ಕ್ಯಾನ್ಸರ್‌ ಮಹಾಮಾರಿ ತಡೆಗೆ ಜಾಗೃತಿ ಅಗತ್ಯ: ಡಾ. ರಂಜನ್‌ ಆರ್‌.ಕೆ.

0
ಮಂಗಳೂರು: ಕ್ಯಾನ್ಸರ್‌ ರೋಗವನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಯಾನ್ಸರ್‌ ಪೀಡಿತರು ಮರಣ ಹೊಂದುವುದನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿಸಮಾಜದಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಭಾರತೀಯ ವೈದ್ಯಕೀಯಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ರಂಜನ್‌ ಆರ್.‌ ಕೆ. ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ ಕ್ರಾಸ್‌ ಘಟಕ,...

ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನುಅಡಮಾನವಿರಿಸಿ ಸಾಲ ಪಡೆದು ವ೦ಚನೆ

0
ಉಪ್ಪಿನಂಗಡಿ : ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನುಅಡಮಾನವಿರಿಸಿ ಸಾಲ ಪಡೆದು ವ೦ಚನೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಒಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಜ. 31ರಂದು ಮಧ್ಯಾಹ್ನ ಆರೋಪಿಗಳಾದ ಸೆಬಾಸ್ಟಿಯನ್‌ ಮತ್ತು ಡಾನಿಶ್‌ ಅವರು ಸದ್ರಿ ಸಹಕಾರಿ ಸಂಘಕ್ಕೆ ಬಂದು, ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದಂತಹ ಒಟ್ಟು...

ಟೆರೇಸ್ ಗಾರ್ಡನಿಂಗ್ : ಉಚಿತ ಮಾಹಿತಿ ಶಿಬಿರ

0
ಮ೦ಗಳೂರು: ಆಮ್ ಆದ್ಮಿ ಪಕ್ಷ ದ.ಕ.ಜಿಲ್ಲಾ ಮಹಿಳಾ ಘಟಕದ ವತಿಯಿಂದ ಫೆಬ್ರವರಿ 10 ಶನಿವಾರದಂದು ಟೆರೇಸ್ ಗಾರ್ಡನಿಂಗ್ ವಿಷಯದಲ್ಲಿ ಉಚಿತ ಮಾಹಿತಿ ಶಿಬಿರವನ್ನು ಮಂಗಳೂರಿನ ಬಲ್ಮಠದಲ್ಲಿರುವ ಶಾಂತಿ ನಿಲಯ ಹಾಲ್ ನಲ್ಲಿ ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 12:30 ರವರೆಗೆ ಆಯೋಜಿಸಲಾಗಿದೆ. ಆಸಕ್ತರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದು.ಶಿಬಿರಾರ್ಥಿಗಳಿಗೆ ಹಣ್ಣಿನ ಗಿಡ ಹಾಗೂ ತರಕಾರಿ...

ತುಂಬೆಯಿ೦ದ ಸರಬರಾಜು ಆಗುವ ಕುಡಿಯುವ ನೀರು ಮುಖ್ಯ ಕೊಳವೆಗೆ ಮಾಡಿರುವ ಅನಧಿಕೃತ ಜೋಡಣೆ ತೆರವು

0
ಮಂಗಳೂರು:ತುಂಬೆಯಿ೦ದ ಸರಬರಾಜು ಆಗುವ ಕುಡಿಯುವ ನೀರು ಮುಖ್ಯ ಕೊಳವೆಗೆ ವಿವಿಧ ಪಂಚಾಯತ್‌ ವ್ಯಾಪ್ತಿಗಳಲ್ಲಿ ಮಾಡಿರುವ ಅನಧಿಕೃತ ಜೋಡಣೆಗಳ ತೆರವು ಕಾಯಾ೯ಚರಣೆ ಶನಿವಾರ ಜರಗಿತು.ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಪಂಪ್‌ ಮಾಡಲಾಗುವ ಕುಡಿಯುವ ನೀರನ್ನು ಪಂಚಾಯತ್‌ ವ್ಯಾಪ್ತಿ ಮೂಲಕ ಹಾದು ಹೋಗಿರುವ ಮುಖ್ಯ ಕೊಳವೆಯಿಂದ ವಿವಿಧ ಪಂಚಾಯತ್‌ ವ್ಯಾಪ್ತಿಗಳಲ್ಲಿ ಕಟ್ಟಡ ರಚನೆಗೆ, ವಾಣಿಜ್ಯ ಉದ್ದೇಶಕ್ಕೆ ಹಾಗೂ...

