ಷೇರ್ ಟ್ರೇಡಿಂಗ್ ನಲ್ಲಿ ಹೂಡಿಕೆ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ

0
ಬಂಟ್ವಾಳ:ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭದ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ನಿವಾಸಿ ಸುಬ್ರಾಯ ರಾಮ ಮಡಿವಾಳ (74) ಎಂಬವರ ಮೊಬೈಲ್ ಗೆ ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಕ್ಷಾ೦ತರ ರೂ.ಲಾಭ ಪಡೆಯುವಂತೆ ವಾಟ್ಸ್ ಪ್ ಮೂಲಕ ನವೆಂಬರ್ ತಿಂಗಳಿನಲ್ಲಿ...

ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚನೆ

0
ಉಪ್ಪಿನ೦ಗಡಿ: ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ನೆಲ್ಯಾಡಿ ಗ್ರಾಮದ ನಿವಾಸಿ ಸೆಭಾಸ್ಟಿಯನ್‌ ಮತ್ತು ಡಾನಿಶ್‌ ಎಂಬವರು ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, ಸಂಘದಿಂದ...

ಬಿಜೆಪಿಯ ಹಿರಿಯ ನಾಯಕರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಿದೆ :ವೇದವ್ಯಾಸ್ ಕಾಮತ್

0
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರ ತ್ಯಾಗ, ಪರಿಶ್ರಮದಿಂದ ಪಕ್ಷವು ಇಂದು ದೇಶದಾದ್ಯಂತ ಬಲಿಷ್ಠವಾಗಿ ಬೆಳೆದು ನಿಂತಿದ್ದು ಮಾತ್ರವಲ್ಲದೇ ಜಗತ್ತಿನಲ್ಲಿಯೇ ಅತಿ ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ. ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ...

ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ

0
ಮಂಗಳೂರು: ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ ((PLI),), ವಾರ್ಷಿಕ ಬೋನಸ್, ಸೇವಾ ಬೋನಸ್, ಕೆಫೆಟೇರಿಯಾ ಭತ್ಯೆಗಳನ್ನು ನೀಡಲಾಗುತ್ತದೆ. ಇಂಗ್ಲಿಷ್‌ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.ಅಭ್ಯರ್ಥಿಗಳನ್ನು ಆನ್‍ಲೈನ್ ಸಂದರ್ಶನ ಹಾಗೂ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳ...

ಮಂಗಳೂರಿನಿಂದ ಜೆಡ್ಡಾಗೆ ವಿಮಾನಯಾನ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಜೆಡ್ಡಾವನ್ನು ತನ್ನಎಂಟನೇ ಸಾಗರೋತ್ತರ ವಲಯವಾಗಿ ಸೇರಿಸಲು ಸಜ್ಜಾಗಿದೆ. ಏ.3ರಿಂದ ಪ್ರತಿ ಬುಧವಾರ ಕಾರ್ಯನಿರ್ವಹಿಸುವಸಾಪ್ತಾಹಿಕ ವಿಮಾನವನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಿಸಿದೆ. ಮಂಗಳೂರು-ಜೆಡ್ಡಾ ವಿಮಾನ ಮಧ್ಯಾಹ್ನ 2.50ಕ್ಕೆಮಂಗಳೂರಿನಿಂದ ಹೊರಟು ಸಂಜೆ 6.25ಕ್ಕೆ ಜೆಡ್ಡಾ ತಲುಪಲಿದೆ. ಐಎಕ್ಸ್ 498 ವಿಮಾನವು ಜೆಡ್ಡಾದಿಂದ ರಾತ್ರಿ 7.25ಕ್ಕೆ ಹೊರಟುಗುರುವಾರ...

ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ‌ ಅಧಿಕಾರಿಗಳ ಸಭೆ

0
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಹೇಳಿದ್ದಾರೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನರಿಂದ...

ಫೆ.4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ

ಮಂಗಳೂರು : ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಅವರ ಸಹಯೋಗದೊಂದಿಗೆ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆ. 4 ರಂದು ಆದಿತ್ಯವಾರ ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ. ಈ ಕಾರ‍್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು,...

ಖ್ಯಾತ ಸಾಹಿತಿ ಡಾ .ಜೆರಾಲ್ಡ್‌ ಪಿಂಟೊಗೆ ಕೊಂಕಣಿ ಲೇಖಕ್ ಸಂಘದ ಸಾಹಿತ್ಯ ಪ್ರಶಸ್ತಿ

ಮ೦ಗಳೂರು: 2024ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ. ಜೆರಾಲ್ಡ್‌ ಪಿಂಟೊ (ಜೆರಿ ನಿಡ್ಡೋಡಿ) ಅವರನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿಆರಂಭಗೊಂಡಿತು. 2022ರಲ್ಲಿ...

ಹೇರ್ ಕಟಿಂಗ್ ಶಾಪಿಗೆ ನುಗ್ಗಿ ಟಿವಿ ಕದ್ದಾತನ ಸೆರೆ

0
ಮೂಡುಬಿದಿರೆ:ಮೂಡುಬಿದಿರೆಯ ಹೇರ್ ಕಟಿಂಗ್ ಶಾಪ್‌ ವೊ೦ದಕ್ಕೆ ನುಗ್ಗಿ ಟಿವಿ ಕದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬ೦ಧಿಸಿದ್ದಾರೆ.ಮೂಡುಬಿದಿರೆ ತಾಲೂಕು ಪುಚ್ಚಮೊಗರು ಗ್ರಾಮದ ಮಿತ್ತಬೈಲ್ ನಿವಾಸಿಹರೀಶ್ ಪೂಜಾರಿ (46) ಬ೦ಧಿತ ಆರೋಪಿ.ಜ.8 ರ೦ದು ರಾತ್ರಿ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿರುವ ಹೇರ್ ಕಟಿಂಗ್ ಶಾಪ್‌ ವೊ೦ದಕ್ಕೆ ಯಾರೋ ಕಳ್ಳರು ಅಂಗಡಿಯ ಹಿಂದಿನ ಗೋಡೆಯಲ್ಲಿ ಕನ್ನ ಕೊರೆದು ಒಳಗೆ ಪ್ರವೇಶಿಸಿ...

ಜ.26ರಂದು ಜಿಲ್ಲಾಮಟ್ಟದ ಗಣರಾಜ್ಯೋತ್ಸವ

0
ಮಂಗಳೂರು:ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜ.26ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು.ಕಾರ್ಯಕ್ರಮದ...