ಉಚಿತ ಯಕ್ಷಗಾನ ತರಬೇತಿ ಅಭಿಯಾನ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ವತಿಯಿಂದ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು ಮುಳ್ಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿದರು.ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಪಟಗಾರ ಅಧ್ಯಕ್ಷತೆ ವಹಿಸಿದ್ದರು.ಪಟ್ಲ ಫೌಂಡೇಶನ್ ಟ್ರಸ್ಟ್ ನ...
ಶಶಿರಾಜ್ ಕಾವೂರ್ ಗೆ ಸಿಜಿಕೆ ಪ್ರಶಸ್ತಿ
ಮಂಗಳೂರು: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ 'ಸಿಜಿಕೆ ರಂಗಪುರಸ್ಕಾರ' -2024 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತ ರಚನೆಕಾರ.
ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್ಮೆಂಟ್ ಫ್ಲಾಟ್...
ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿಗಳು ಸಕಾಲಕ್ಕೆ ದೊರಕಬೇಕು : ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿಗಳು ಸುಲಲಿತವಾಗಿ ಹಾಗೂ ಸಕಾಲಕ್ಕೆ ದೊರಕುವಂತೆ ಮಾಡಲು ಮತ್ತು ಔಷಧಿಗಳ ಸಮರ್ಪಕ ನಿರ್ವಹಣೆಗೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಮುಖ್ಯ ಉಗ್ರಾಣದಿಂದ ರೋಗಿಗಳಿಗೆ ತಲುಪಿಸುವವರೆಗೂ ವಿವಿಧ ಹಂತಗಳಲ್ಲಿ ಕ್ರಮಬದ್ಧವಾಗಿ ನಿರ್ವಹಿಸಲು ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಕೆಎಂಸಿ ಆಸ್ಪತ್ರೆಯ ಕಡೆಯಿಂದ ಒಂದು ಪ್ರತ್ಯೇಕ ಔಷಧ ತಂತ್ರಾಂಶವನ್ನು ಅಭಿವೃದ್ದಿ...
ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅಗತ್ಯ : ಸಿವಿಲ್ ನ್ಯಾಯಾಧೀಶರು
ಮಂಗಳೂರು: ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾದದ್ದು, ವಿದ್ಯಾರ್ಥಿಗಳಲ್ಲಿ ಆಗುವಂತಹ ಬದಲಾವಣೆ, ನಡವಳಿಕೆ, ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ಹೆಚ್ಚಾಗಿ ಶಿಕ್ಷಕರಿಗೆ ತಿಳಿದಿರುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗದಂತೆ ಶಿಕ್ಷಕರು ಅವರೊಂದಿಗೆ ಸಮಾಲೋಚನಗಳನ್ನು ನಡೆಸಿ ಅವರಿಗೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು...
ಪ್ರವಾಸೋದ್ಯಮ ಆಕರ್ಷಣೆಗೆ ಕಾರ್ಯಕ್ರಮಗಳ ಕ್ಯಾಲೆಂಡರ್: ಯು.ಟಿ. ಖಾದರ್
ಮಂಗಳೂರು: ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಈಗಾಗಲೇ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳನ್ನು ಹಾಗೂ ಉತ್ಸವಗಳನ್ನು ಬಳಸಿಕೊಂಡು ಹೊಸದಾಗಿ ಇನ್ನಷ್ಟು ಕಾರ್ಯಕ್ರಮ ಏರ್ಪಡಿಸಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಬಲ...
ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಗಳೂರು:“ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಮಂಗಳೂರಿನ ಬಜಪೆ ವಿಮಾನ ನಿಲ್ದಾಣ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ...
ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪ:ಅಧಿಕಾರಿಗಳ ಸಭೆ
ಮಂಗಳೂರು : 2024-25 ನೇ ಸಾಲಿನ ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜೀವಹಾನಿ, ನೆರೆಹಾವಳಿ, ಜಾನುವಾರು, ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು.ಶಾಸಕ ವೇದವ್ಯಾಸ ಕಾಮತ್...
ಮಿಥುನ ಕೊಡೆತ್ತೂರ್ಗೆ‘ ಬ್ರಾ೦ಡ್ ಮಂಗಳೂರು” ಪ್ರಶಸ್ತಿ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ "ಬ್ರಾ೦ಡ್ ಮಂಗಳೂರು" ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ.
ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್ 7ರಂದು ಪ್ರಕಟವಾದ ಮಿಥುನ್ ಅವರ "ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ' ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು.,...
ಜೂನ್ 28: ಮೇಯರ್ ಪೋನ್-ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಪೋನ್-ಇನ್ ಕಾರ್ಯಕ್ರಮ ಜೂನ್ 28ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯಲ್ಲಿರುವ ಮಹಾಪೌರರ ಕೊಠಡಿಯಲ್ಲಿ ನಡೆಯಲಿದೆ.ಸಾರ್ವಜನಿಕರು ಪೋನ್-ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301, 0824-2220318 ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ಗ್ರಂಥಾಲಯ ವಿಜ್ಞಾನ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು, ಬೆಂಗಳೂರು, ಧಾರವಾಡ, ಕಲುಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಜೂನ್ 19 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ಪರೀಕ್ಷೆಯಲ್ಲಿ ಶೇಕಡ 40%ರಷ್ಟು, ಎಸ್.ಸಿ/ಎಸ್.ಟಿ ಶೇಕಡ 35% ರಷ್ಟು ಅಂಕ ಪಡೆದ ಅಭ್ಯರ್ಥಿಗಳು...