ಅರಣ್ಯ ಸಚಿವ ಈಶ್ವರ ಖಂಡ್ರೆ ಜಿಲ್ಲಾ ಪ್ರವಾಸ

0
ಮಂಗಳೂರು: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಫೆ. 4 ರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಫೆ. 4 ರ೦ದು ರಾತ್ರಿ 9:25 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ರಾತ್ರಿ 9.45ಕ್ಕೆ ಧರ್ಮಸ್ಥಳಕ್ಕೆ ತೆರಳಿ ವಾಸ್ತವ್ಯ.ಫೆ. 5 ಸೋಮವಾರ ಬೆಳಗ್ಗೆ 8- ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...

ಫೆ.16ರಿಂದ ತಣ್ಣೀರುಬಾವಿ ಬೀಚ್‍ನಲ್ಲಿ ತಪಸ್ಯ ಬೀಚ್ ಉತ್ಸವ, ಟ್ರಯತ್ಲಾನ್

0
ಮಂಗಳೂರು: ಫೆಬ್ರವರಿ 16 ರಿಂದ 18ರವರೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಮಂಗಳೂರು ಟ್ರಯತ್ಲಾನ್ ಮತ್ತು ತಪಸ್ಯ ಬೀಚ್ ಫೆಸ್ಟಿವಲ್ ಬಗ್ಗೆ ಸಭೆಯು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಮತ್ತು ಕ್ಯಾನ್ಸರ್ ರೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಪಸ್ಯ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಸಂಸ್ಥೆಯ ಟ್ರಸ್ಟಿ ಡಾ. ಆಶಾಜ್ಯೋತಿ...

ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ

0
ದಾವಣಗೆರೆ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್ ,ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ,ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋ ಗದೊಂದಿಗೆ ಕೊಲ್ಲಮೊಗರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲಾ...

ಬೆಳ್ಳಾರೆ ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

0
ಪುತ್ತೂರು :ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ.ಮುಕ್ವೆ, ನರಿಮೊಗರು ಗ್ರಾಮ ನಿವಾಸಿ ನೌಶಾದ್ ಬಿ .ಎ (36) ಮತ್ತು ಸುಲಿಗೆಗೆ ಸಹಕರಿಸಿದ ಉದ್ಯಾವರ, ಕಾಸರಗೋಡು, ಕೇರಳ ನಿವಾಸಿ ಚಂದ್ರಮೋಹನ್...

ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಡಾ.ಸಲೀಮುಲ್ಲಾ ಖಾನ್ ಆಯ್ಕೆ

0
ಮಂಗಳೂರು - ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಇವರನ್ನು ಕರ್ನಾಟಕಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಡಾ.ಸಲೀಮುಲ್ಲಾ ಖಾನ್ ಇವರನ್ನು 5ವರ್ಷಗಳ ಅವಧಿಗೆ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ...

ಹಿರಿಯರ ಕ್ರೀಡಾಕೂಟದಲ್ಲಿ 1 ಚಿನ್ನ, 2 ಬೆಳ್ಳಿ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

0
ಮಹಾನಗರ : ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕನಾ೯ಟಕ ಮಾಸ್ಟರ್ಸ್‌ ಆಥ್ಲೇಟಿಕ್ ಅಸೋಸಿಯೇಶನ್‌ ವತಿಯಿ೦ದ ಇತ್ತೀಚೆಗೆ ಜರಗಿದ 43ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಿಕರ್ನಕಟ್ಟೆ ಕಲಾಯಿಗುತ್ತು ಕೆ. ಜಗದೀಶ ಸೇಮಿತ ಅವರು 4೦೦ ಮೀ.ಓಟದಲ್ಲಿ ಚಿನ್ನ,5ಕಿ.ಮೀ. ವೇಗದ ನಡಿಗೆಯಲ್ಲಿ, ಗುಂಡು ಎಸೆತಗಳಲ್ಲಿ ಬೆಳ್ಳಿಪದಕಗಳನ್ನು ಪಡೆದಿದ್ದಾರೆ. ಫೆಬ್ರವರಿಯಲ್ಲಿ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.