ಜಿಲ್ಲಾ ಕಾಂಗ್ರೆಸ್ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆ
ಮ೦ಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಮಾರ್ಚ್ 9ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 9 ರಂದು ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ...
ಜನಪ್ರತಿನಿಧಿಗಳು, ಅಧಿಕಾರಿಗಳೊ೦ದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ
ಮ೦ಗಳೂರು: ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸರ್ಕಿಟ್ ಹೌಸ್ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿರುವ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು...
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರ
ಮಂಗಳೂರು:ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ “ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವನ್ನು ಓದಿಸಿ” ಯೋಜನೆಯಡಿ ತಾಲೂಕು ಮಟ್ಟದ ಹಾಗೂ ಕ್ಷೇತ್ರಮಟ್ಟದ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧ...
ಫೆ.12ರಂದು ಮೆಸ್ಕಾಂ ಸಾರ್ವಜನಿಕ ವಿಚಾರಣೆ
ಮಂಗಳೂರು: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ, ವಿದ್ಯುಚ್ಛಕ್ತಿ ದರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ವಿಚಾರಣೆ ಫೆ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಿಜೈ ನ ಮೆಸ್ಕಾಂ ಭವನದಲ್ಲಿರುವ, ಮೆಸ್ಕಾಂ ಕಾಪೊ೯ರೇಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಆಯೋಗದ ಅಧ್ಯಕ್ಷ ಪಿ. ರವಿಕುಮಾರ್ ಹಾಗೂ ಸದಸ್ಯ ಎಮ್.ಡಿ. ರವಿ ಭಾಗವಹಿಸುವರು ಎಂದು ಮೆಸ್ಕಾಂ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮಿಷಾ ಶೆಣೈಯವರಿ೦ದ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದಶ೯ನ
ಮ೦ಗಳೂರು: ಮಂಗಳೂರಿನ ಕೆನರಾ ಹೈಸ್ಕೂಲಿನ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಮಿಷಾ ಶೆಣೈ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಫೆಬ್ರವರಿ 7 ರಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರ ನೇತೃತ್ವದಲ್ಲಿ ನಡೆದ ಮಂಡಲೋತ್ಸವದ ಅಷ್ಟಾವಧಾನ ಸೇವೆಯಲ್ಲಿ ಭರತನಾಟ್ಯವನ್ನು ಪ್ರದರ್ಶಿಸಿದರು.ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಸುತ್ತು ಉತ್ಸವದ ಬಳಿಕ ದೇವಳದ ಆವರಣದಲ್ಲಿಯೇ ನಿಮಿಷಾ ಶೆಣೈ...
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು:ಒಟ್ಟು 110 ರ್ಯಾಂಕ್ ಗಳು
ಮ೦ಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಸೆ. 2018ರಿಂದ ಜೂನ್ 2022ರವರೆಗೆ ನಡೆಸಿರುವ ಹೋಮಿಯೋಪಥಿ ವೈದ್ಯಕೀಯ ವಿಭಾಗದ ಪರೀಕ್ಷೆಗಳಲ್ಲಿ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪದವಿಪೂರ್ವ ವಿದ್ಯಾರ್ಥಿಗಳು (ಬಿ.ಎಚ್.ಎಮ್.ಎಸ್ 2017-18) 10 ರ್ಯಾಂಕ್ಗಳಲ್ಲಿ 7 ರ್ಯಾಂಕ್ ಗಳಿಸುವ ಮೂಲಕ ಸ್ಥಿರ ಮತ್ತು ದಕ್ಷ ಪರಿಶ್ರಮವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಕೋರ್ಸ್ವಾರು...
ಫೆ.10: ಪತ್ರಕರ್ತರ 5 ನೆ ಗ್ರಾಮ ವಾಸ್ತವ್ಯ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ)ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲ ಮೊಗರು ಗ್ರಾಮ ಪಂಚಾಯತ್,ವಿಜಯ ಗ್ರಾಮೀಣಾ ಭಿವೃದ್ಧಿ...
ಕೊಚಿಮಲ್ ನೇಮಕಾತಿಯಲ್ಲಿ ಅಕ್ರಮ : ಮಂಗಳೂರು ವಿವಿ ಪಾತ್ರದ ಬಗ್ಗೆ ಸಮಗ್ರ ತನಿಖೆ: ಶಾಸಕ ಕಾಮತ್ ಆಗ್ರಹ
ಮಂಗಳೂರು: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.
ಕೊಚಿಮುಲ್...
ಎನ್.ಎಸ್.ಯು.ಐ. ನಿ೦ದ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನ
ಮಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೋರುತ್ತಿರುವ ತಾರತಮ್ಯ ಧೋರಣೆ ಖಂಡಿಸಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವಾ ಬಳಿ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ...







