ಜ.22:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವ್ಯಾಪಕ ಬಂದೋಬಸ್ತ್
ಮಂಗಳೂರು : ಜ.22:ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು ಕೈಗೊಳ್ಳಲಾಗಿದೆ ಎ೦ದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ..ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ...
ಸಣ್ಣ ಕೈಗಾರಿಕೆಗಳು ಸಕಾಲದಲ್ಲಿ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ
ಕಿರು ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಉದ್ಯಮ ರಂಗ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.ಅವರು ಶನಿವಾರ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತು ಕಾರ್ಯಕ್ರಮವನ್ನು...
ಬಸ್ ನಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನದ ಚೈನ್ ಕಳವು
ಪುತ್ತೂರು:ಪುತ್ತೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋವ೯ರ ಗಮನ ಬೇರೆಡೆಗೆ ಸೆಳೆದು ಚಿನ್ನದ ಚೈನ್ ಕಳವು ಮಾಡಿರುವ ಘಟನೆ ನಡೆದಿದೆ.ಪುತ್ತೂರು ನಿವಾಸಿ ಜಯರಾಮ ಭಟ್ ಪಿ ಎಂಬವರು ಶುಕ್ರವಾರ ಮಧ್ಯಾಹ್ನ ಮಂಗಳೂರಿನ ಜುವೆಲ್ಲರಿ ಒಂದರಲ್ಲಿ 1,60,436 ರೂ. ಮೌಲ್ಯದ 23.970 ಗ್ರಾಂ ಚಿನ್ನ ಚೈನ್ ಖರೀದಿಸಿದ್ದರು. ಚಿನ್ನದ ಚೈನ್ ನ್ನು ಬ್ಯಾಗ್ ನಲ್ಲಿರಿಸಿ ಕೆ ಎಸ್...
ಜಿಪಿಎಲ್ ಉತ್ಸವ್ ಕ್ರಿಕೆಟ್ ಪಂದ್ಯಾವಳಿ : ಗೋವಾದ ಕಡಲ ಮಡಿಲಲ್ಲಿ ಜೆರ್ಸಿ ಲಾಂಚ್!
ಮಂಗಳೂರು: ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವಎಂಟನೇ ವರ್ಷದ ಜಿಪಿಎಲ್ ಉತ್ಸವ್ 2024 ಇದರ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿ ಲಾಂಚ್ ಕಾರ್ಯಕ್ರಮ ಶನಿವಾರ ನಡೆಯಿತು. ಗೋವಾದ ರಾಜಧಾನಿ ಪಣಜಿಯ ಕಡಲಲ್ಲಿ ಖಾಸಗಿ ನೌಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್...
ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಬಿಡುಗಡೆ
ಮಂಗಳೂರು: ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದೆ.ಖ್ಯಾತ ನಟ ಡಾಲಿ ಧನಂಜಯ ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ರವಿಕೆ ಅಂದರೆ...
ರೋಹನ್ ಕ್ರಿಯೇಟರ್ಸ್ ಮೀಟ್ 2024
ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿ೦ದ ರೋಹನ್ ಕ್ರಿಯೇಟರ್ಸ್ ಮೀಟ್ 2024 ಜ. 20ರ೦ದು ಎಜೆ ಬ್ರ್ಯಾಂಡ್ ಹೋಟೆಲ್ನಲ್ಲಿ ಜರಗಿತು.ಕಂಟೆಂಟ್ ರಚನಕಾರರು, ಬ್ಲಾಗರ್ಗಳು, ಛಾಯಾಗ್ರಾಹಕರು, ವಿಡಿಯೋಗ್ರಾಹಕರು, ಸಂಗೀತಕಾರರು ಮತ್ತು ಇತರರು ಸೇರಿದ೦ತೆ 50ಕ್ಕೂ ಹೆಚ್ಚು ಉತ್ಸಾಹದಿಂದ ಕೂಡಿದ ಪರಿಣತಿ ಮತ್ತು ಸೃಜನಶೀಲತೆಯನ್ನು ಉಜ್ಜಿವಿಸಲು ಒಂದೇ ಸೂರಿನಡಿ ಸೇರಿದ್ದರು.ಶರಣ್ ಚಿಲಿಂಬಿ, ಪ್ರಜ್ವಲ್ ಶೆಟ್ಟಿ, ಮೋಕ್ಷಿತ್ ಪೂಜಾರಿ, ಸಾಹಿಲ್...
ಮಂಗಳೂರು ಲಿಟ್ ಫೆಸ್ಟ್ ಉದ್ಘಾಟನೆ
ಮಂಗಳೂರು:ಯಾವುದು ಘೋರವನ್ನು ಸೃಷ್ಟಿಸುತ್ತದೋ, ಅದೇ ಶಾಂತಿಯನ್ನು ಸೃಷ್ಟಿಸುತ್ತದೆ ಎನ್ನುವುದು ವೇದಗಳ ಮಾತು. ಈ ಮಾತು ಈವತ್ತಿಗೂ ಪ್ರಸ್ತುತ. ನಮ್ಮನ್ನು ಆಳುತ್ತಿರುವುದು ಬೇರೆ ಯಾವುದೂ ಅಲ್ಲ. ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ. ಇವುಗಳಿಂದಲೇ ಘೋರ ಮತ್ತು ಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹಿರಿಯ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಲಕ್ಷ್ಮೀಶ ತೋಳ್ಪಾಡಿ...
ಆಟೋ ರಿಕ್ಷಾದಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯ ಬ೦ಧನ
ಮಂಗಳೂರು: ಆಟೋ ರಿಕ್ಷಾದಲ್ಲಿಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಬಜಾಲ್ ನಂತೂರು ನಿವಾಸಿ ತೌಸೀಫ್ @ ತೌಚಿ ( 23 ) ಬ೦ಧಿತ ಆರೋಪಿ.
ಮಂಗಳೂರು ನಗರ ಪಳ್ನೀರು ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು...
ವಿಂಗ್ಸ್ ಇಂಡಿಯಾ 2024 ರಲ್ಲಿ ಎಂಐಎಗೆ ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ) ರಾಷ್ಟ್ರೀಯ ಮಾನ್ಯತೆ ಪಡೆದಿದೆ. ಏಷ್ಯಾದ ಅತಿದೊಡ್ಡ ನಾಗರಿಕ ವಿಮಾನಯಾನ ಪ್ರದರ್ಶನವಾದ ವಿಂಗ್ಸ್ ಇಂಡಿಯಾ 2024 ರಲ್ಲಿ 5 ಮಿಲಿಯನ್ ಗಿಂತ ಕಡಿಮೆ ಪ್ರಯಾಣಿಕರ ವಿಭಾಗದಲ್ಲಿ ಈ ವಿಮಾನನಿಲ್ದಾಣವನ್ನು ಅತ್ಯುತ್ತಮ ವಿಮಾನ ನಿಲ್ದಾಣವೆಂದು ಆಯ್ಕೆ ಮಾಡಲಾಗಿದೆ.
ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ, ಭಾರತೀಯವಿಮಾನ ನಿಲ್ದಾಣ ಪ್ರಾಧಿಕಾರ...
ಜಿಲ್ಲಾ ಮಟ್ಟದ ಯುವಜನ ಮೇಳ
ಮಂಗಳೂರು; ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಜ.20 ಹಾಗೂ 21ರಂದು...






