್ವರಿತ ಗತಿಯಲ್ಲಿ ಸರಕಾರಿ ಸೇವೆ ಒದಗಿಸಲು ಇಲಾಖೆಗಳಿಗೆ ಉಪಲೋಕಾಯುಕ್ತರ ಸೂಚನೆ
ಮಂಗಳೂರು: ವಿವಿಧ ಸರಕಾರಿ ಇಲಾಖೆಗಳು ಸಾರ್ವಜನಿಕರ ವಿವಿಧ ಅರ್ಜಿ ಮತ್ತು ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕೆಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಸೂಚಿಸಿದ್ದಾರೆ.
ಡಿಸೆಂಬರ್ 1ರಿಂದ 3ರವರೆಗೆ ಉಪಲೋಕಾಯುಕ್ತರು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಮಂಗಳವಾರ ಆನ್ಲೈನ್ ಮೂಲಕ ಸಭೆ ನಡೆಸಿದರು.
ಪ್ರಮುಖವಾಗಿ ಕಂದಾಯ, ಅರಣ್ಯ, ಆರೋಗ್ಯ, ನಗರಾಡಳಿತ ಮತ್ತು ಪಂಚಾಯತ್ರಾಜ್...
ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ
ಧರ್ಮ ಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ,ದಕ್ಷಿಣ ಕನ್ನಡ...
ಅಂತರ್ ಕಾಲೇಜು ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶಾ ಸ್ಪರ್ಧೆ
ಮಂಗಳೂರು : ಮಂಗಳೂರು: ಸಾಹಿತ್ಯ ಸಮಾಜಕ್ಕೆ ಹೊಸ ಬೆಳಕನ್ನು ಚೆಲ್ಲಬಲ್ಲುದು, ವಿಭಿನ್ನವಾಗಿ ಯೋಚನೆ ಮಾಡುವಂತೆ ಮಾಡಬಲ್ಲುದು. ನಮ್ಮ ಮಣ್ಣಿನ ಸಾಹಿತ್ಯ, ಸಂಸ್ಕೃತಿ, ಉದಾತ್ತತೆಯನ್ನು ಯುವಜನರಿಗೆ ತಲುಪಿಸುವಉದ್ದೇಶವನ್ನು ಜನವರಿ 11 ಮತ್ತು 12 ರಂದು ನಡೆಯಲಿರುವ ಮಂಗಳೂರು ಲಿಟ್ ಫೆಸ್ಟ್ ಹೊಂದಿದೆ, ಎಂದು ಭಾರತ್ ಫೌಂಡೇಶನ್ನ ಟ್ರಸ್ಟಿ ಸುನಿಲ್ ಕುಲಕರ್ಣಿ ಹೇಳಿದರು.ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ...
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ
ಮಂಗಳೂರು * ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ...
ದೇಶದ ಆರ್ಥಿಕಾಭಿವೃದ್ಧಿಗೆ ಮುನ್ನುಡಿ ಬರೆದ ಇಂದಿರಾ ಗಾಂಧಿ: ಬಿ.ರಮಾನಾಥ ರೈ
ಮಂಗಳೂರು: ಇಂದಿರಾ ಗಾಂಧಿ ಅವರು ಜನಪರ ಹಾಗೂ ರಾಷ್ಟ್ರ ಕೇಂದ್ರೀಕೃತ ನೀತಿಗಳಿಂದ ಜನಪ್ರಿಯವಾಗಿದ್ದರು. ಬ್ಯಾಂಕುಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿಯ ಮೂಲಕ ದೇಶದ ಆರ್ಥಿಕಾಭಿವೃದ್ಧಿಗೆ ಮುನ್ನುಡಿ ಬರೆದರು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನ ಪ್ರಯುಕ್ತ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ...







