ಫೆ. 25ರಂದು ಲಿಖಿತಾ ಪರೀಕ್ಷೆ: ಸೂಚನೆ
ಮಂಗಳೂರು : 2022-23ನೇ ಸಾಲಿನ ಪೋಲೀಸ್ ಕಾನ್ ಸ್ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ, ಹಾಗೂ ಸೇವಾನಿರತ ಮತ್ತು ಬ್ಯಾಕ್ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆ. 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ...
ಫೆ.26ಹಾಗೂ 27ರಂದು ಬೃಹತ್ ಉದ್ಯೋಗ ಮೇಳ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಹಾಗೂ 27 ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ,...
ಬ್ಯಾಂಕ್ ಗಳ ಸುರಕ್ಷತೆ: ಮುಖ್ಯಸ್ಥರ ಜತೆ ಪೊಲೀಸ್ ಅಧೀಕ್ಷಕರ ಸಭೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ, ಜ.13 ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಅವರ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರು ಗಳೊಂದಿಗೆ ಸಭೆಯನ್ನು ನಡೆಸಲಾಯಿತು.
ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯಲ್ಲಿ ನೀಡಲಾಗಿರುವ...
ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ
ಮ೦ಗಳೂರು: ಧರ್ಮ ಸೂಕ್ಷ್ಮತೆಯನ್ನು ಮರೆತು ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮುಗ್ಧ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿದ ಶಿಕ್ಷಕಿಯ ನಡೆ ಖಂಡನೀಯವಾಗಿದ್ದು, ಘಟನೆ ತೀವ್ರ ಸ್ವರೂಪ ಪಡೆದಿದ್ದರೂ ಸಂತ ಜೆರೋಸಾ ಶಿಕ್ಷಣ ಸಂಸ್ಥೆ ಇಂತಹ ಶಿಕ್ಷಕಿಯನ್ನು ರಕ್ಷಿಸಲು ಯತ್ನಿಸಿದ್ದು ಅತ್ಯಂತ ಹೇಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು...
ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಮತ್ತು ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ...
ಪಯಣ್ʼ ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಟೈಟಲ್ ಅನಾವರಣ
ಮ೦ಗಳೂರು: ಕಳೆದ 55 ವರ್ಷಗಳಿಂದ ದೇಶ-ವಿದೇಶಗಳಲ್ಲಿ 110ಕ್ಕೂ ಮಿಕ್ಕಿ ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿ, ಕೊಂಕಣಿ ಜನರ ಮನೆ ಮಾತಾಗಿರುವ ಹೆಸರಾಂತ ಗಾಯಕ, ಗೀತೆ ರಚನೆಗಾರ ಮೆಲ್ವಿನ್ ಪೆರಿಸ್ರವರ ಚೊಚ್ಚಲ ಕೊಂಕಣಿಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಮುಹೂರ್ತವು ಫೆಬ್ರವರಿ 11ರಂದು ಕುಲಶೇಖರಚರ್ಚಿನ ಮಿನಿ ಸಭಾಂಗಣದಲ್ಲಿ ನೆರವೇರಿತು.ʻಸಂಗೀತ್ ಘರ್ ಪ್ರೊಡಕ್ಶನ್ಸ್ʼ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುವ ಈ ಚಲನಚಿತ್ರದ...
ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ
ಮ೦ಗಳೂರು: ಫೆ.17 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರವಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ಭಾಗವಹಿಸಿ ನಾಯಕರನ್ನುದ್ದೇಶಿಸಿಮಾತನಾಡಿ, ಫೆ.17 ರಂದು ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ...
ಪಣಂಬೂರು ಪೋಲಿಸ್ ಜನಸಂಪರ್ಕ ಸಭೆ
ಪಣಂಬೂರು : ಪಣಂಬೂರು ಪೋಲೀಸ್ ಠಾಣೆ ವತಿಯಿಂದ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮತ್ತು ವಾಹನ ಸವಾರರು ಪಾಲಿಸಬೇಕಾದ ನಿಯಮಗಳ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಬೆಂಗರೆ ಕಸಬಾ ಮದ್ರಸ ಸಭಾಂಗಣದಲ್ಲಿ ನಡೆಯಿತು.ಪಣಂಬೂರು ಪೋಲಿಸ್ ನಿರೀಕ್ಷಕರಾದ ಮುಹಮ್ಮದ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಪಣಂಬೂರು ಪೊಲೀಸರು ಕಸಬಾ ಬೆಂಗ್ರೆಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು....
ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯ:ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಗ್ರಾಮಸ್ಥರಿಂದ ಸಂವಾದ
ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಷಃ ಅರಣ್ಯ ಸಮಸ್ಯೆ ಸೇರಿ ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ...
ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ:ಸಮಿತಿ ಸಭೆ
ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಮಾವೇಶದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಮಿತಿಯ ಸಭೆ ನಡೆಯಿತು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ...








