ಮಹಿಳಾ ಕಾಂಗ್ರೆಸ್ ಸಮಿತಿಯಿ೦ದ ಪ್ರತಿಭಟನೆ
ಮ೦ಗಳೂರು: ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತು ಅವರ ಬಂಧನಕ್ಕೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿ೦ದ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ತನ್ವೀರ್ ಶಾ, ಮುಖ೦ಡರಾದ ರೂಪಾ ಚೇತನ್, ಚಂದ್ರಕಲಾ...
ಇಫ್ಕೋ ನಿರ್ದೇಶಕರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ
ಮ೦ಗಳೂರು: ಸಹಕಾರ ಕ್ಷೇತ್ರದ ಹಿರಿಯ ಅಪ್ರತಿಮ ನಾಯಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ .ಎಂ.ಎನ್.ರಾಜೇಂದ್ರ ಕುಮಾರ್ ಅವರು ನವದೆಹಲಿಯ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ-ಅಪರೇಟಿವ್ (ಇಫ್ಕೋ)ಸಂಸ್ಥೆಯ ನಿರ್ದೇಶಕರಾಗಿ ಸತತ
2ನೇ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.ಇಫ್ರೋ ಆಡಳಿತ ಮಂಡಳಿಯಲ್ಲಿ...
ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಆಯ್ಕೆ
ಮಂಗಳೂರು: ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಮೂಡಂಬೈಲ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಕರ್ನಾಟಕ ಸಂಘ ಕತಾರ್ ತನ್ನ 25 ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಕತಾರ್ ನಲ್ಲಿ ಕನ್ನಡ ಸಂಘದ ಮೂಲಕ ರವಿ ಶೆಟ್ಟಿ ಅವರು ಅನೇಕ ಸಮಾಜ ಪರ ಕೆಲಸ ಕಾರ್ಯಗಳನ್ನು...
ಕೆ.ಆರ್.ಎಂ.ಎಸ್. ಎಸ್ ನಿಂದ ಮಂಗಳೂರು ವಿವಿ ಕುಲಪತಿಗೆ ವರದಿ ಸಲ್ಲಿಕೆ
ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗವುವಿವಿಧ ವಿಚಾರಗಳ ಬಗ್ಗೆ ಅಧ್ಯಾಪಕರ ಮತ್ತು ವಿದ್ಯಾರ್ಥಿ ಸಮುದಾಯದ ಸಮೀಕ್ಷೆ ನಡೆಸಿ ಅದರ ಫಲಿತಾಂಶವನ್ನು ಅಂಕಿ ಅಂಶ ಸಹಿತ ಸುಧಾರಣಾ ವರದಿ ರೂಪದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರಿಗೆ ಇತ್ತೀಚೆಗೆ ಹಸ್ತಾಂತರಿಸಿದೆ. ಕುಲಸಚಿವ ರಾಜು ಮೊಗವೀರ, ಕೆಎಎಸ್ ಅವರಿಗೆ...
ಮೇ 13 ರಿಂದ 17: ಚಿಣ್ಣರ ಕಲರವ
ಮಂಗಳೂರು: ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ ಶಾಲೆ ಜೆಪ್ಪು ಇದರ ಸಹಯೋಗದೊಂದಿಗೆ ಮೇ 13 ರಿಂದ 17 ರವರೆಗೆ ಜೆಪ್ಪು ಸಂತ ಜೆರೋಸಾ ಶಾಲೆಯ ಸಭಾಂಗಣದಲ್ಲಿ ಚಿಣ್ಣರ ಕಲರವ - 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವು ಜರುಗಲಿದೆ...
ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಜನ್ಮ ಸಂವತ್ಸರದ ಪಂಚ ಸಪ್ತತಿ ಸನ್ಮಾನ
ಮ೦ಗಳೂರು: ಯೂತ್ ಆಫ್ ಜಿಎಸ್ ಬಿ ವಾಹಿನಿಯಿಂದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪರವಾಗಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮಹಾನ್ ಸಾಧಕರಾದ ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಜನ್ಮ ಸಂವತ್ಸರದ ಪಂಚ ಸಪ್ತತಿ ಸನ್ಮಾನ ಕಾರ್ಯಕ್ರಮ ಅದ್ದೂರಿಯಾಗಿ ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪಂಡಿತ್ ಉಪೇಂದ್ರ ಭಟ್...
ಬೈಂದೂರು: ಬಿಜೆಪಿಯ ಬೃಹತ್ ರೋಡ್ ಶೋ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು.
ಬೈಂದೂರು: ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ ರಾಘವೇಂದ್ರ ರವರ ಪರ...
ಮೇ 5ರಂದು ಕನ್ನಡ ಸಂಘ ಅಲ್ ಐನ್ನ ವಾರ್ಷಿಕೋತ್ಸವ
ಮಂಗಳೂರು : ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಮೇ 5ರಂದು ಬೆಳಗ್ಗೆ 10ರಿಂದ ಅಲ್ ಐನ್ನ ಬ್ಲೂ ರಾಡಿಸನ್ಸ್ ಹೋಟೆಲ್ನಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಸೇವಾ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕನ್ನಡ ಶಾಲೆ ದುಬೈ ಹಾಗೂ ಅಲ್ ಐನ್ ಹೈಸ್ಕೂಲ್ನ ಕನ್ನಡ ಅಧ್ಯಾಪಕರಿಗೆ ಗೌರವ...
ಶಿಬರೂರು ಕ್ಷೇತ್ರದಲ್ಲಿ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ
ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು.ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗುತು ಮನೆಯವರು, ವಿವಿಧ...
ನೀಟ್ ಪರೀಕ್ಷೆ : ನಿಷೇಧಾಜ್ಞೆ ಜ್ಯಾರಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ. 5 ರಂದು 18 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ (NEET ) ಪರೀಕ್ಷೆಗಳು ನಡೆಯಲಿದೆ.ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಯನ್ನು ಸುಸೂತ್ರವಾಗಿ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ...





