ಮದ್ಯ ನಿಷೇಧ

0
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ...

ಎಸ್‍ಎಸ್‍ಎಲ್‍ಸಿ ಪರೀಕ್ಷೆ: 28,537 ವಿದ್ಯಾರ್ಥಿಗಳು ಹಾಜರು

0
ಮಂಗಳೂರು: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.25ರಂದು ಸೋಮವಾರ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 28,866 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 28,537 ವಿದ್ಯಾಥಿಗಳು ಹಾಜರಾಗಿದ್ದು, 329 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಗತ್ತಿನಲ್ಲಿ ಭಾರತ ನಂ.1 ಆಗಲು ಮತ್ತೆ ಮೋದಿ ಸರಕಾರ ಬರಬೇಕು: ಬಿಜೆಪಿ ಎಸ್‌ಸಿ ಮೋರ್ಚಾ ಪ್ರತಿಪಾದನೆ

0
ಮಂಗಳೂರು: ಕಳೆದ 10 ವರ್ಷಗಳ ಆಡಳಿತದಲ್ಲಿ ಭಾರತದ ಆಮೂಲಾಗ್ರ ಬದಲಾವಣೆ ಮತ್ತು ಅಭಿವೃದ್ಧಿಗೆ ಶ್ರಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಮತ್ತೊಮ್ಮೆ ಬರಬೇಕಿದೆ. ಮುಂದಿನ ನೂರಾರು ವರ್ಷಗಳ ಅಭಿವೃದ್ಧಿ ಹೊಂದಿದ ಭಾರತಕ್ಕೆ ಈಗ ಹಾಕಿರುವ ಬುನಾದಿಯನ್ನು ಗಟ್ಟಿಗೊಳಿಸಲು, ವಿಶ್ವದಲ್ಲಿ ಭಾರತದ ಸ್ಥಾನಮಾನಗಳನ್ನು ನಂಬರ್ 1 ಮಟ್ಟಕ್ಕೆ ಒಯ್ಯಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ. ಈ...

ಬೊಳ್ಳಿಮಲೆತ ಶಿವ ಶಕ್ತಿಲು ತುಳು ನಾಟಕದ ಸ್ವರ್ಣ ಸಂಭ್ರಮ

ಮ೦ಗಳೂರು: "ಬೊಳ್ಳಿಮಲೆತ ಶಿವಶಕ್ತಿಲು" ತುಳು ಪೌರಾಣಿಕ ನಾಟಕದ 55ನೇ ಪ್ರದರ್ಶನ "ಸ್ವರ್ಣ ಸಂಭ್ರಮ" ಮಾ. 29 ಶುಕ್ರವಾರ ಸಂಜೆ 6ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಜರಗಲಿದೆ. ಸ್ವರ್ಣ ಸಂಭ್ರಮದೊಂದಿಗೆ ವಜ್ರ ಮಹೋತ್ಸವದ ಪಥದಲ್ಲಿ ದಾಪುಗಾಲಿಡುತ್ತಿರುವ ಶುಭಾವಸರದಲ್ಲಿ ಕರ್ನಾಟಕ ಸರಕಾರದ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.ಕುದ್ರೋಳಿ ಶ್ರೀ ಭಗವತೀ ಯುವಜನ ಮಹಿಳಾ ಸೇವಾ...

ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್: : ರವಿಶಂಕರ ಮಿಜಾರು

0
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ. ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ...

ತಮಿಳಿನಲ್ಲಿ ಸದ್ದು ಮಾಡಲಿರುವ ಬಿಗ್ ಬಾಸ್ ರೂಪೇಶ್‌ ಶೆಟ್ಟಿ

ಮ೦ಗಳೂರು: ಕರಾವಳಿಯ ರೂಪೇಶ್‌ ಶೆಟ್ಟಿ ಗಡಿ ದಾಟಿ ಹೋಗಿ ಸಿನೆಮಾ ರಂಗದಲ್ಲಿ ಸಾಧನೆ ಮಾಡುತ್ತಿದ್ದು, ಅದಕ್ಕೆ ಈಗ ಅವರು ತಮಿಳಿನಲ್ಲಿ ನಟಿಸುವ ಅವಕಾಶ ಪಡೆದುಕೊಂಡಿರುವುದು ಹೊಸ ಸೇರ್ಪಡೆ. ಬಿಗ್‌ ಬಾಸ್‌ ವಿನ್ನರ್‌ ಆದ ಬಳಿಕ ಅವರ ವೃತ್ತಿ ಜೀವನ ಮತ್ತೊಂದು ಎತ್ತರಕ್ಕೆ ಹೋಗಿದೆ. ಅದಕ್ಕೂ ಮೊದಲು ಅವರು ಮಾಡಿರುವ ಸಾಧನೆ, ಗಳಿಸಿರುವ ಜನಪ್ರಿಯತೆಯಿಂದಲೇ ಅವರಿಗೆ...

ಡಾ.ಎಂ.ಮೋಹನ ಆಳ್ವ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.26 ರಂದು ಬೆಳಗ್ಗೆ 11.00ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಹಿರಿಯ ಪತ್ರಕರ್ತ ಯು.ವಿ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ...

ಇಪ್ಪತ್ತೈದು ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಆಯುಕ್ತ,ಬ್ರೋಕರ್

0
ಮಂಗಳೂರು:ಟಿ.ಡಿ.ಆರ್ ನೀಡಲು 25,00,000 ರೂ. (ಇಪ್ಪತ್ತೈದು ಲಕ್ಷ) ಲಂಚ ಬೇಡಿಕೆ ಇಟ್ಟಿದ್ದ ಮುಡಾ ಆಯುಕ್ತ ಮನ್ಸೂರ್ ಆಲಿ ಹಾಗೂ ಅವರ ಪರವಾಗಿ ಲಂಚದ ಹಣ ಸ್ವೀಕರಿಸುತ್ತಿದ್ದ ಬ್ರೋಕರ್ ಮಹಮ್ಮದ್ ಸಲಿಂ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬ೦ಧಿಸಿದ್ದಾರೆ. ಮಹಮ್ಮದ್ ಸಲಿಂ ದೂರುದಾರರು ಮಂಗಳೂರು ತಾಲೂಕು ಕುಡುಪು ಗ್ರಾಮದಲ್ಲಿ ಒಟ್ಟು 10.8 ಎಕ್ರೆ ಜಮೀನನ್ನು ಖರೀದಿಸಿದ್ದು, ಮಂಗಳೂರು ಮಹಾನಗರ...

ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ : 6 ಮಂದಿ ವಶಕ್ಕೆ

0
ಬೆಳ್ತಂಗಡಿ:ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಬೆಳ್ತಂಗಡಿಯ ಮೂವರನ್ನು ಹತ್ಯೆಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲುನಿವಾಸಿ ಸಿದ್ದಿಕ್(34) ಅವರು ಹನ್ನೊಂದು ದಿನಗಳ ಹಿಂದೆ ವ್ಯವಹಾರ ಸಂಬಂಧ ತುಮಕೂರಿಗೆ...

ಮಾ.25: ಕುಲಶೇಖರ ಹೋಲಿ ಕ್ರಾಸ್ ಚರ್ಚಿನಲ್ಲಿ “ಶಿಲುಬೆಯ ಹಾದಿ” ಕಾಯ೯ಕ್ರಮ

0
ಮಂಗಳೂರು: ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ.25 ರ ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಕಾರ್ಯಕ್ರಮ ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.ಮಂಗಳೂರಿನ...