ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ -ವಿಶ್ವ ಹೋಮಿಯೋಪತಿ ದಿನಾಚರಣೆ
ಮ೦ಗಳೂರು: ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು,ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ...
ಕಾರ್ಮಿಕ ವರ್ಗದ ಶ್ರಮವಿಲ್ಲದೆ ಜಗತ್ತು ಮುನ್ನಡೆಯಲು ಸಾಧ್ಯವಿಲ್ಲ : ಡಾ.ಕೃಷ್ಣಪ್ಪ ಕೊಂಚಾಡಿ
ಮ೦ಗಳೂರು: 8 ಗಂಟೆಗಳ ದುಡಿಮೆಗಾಗಿ 139 ವರ್ಷಗಳ ಹಿಂದೆ ಅಮೇರಿಕಾದ ಚಿಕಾಗೋ ನಗರದ ಕಾರ್ಮಿಕರು ನಡೆಸಿದ ಐತಿಹಾಸಿಕ ಹೋರಾಟ ಆಕಸ್ಮಿಕವೇನಲ್ಲ.ಅಂದಿನ ಬಂಡವಾಳಶಾಹಿಗಳ ಲಾಭಕೋರತನದಿಂದ ಆಕ್ರೋಶಿತಗೊಂಡ ಕಾರ್ಮಿಕರು 16 ಗಂಟೆಗಳ ದುಡಿಮೆಯ ವಿರುದ್ದ ದಶಕಗಳ ಕಾಲ ಪ್ರಬಲ ಹೋರಾಟ ನಡೆಸಿದ್ದರ ಪರಿಣಾಮವಾಗಿ ಕೊನೆಗೆ 8 ಗಂಟೆಗಳ ದುಡಿಮೆಯ ಕೂಗು ಜಗತ್ತಿನಾದ್ಯಂತ ಮಾರ್ದನಿಸಿ ಮೇ ದಿನಾಚರಣೆಯುಂಟಾಯಿತು. ವಿಶ್ವದ...
ಬೈಂದೂರು :ಬಿಜೆಪಿ ಅಭ್ಯರ್ಥಿಪರ ಶಾಸಕ ವೇದವ್ಯಾಸ್ ಕಾಮತ್ ಮತಯಾಚನೆ
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಸಿದ್ದಾಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರ ಪರ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮತಯಾಚನೆ ನಡೆಸಿದರು.
ಶಾಸಕರು ಮಾತನಾಡಿ ಈಗಾಗಲೇ ಕ್ಷೇತ್ರದೆಲ್ಲೆಡೆ ಬಿಜೆಪಿ ಪರ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತ್ತೊಮ್ಮೆ ಇಲ್ಲಿ ಬಿಜೆಪಿಯ ಗೆಲುವು...
ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ
ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ ಎಂದು ಟ್ರಸ್ಟ್ ನ ಸ್ಥಾಪಕಾಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ...
“ಗಬ್ಬರ್ ಸಿಂಗ್” ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್,...
ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ...
ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ
ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ.
ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ...
ಇನ್ಲ್ಯಾಂಡ್ ಬ್ಯುಸಿನೆಸ್ ಪಾರ್ಕ್’ ಉದ್ಘಾಟನೆ
ಮಂಗಳೂರು, :ಇನ್ ಲ್ಯಾಂಡ್ ಬಿಲ್ಡರ್ಸ್ ಹಲವು ಸುಂದರ ವಿನ್ಯಾಸದ ಕಟ್ಟಡಗಳ ನಿರ್ಮಾಣ ಮಾಡುವ ಮೂಲಕ ನಗರದ ಸೊಬಗನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತೇಜಸ್ವಿನಿ ಆಸ್ಪತ್ರೆಯ ಸ್ಥಾಪಕರು ಮತ್ತು ನಿಟ್ಟೆ ವಿಶ್ವ ವಿದ್ಯಾನಿಲ ಯದ ಸಹಕುಲಾಧಿಪತಿ ಎಸ್ಎಸ್ಐಒಟಿ ಅಧ್ಯಕ್ಷ ರಾದ ಡಾ.ಶಾಂತಾರಾಮ ಶೆಟ್ಟಿ ಹೇಳಿದ್ದಾರೆ.ಅವರು ನಗರದ ಬಿಜೈ ಮುಖ್ಯ ರಸ್ತೆಯ ಬಳಿ ತಲೆಯೆತ್ತಿರುವ...
ಮುಗಿದ ಚುನಾವಣಾ ಹವಾ.. ಗೆಲುವಿನ ಮೆಥಾಮೆಟಿಕ್ಸ್ ಆರಂಭ
ಮಂಗಳೂರು : ಕರಾವಳಿಯಲ್ಲಿ ಸುಮಾರು ಒಂದು ತಿಂಗಳಿನಿಂದ ಬಿಸಿಯೇರಿದ್ದ ಚುನಾವಣಾ ಹವಾ ತಣ್ಣಾಗಾಗಿದೆ. ಜೂ. 4 ರ ಮತಎಣಿಕೆಯತ್ತ ಎಲ್ಲರ ಗಮನ ಕೇಂದ್ರೀಕೃತಗೊಂಡಿದೆ. ಮತಯಂತ್ರದೊಳಗೆ ಭದ್ರವಾಗಿರುವ ಜನಾದೇಶ ಪ್ರಕಟಗೊಳ್ಳಲು ಇನ್ನು ಬರೋಬ್ಬರಿ 37 ದಿನಗಳು ಬಾಕಿ ಉಳಿದಿದ್ದು ಸೋಲು ಗೆಲುವಿನ ಬಗ್ಗೆ ಲೆಕ್ಕಚಾರ, ವಿಶ್ಲೇಷಣೆಗಳು ಆರಂಭಗೊಂಡಿದೆ.ಕರಾವಳಿ ಕಡುಬೇಸಿಗೆಯ ಬಿಸಿಲ ಬೇಗೆಯನ್ನು ಚುನಾವಣಾ ಕಾವು ಇನ್ನಷ್ಟು...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಖರ ಅಪ್ರೋಚ್ ಲೈಟಿಂಗ್ ಸಿಸ್ಟಮ್ ಕಾಮಗಾರಿ ಆರಂಭ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಖರ ಅಪ್ರೋಚ್ ಲೈಟಿಂಗ್ ಸಿಸ್ಟಮ್ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸುರಕ್ಷತೆ ಮತ್ತು ಭದ್ರತಾ ನಿಯಂತ್ರಕರ ಸುರಕ್ಷತಾಶಿಫಾರಸುಗಳಿಗೆ ಅನುಗುಣವಾಗಿ ವಿಮಾನ ನಿಲ್ದಾಣವು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ವ್ಯವಸ್ಥೆಯು 2೦ ತಿಂಗಳಅವಧಿಯಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ....








