ಮಂಗಳೂರು ವಿವಿ: ಶೈಕ್ಷಣಿಕ- ಆಡಳಿತ ಸಮಾಲೋಚನಾ ಸಭೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ರೋಡ್ ಮ್ಯಾಪ್ ತಯಾರಿಸಲು ಪ್ರಾಧ್ಯಾಪಕರಾಗಿ ಹಾಗೂ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಣ ತಜ್ಞರನ್ನೊಳಗೊಂಡ ಶೈಕ್ಷಣಿಕ- ಆಡಳಿತ ಸಮಾಲೋಚನಾ ಸಭೆ, ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಪ್ರೊ. ಪಿ.ಎಲ್. ಧರ್ಮ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನ್ಯಾಕ್ ಮೌಲ್ಯಾಂಕ ಹೆಚ್ಚಳಕ್ಕೆ ಪೂರ್ವ ತಯಾರಿ, ಐಕ್ಯೂಎಸಿ...
ಅರಣ್ಯ ಸಚಿವರ ಪ್ರವಾಸ
ಮಂಗಳೂರು: ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಜುಲೈ 1ರಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೋಮವಾರ ಬೆಳಗ್ಗೆ 8.10 ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 10.30 ಬಂಟ್ವಾಳ ತಾಲೂಕಿನ ಕಾವಲಪಡೂರು, ಅಲಂಪುರಿಯಲ್ಲಿರುವ, ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ಬೆಳೆ ವಿಮೆ ನೋಂದಾಣಿ: ಅರ್ಜಿ ಆಹ್ವಾನ
ಮಂಗಳೂರು: 2024-25ನೇ ಸಾಲಿನ ತೋಟಗಾರಿಕೆ ಬೆಳೆ ಬೆಳೆದ ರೈತರ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದರೆ, ನಷ್ಟ ಪರಿಹಾರವನ್ನು ನೀಡಲು ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಬೆಳೆಸಾಲ ಪಡೆದ ರೈತರು ಬೆಳೆಸಾಲ...
ಲೋಕಸಭಾ ಚುನಾವಣೆ: ಜು.1ರಂದು ಅಭ್ಯರ್ಥಿಗಳ ಖರ್ಚುವೆಚ್ಚ ಪರಿಶೀಲನೆ
ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ವೆಚ್ಚ ವೀಕ್ಷಕರಾದ ಮೆರುಗು ಸುರೇಶ್ ಅವರು ಜುಲೈ 1ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳ ಚುನಾವಣಾ ಖರ್ಚು-ವೆಚ್ಚಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್
ಮಂಗಳೂರು: ದೈಹಿಕ,ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇಲಾಖೆಯ ಎಸ್.ಪಿ ನಟರಾಜ್ ಹೇಳಿದರು.ಅವರು ಶನಿವಾರ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತ್ರತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು...
ಡೆಂಗ್ಯೂ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: - ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಪ್ರತಿ ಶುಕ್ರವಾರ ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ, ಮನೆಯ ಪರಿಸರದ ಸುತ್ತಮುತ್ತ ನೀರು...
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ: ಡಾ.ಶಾಂತಾರಾಮಶೆಟ್ಟಿ
ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ಸೇರಿದಂತೆ ಕೃತಕ ಅಂಗಾಂಗ ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು.ದಕ್ಷಿಣ...
ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ
ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದರು."ಪ್ರತಿಯೊಂದು ಕಡೆಯಲ್ಲೂ ಪಾಸಿಟಿವ್...
ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು:2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿಯು...
ಕೆಂಪೇಗೌಡ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಮಮತಾ ಗಟ್ಟಿ
ಮಂಗಳೂರು: ಬೆಂಗಳೂರು ಅಭಿವೃದ್ಧಿಯ ರೂವಾರಿ ಕೆಂಪೇಗೌಡ ಅವರ ವ್ಯಕ್ತಿತ್ವ, ಆದರ್ಶ ಅವರ ಜಾತ್ಯತೀತ ಮನೋಭಾವ ಇಂದಿನ ಸಮಾಜದಲ್ಲಿ ಯುವ ಸಮುದಾಯಕ್ಕೆ ಮಾದರಿ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಹೇಳಿದರು.
ಅವರು ಗುರುವಾರ ಉರ್ವಸ್ಟೋರ್ನ ತುಳುಭವನದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ...





