ಅಗಲ್ಪಾಡಿ ಯಾಗದಲ್ಲಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಭಾನುವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ರಾತ್ರಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನೆರವೇರಿತು.
ಬೆಳಗ್ಗೆ ದುರ್ಗಾ ಸಪ್ತಶತಿ ಪಾರಾಯಣ, ಕಲಶಪೀಠದಲ್ಲಿ ಮಹಾಪೂಜೆ...
ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚಾರಣೆ
ನಿಡ್ಡೋಡಿ: ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಯೇಸುವಿನ ಪುನರುತ್ತಾನದ ಹಬ್ಬ ಈಸ್ಟರ್ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಅತೀ ವಂದನಿಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿ ಶುಭ ಸಂದೇಶವನ್ನು ನೀಡಿ ಶುಭಕೋರಿದರು. ಚರ್ಚಿನ ಧರ್ಮ ಗುರುಗಳಾದ ವಂದನಿಯ ಡೇನಿಸ್ ಸುವಾರಿಸ್, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆಸಿಂತಾ...
ಅಕ್ರಮವಾಗಿ ಜಾನುವಾರುಗಳ ಸಾಗಾಟ
ಬೆಳ್ತಂಗಡಿ: ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ 4 ಜಾನುವಾರುಗಳನ್ನು ವಾಹನ ಸಮೇತ ವೇಣೂರು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.ಶನಿವಾರ ಸಂಜೆ ಬೆಳ್ತಂಗಡಿ ತಾಲೂಕು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ವೇಣೂರು- ನೈನಾಡು ಸಾರ್ವಜನಿಕ ರಸ್ತೆಯಲ್ಲಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶೈಲ ಡಿ. ಮುಗೋಡು ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ, ಸದ್ರಿ...
ಕಲ್ಲಿಕೋಟೆ: ಬಿಜೆಪಿ ನಾಯಕರಿ೦ದ ಮಾಜಿ ಮೇಯರ್ ಸಿ.ಜೆ ರೋಬಿನ್ ಭೇಟಿ
ಮ೦ಗಳೂರು: ಬಿಜೆಪಿ ಕೇರಳ ಚುನಾವಣಾ ಪ್ರಭಾರಿ ಹಾಗೂ ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಕೇರಳ ಚುನಾವಣಾ ಸಹ ಪ್ರಭಾರಿ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ರವಿವಾರ ಕ್ಯಾಲಿಕಟ್ ನ ಮಾಜಿ ಮೇಯರ್ ಸಿ.ಜೆ ರೋಬಿನ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಈ...
ಅಗಲ್ಪಾಡಿಯಲ್ಲಿ ಧನ್ವಂತರಿ ಹೋಮ ಸಂಪನ್ನ
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಶನಿವಾರ ಧನ್ವಂತರಿ ಹೋಮ ನಡೆಯಿತು.
ಮುಂಜಾನೆ ಧನ್ವಂತರಿ ಹೋಮ ಪ್ರಾರಂಭವಾಗಿ ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿಜ್ಞಾ...
ದೆಹಲಿ ಪೊಲೀಸ್ ಎ೦ದು ನ೦ಬಿಸಿ 16 ಲಕ್ಷ ರೂ. ದೋಚಿದರು !
ಪುತ್ತೂರು:ದೆಹಲಿ ಪೊಲೀಸ್ ಎ೦ದು ನ೦ಬಿಸಿ ಪುತ್ತೂರಿನ ವ್ಯಕ್ತಿಯೋವ೯ರಿ೦ದ ಅಪರಿಚಿತ ವ್ಯಕ್ತಿಗಳು ಆನ್ ಲೈನ್ ಮೂಲಕ 16,50,000 ರೂ.ದೋಚಿದ ಪ್ರಕರಣ ವರದಿಯಾಗಿದ್ದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಪ್ರಕರಣ ದಾಖಲಾಗಿದೆ.ಪುತ್ತೂರು ಬೊಳ್ವಾರು ನಿವಾಸಿಯಾಗಿರುವ ವ್ಯಕ್ತಿ ಪೊಲೀಸರಿಗೆ ನೀಡಿರುವ ದೂರಿನಂತೆ, ಸದ್ರಿಯವರ ದೂರವಾಣಿಗೆ ಮಾ. 28ರಂದು ಬೆಳಿಗ್ಗೆ, ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿದ್ದು, ಕರೆ ಸ್ವೀಕರಿಸಿ...
ದ್ವಿಚಕ್ರ ವಾಹನ ಡಿಕ್ಕಿ; ಪಾದಚಾರಿ ಸಾವು
ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಶೇಖರ ಬಂಗೇರ ಎ೦ಬವರು ಮೃತಪಟ್ಟ ಘಟನೆ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಬೆಳ್ತಂಗಡಿ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ, ದ್ವಿಚಕ್ರ ವಾಹನದಲ್ಲಿ ಅದರ ಸವಾರ ಮಿಥುನ್ ಎಂಬವರು ಅನುಷಾ ಎಂಬವರನ್ನು ಸಹಸವಾರೆಯನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ರಸ್ತೆ ದಾಟುತ್ತಿದ್ದ ಶೇಖರ ಬಂಗೇರ ಎಂಬವರಿಗೆ ಡಿಕ್ಕಿ ಹೊಡೆದಿದೆ....
ಮೀನುಗಾರರು ದೇಶದ ಜಲಸೈನಿಕರು: ಕ್ಯಾಪ್ಟನ್ ಬೃಜೇಶ್ ಚೌಟ
ಮಂಗಳೂರು: ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು ಮೀನುಗಾರ ಸಮುದಾಯದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು.
ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಪಕ್ಷದ...
ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ
ಸುಳ್ಯ: ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಚುನಾವಣಾ ಕಚೇರಿ ಶನಿವಾರ ಸುಳ್ಯ ಹಳೆ ಬಸ್ ನಿಲ್ದಾಣ ಸಮೀಪದ ಹಿಂದೂಸ್ಥಾನ್ ಸಿಟಿ ಡೆವಲಪರ್ಸ್ ನಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ವತೋಮುಖ ಅಭಿವೃದ್ಧಿಯೆಡೆಗೆ ಕೊಂಡೊಯ್ದಿರುವುದು ಕಾಂಗ್ರೆಸ್ ಲೋಕಸಭಾ ಸದಸ್ಯರ ಸಾಧನೆ. ನಂತರ ಅಧಿಕಾರ ಹಿಡಿಯಲೋಸುಗ ಜನರನ್ನು ದಾರಿ...
ಅಗಲ್ಪಾಡಿ ಯಾಗ: ರುದ್ರಹೋಮ ಪೂರ್ಣಾಹುತಿ
ಬದಿಯಡ್ಕ:ಕಾಸರಗೋಡು ಜಿಲ್ಲೆಯ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗದ ಪ್ರಯುಕ್ತ ಶುಕ್ರವಾರ ರುದ್ರಹೋಮ ಪೂರ್ಣಾಹುತಿ ನಡೆಯಿತು.ವಿಶೇಷ ದ್ರವ್ಯ ಕಲಶದ ಪ್ರಯುಕ್ತ ಬೆಳಗ್ಗೆ ಉಷ: ಪೂಜೆ, ದ್ರವ್ಯ ಕಲಶ ಅಭಿಷೇಕ ಮತ್ತು ಮಧ್ಯಾಹ್ನದ ಮಹಾಪೂಜೆ ಹಾಗೂ ಶ್ರೀ...







